ನಿರ್ಬಂಧ ಸಡಿಲಿಕೆ ಹಿನ್ನೆಲೆ ಕಿಷ್ಕಿಂದಾ ಅಂಜನಾದ್ರಿ ಗೆ ಭಕ್ತರ ದಂಡು
Team Udayavani, Jul 5, 2021, 8:43 PM IST
ಗಂಗಾವತಿ: ಕೊರೊನಾ ಮಹಾಮಾರಿ ಹಿನ್ನೆಲೆಯಲ್ಲಿ ಇದುವರೆಗೂ ಬಂದ್ ಆಗಿದ್ದ ತಾಲ್ಲೂಕಿನ ಕಿಷ್ಕಿಂದಾ ಅಂಜನಾದ್ರಿ, ಪಂಪಾ ಸರೋವರ, ಋಷ್ಯ ಮುಖ, ಆದಿಶಕ್ತಿ ದೇಗುಲ, ನವ ವೃಂದಾವನ,ಚಿಂತಾಮಣಿ ಪ್ರವಾಸಿ ತಾಣಗಳು ಇಂದು ಭಕ್ತರಿಂದ ಕೂಡಿದ್ದವು.
ಕಳೆದ ಮಾರ್ಚ್ 23 ರಿಂದ ಲಾಗ್ ಡೌನ್ ಹಿನ್ನೆಲೆಯಲ್ಲಿ ಈ ಎಲ್ಲಾ ದೇಗುಲಗಳ ಬಾಗಿಲುಗಳನ್ನ ಮುಚ್ಚಲಾಗಿತ್ತು ಪ್ರತಿನಿತ್ಯ ಅರ್ಚಕರು ಮಾತ್ರ ಪೂಜಾ ವಿಧಾನಗಳನ್ನು ನೆರವೇರಿಸುತ್ತಿದ್ದರು. ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಇದರಿಂದ ದೇಗುಲಗಳು ಭಣ ಗುಡುತ್ತಿದ್ದವು.
ದೇಗುಲಗಳ ಬಾಗಿಲು ಬಂದ್ ಆಗಿದ್ದರಿಂದ ಆನೆಗೊಂದಿ ಭಾಗದ ಪ್ರವಾಸೋದ್ಯಮಕ್ಕೆ ದೊಡ್ಡ ಪೆಟ್ಟು ಬಿದ್ದಂತಾಗಿತ್ತು. ಇದರಿಂದ ಸ್ಥಳೀಯ ಜನರು ವ್ಯಾಪಾರ ವಹಿವಾಟು ಉದ್ಯೋಗವಿಲ್ಲದೆ ಕಷ್ಟಪಟ್ಟಿದ್ದರು. ಸೋಮವಾರದಿಂದ ಸರ್ಕಾರದ ಸೂಚನೆಯಂತೆ ಎಲ್ಲಾ ದೇಗುಲಗಳ ಬಾಗಿಲು ತೆಗೆಯ ಲಾಗಿದ್ದು ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗಿದೆ.
ಇದನ್ನೂ ಓದಿ :750 ಆಮ್ಲಜನಕ ಸಾಂದ್ರಕ ನೀಡಿದ ಗೀವ್ ಇಂಡಿಯಾ : ಸಿಎಂ, ಡಿಸಿಎಂಗೆ ಹಸ್ತಾಂತರ
ಪ್ರಸಾದ ಅನ್ನಪ್ರಸಾದ ಸೇರಿದಂತೆ ಯಾವುದೇ ವಸ್ತುವನ್ನು ಅರ್ಚಕರು ಭಕ್ತರಿಗೆ ನೀಡದಂತೆ ನಿರ್ಬಂಧದಲ್ಲಿ ಸೂಚನೆ ನೀಡಲಾಗಿದೆ.ಕಡ್ಡಾಯವಾಗಿ ಸಾಮಾಜಿಕ ಅಂತರ ಮಾಸ್ಕ್ ಧರಿಸುವುದು ಸೇರಿದಂತೆ ಕೊರೋನಾ ಮಾರ್ಗಸೂಚಿಯನ್ನ ಭಕ್ತರು ದೇಗುಲಗಳಲ್ಲಿ ಅನುಸರಿಸಬೇಕಾಗಿದೆ .ಕಿಷ್ಕಿಂದಾ ಅಂಜನಾದ್ರಿ ಯಲ್ಲಿ ದೇಗುಲ ಸಮಿತಿಯವರು ತಳಿರು ತೋರಣಗಳಿಂದ ದೇಗುಲವನ್ನ ಮತ್ತು ಬೆಟ್ಟದ ಮೆಟ್ಟಿಲುಗಳನ್ನು ಅಲಂಕಾರ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ