ಕೋವಿಡ್ ಭಯದೊಂದಿಗೆ ಡೆಂಘೀ ಆತಂಕ ಶುರು!
ಗ್ರಾಮಾಂತರ ಜನರಲ್ಲಿ ಕಾಣಿಸಿಕೊಂಡಿದೆ ಶೀತ-ನೆಗಡಿ-ತಲೆ ನೋವು-ಮೈಕೈ ನೋವು
Team Udayavani, Jun 4, 2021, 9:56 PM IST
ವರದಿ: ಕೆ.ದಿನೇಶ ಗಾಂವ್ಕರ
ಕುಮಟಾ: ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರ ಜೊತೆಗೆ ಡೆಂಘೀ ಭಯವೂ ಗ್ರಾಮೀಣ ಜನರನ್ನು ಕಾಡಲಾರಂಭಿಸಿದೆ. ಅಳಕೋಡ ಗ್ರಾಪಂ ವ್ಯಾಪ್ತಿಯ ಯಾಣ, ಸಂಡಳ್ಳಿ, ಮತ್ತಳ್ಳಿ ಹಾಗೂ ಬೆಳ್ಳಂಗಿ ಮುಂತಾದ ಗ್ರಾಮೀಣ ಭಾಗಗಳಲ್ಲಿ ಇದೀಗ ಡೆಂಘೀ ಜ್ವರದ ಶಂಕೆ ವ್ಯಕ್ತವಾಗುತ್ತಿದ್ದು, ಇದರಿಂದ ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ.
ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ಜನತೆ ಅತೀವ ಸಂಕಷ್ಟದಲ್ಲಿದ್ದಾರೆ. ಸದ್ಯ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಅನುಸರಿಸಿರುವುದರಿಂದ ಹಾಗೂ ಜನರಲ್ಲಿ ಜಾಗೃತಿ ಮೂಡಿರುವುದರಿಂದ ಸೋಂಕಿತರ ಸಂಖ್ಯೆ ಸ್ವಲ್ಪ ಇಳಿಮುಖವಾಗತೊಡಗಿದೆ. ಈ ಮಧ್ಯೆ ಡೆಂಘೀ ಭೀತಿ ಕಾಡಲಾರಂಭಿಸಿದೆ.
ಅಳಕೋಡ ಗ್ರಾಪಂ ವ್ಯಾಪ್ತಿಯ ಮತ್ತಳ್ಳಿ, ಸಂಡಳ್ಳಿ, ಯಾಣ ಹಾಗೂ ಬೆಳ್ಳಂಗಿ ಮುಂತಾದ ಗ್ರಾಮೀಣ ಭಾಗಗಳಲ್ಲಿ ಡೆಂಘೀ ಜ್ವರದ ಶಂಕೆ ವ್ಯಕ್ತವಾಗುತ್ತಿದ್ದು, ಸ್ಥಳೀಯ ಹಲವರಲ್ಲಿ ಜ್ವರ, ಶೀತ, ಸ್ನಾಯು ಬಿಗಿತ, ತಲೆ ನೋವು, ಮೈಕೈ ನೋವು ಸೇರಿದಂತೆ ಡೆಂಘೀ ಲಕ್ಷಣಗಳು ಕಂಡುಬರುತ್ತಿದೆ. ಇದರಿಂದ ಆತಂಕ ಸೃಷ್ಟಿಯಾಗಿದೆ. ಈ ಬಗ್ಗೆ ಟಿಎಚ್ಒ ಆಜ್ಞಾ ನಾಯಕ ಪ್ರತಿಕ್ರಿಯಿಸಿ, ಜನತೆಯಲ್ಲಿ ಶೀತ, ಸ್ನಾಯು ಬಿಗಿತ, ತಲೆ ನೋವು, ಮೈಕೈ ನೋವು ಕಂಡು ಬಂದಿರುವುದು ಸತ್ಯ. ಆದರೆ ಜ್ವರದ ಲಕ್ಷಣವಿಲ್ಲ. ಇವೆಲ್ಲವೂ ಕೊರೊನಾ ಲಕ್ಷಣವೂ ಆಗಿದೆ. ಆದ್ದರಿಂದ ಈ ಭಾಗದ ಹಲವು ಜನರನ್ನು ಟಾಸ್ಕ್ಫೋರ್ಸ್ ಹಾಗೂ ಪೊಲೀಸರ ಸಹಕಾರದೊಂದಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದೇವೆ. ವರದಿಯಲ್ಲಿ ಕೊರೊನಾ ನೆಗೆಟಿವ್ ಇದ್ದಲ್ಲಿ ಮುಂದಿನ ಪರೀಕ್ಷೆ ನಡೆಸಿ, ಡೆಂಘೀ ಜ್ವರಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ