ದಾಖಲೆಗಳ ಭದ್ರತೆಗೆ ರಾಜ್ಯದಲ್ಲಿ ʼಶೈಕ್ಷಣಿಕ ಡಿಜಿ ಲಾಕರ್ʼ ವ್ಯವಸ್ಥೆಗೆ ಚಿಂತನೆ; ಡಿಸಿಎಂ
Team Udayavani, Jan 6, 2021, 6:03 PM IST
ಬೆಂಗಳೂರು: ಎಸ್ಎಸ್ಎಲ್ಸಿಯಿಂದ ಮೊದಲುಗೊಂಡು ಉನ್ನತ ಶಿಕ್ಷಣದ ಕೊನೆ ಹಂತದವರೆಗೂ ವಿದ್ಯಾರ್ಥಿಗಳ ಸಮಗ್ರ ಶೈಕ್ಷಣಿಕ ದಾಖಲೆಗಳನ್ನು ಡಿಜಿ ಲಾಕರ್ನಲ್ಲಿ ಭದ್ರವಾಗಿರಿಸುವ ಮಹತ್ವದ ಕಾರ್ಯಕ್ರಮ ಜಾರಿಗೆ ತರಲು ಉನ್ನತ ಶಿಕ್ಷಣ ಸಚಿವರೂ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮುಂದಾಗಿದ್ದಾರೆ.
ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಗಾರದ ಕೇಂದ್ರ ಮಟ್ಟದ ಅಧಿಕಾರಿಗಳು ಹಾಗೂ ರಾಜ್ಯದ ಶಿಕ್ಷಣ ಇಲಾಖೆಯ ವಿವಿಧ ಹಂತದ ಉನ್ನತ ಅಧಿಕಾರಿಗಳ ಜತೆ ಉನ್ನತ ಮಟ್ಟದ ಸಭೆ ನಡೆಸಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಯಾರೂ ದಾಖಲೆಗಳು ಕಳೆದುಹೋಗುತ್ತವೆ ಎಂದು ಭಯಪಡಬೇಕಿಲ್ಲ ಹಾಗೂ ತಮ್ಮ ದಾಖಲೆಗಳು ನಕಲಿಯಾಗುತ್ತವೆ ಎಂಬ ಆತಂಕವೂ ಇರುವುದಿಲ್ಲ ಎಂದರು.
ಮುಂದಿನ ದಿನಗಳಲ್ಲಿ ಕಾಗದ ರೂಪದ ಯಾವುದೇ ಶೈಕ್ಷಣಿಕ ದಾಖಲೆಗಳಿಗೆ ಅವಕಾಶ ಇರುವುದಿಲ್ಲ, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ʼಶೈಕ್ಷಣಿಕ ಡಿಜಿ ಲಾಕರ್ʼ ವ್ಯವಸ್ಥೆ ರಾಜ್ಯದಲ್ಲಿ ಜಾರಿಗೆ ಬರುತ್ತದೆ. ಈ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ದಾಖಲೆಗಳು ಸುರಕ್ಷಿತವಾಗಿರುತ್ತವೆ ಎಂದ ಅವರು ರಾಜ್ಯದ ಶೈಕ್ಷಣಿಕ ಕ್ಷೇತ್ರವನ್ನು ಡಿಜಿಟಲ್ನತ್ತ ಕೊಂಡೊಯ್ಯುವ ಇನ್ನೊಂದು ಮಹತ್ವದ ಹೆಜ್ಜೆ ಎಂದಿದ್ದಾರೆ.
ಇದನ್ನೂ ಓದಿ:ಹಕ್ಕಿ ಜ್ವರ : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹೈ ಅಲರ್ಟ್ : ಸಚಿವ ಪ್ರಭು ಚವ್ಹಾಣ್ ಸೂಚನೆ
ಏನಿದು ಶೈಕ್ಷಣಿಕ ಡಿಜಿ ಲಾಕರ್?
ಇದು ವಿದ್ಯಾರ್ಥಿಗಳ ಎಲ್ಲ ಶೈಕ್ಷಣಿಕ ದಾಖಲೆಗಳನ್ನು ಸುರಕ್ಷಿತವಾಗಿ ಸಂಗ್ರಹ ಮಾಡುವ ವ್ಯವಸ್ಥೆ. ಇದಕ್ಕೆ ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಗಾರ (National Academic Depository-NAD) ಎಂದು ಕರೆಯಲಾಗುತ್ತದೆ.
ಶೈಕ್ಷಣಿಕ ಡಿಜಿ ಲಾಕರ್ ಆಕ್ಸಸ್ ಹೇಗೆ?
ಅಂದಹಾಗೆ ಈ ಲಾಕರ್ನ ಪ್ರವೇಶ ಸುಲಭ. ಪ್ರತಿ ವಿದ್ಯಾರ್ಥಿಯೂ ತನ್ನ ಆಧಾರ್ ಸಂಖ್ಯೆ ಮೂಲಕ National Academic Depository-NAD ಪೋರ್ಟಲ್ಗೆ ನೋಂದಣಿ ಮಾಡಿಕೊಳ್ಳಬಹುದು. ಅದರಲ್ಲಿ ತನ್ನ ಇ-ಕೆವೈಸಿಯನ್ನು ತುಂಬಿ ಅಪ್ಲೋಡ್ ಮಾಡಿದ ನಂತರ ತನ್ನೆಲ್ಲ ದಾಖಲೆಗಳನ್ನು ಯಾವುದೇ ವಿದ್ಯಾರ್ಥಿಯೂ ಆಕ್ಸೆಸ್ ಮಾಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ