ಮುಂದಿನ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ಏಳಕ್ಕೆ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ


Team Udayavani, Mar 13, 2021, 8:26 PM IST

ಮುಂದಿನ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ಏಳಕ್ಕೆ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ

ಶಿವಮೊಗ್ಗ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ಏಳಕ್ಕೆ ಏಳು ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಶಾಸಕರು ಗೆಲ್ಲಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಶಿವಮೊಗ್ಗದಲ್ಲಿ‌ ನಡೆಯುತ್ತಿರುವ ಜನಾಕ್ರೋಶ ಪ್ರತಿಭಟನಾ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು ಇಂದು ಶಿವಮೊಗ್ಗದಲ್ಲಿ‌ ನಡೆಯುತ್ತಿರುವ ಸಭೆ ರಾಜ್ಯ ರಾಜಕಾರಣದ ಬದಲಾವಣೆಯ ಸಭೆ.ಇದು ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರ ರಕ್ಷಣೆಗಾಗಿ ನಡೆಯುವ ಸಭೆ ಎಂದಿದ್ದಾರೆ.

ಬಿಜೆಪಿಯವರು ನನ್ನ ಮೇಲೆ ಇಡಿ‌ ಕೇಸ್ ಹಾಕಿಸಿ ಬಂದನವಾಗುವಂತೆ ಮಾಡಿದ್ದರು. ನನ್ನ ಮೇಲೆ ಇಡಿ, ಐಟಿ, ಬೇನಾಮಿ ಆಸ್ತಿ, ಸಿಬಿಐ ಕೇಸ್ ಹಾಕಿಸಿ‌ ನನ್ನನ್ನು ಬಂಧಿಸಿದಾಗ ಮೊದಲು ಹೋರಾಟ ಆರಂಭಿಸಿದ ಜನ ಶಿವಮೊಗ್ಗದವರು. ಇದಕ್ಕಾಗಿಯೇ ನನಗೆ ಶಿವಮೊಗ್ಗ ಮೇಲೆ ವಿಶೇಷ ಪ್ರೀತಿ ಹಾಗೂ ಗೌರವ ಎಂದು ಹೇಳಿದ ಅವರು ಬಂಗಾರಪ್ಪನವರ ಗರಡಿಯಲ್ಲಿ‌ ನಾನು ಬೆಳೆದಿದ್ದೇನೆ ಇದೀಗ ಮಧುಬಂಗಾರಪ್ಪ ನನ್ನನ್ನು ಹಾಗೂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಯಾವುದೇ ಷರತ್ತಿಲ್ಲದೆ ಕಾಂಗ್ರೆಸ್ ಗೆ ಬರುವುದಾಗಿ ಹೇಳಿದ್ದಾರೆ ಎಂದರು.

ದೇಶ ಹಾಗೂ ರಾಜ್ಯದಲ್ಲಿ ಬದಲಾವಣೆಯ ಅಗತ್ಯತೆ ಇದೆ. ಅಧಿಕಾರ ಯಾರದ್ದೂ ಶಾಶ್ವತವಲ್ಲ, ಸರ್ಕಾರಗಳು ರಾತ್ರೋ ರಾತ್ರಿ ಬದಲಾಗುತ್ತವೆ.

ಇದನ್ನೂ ಓದಿಪ್ರತಿಯೊಬ್ಬರು ಕೋವಿಡ್‌ ಲಸಿಕೆ ಪಡೆಯಿರಿ: ಶಾಸಕ ಮುದ್ನಾಳ

ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕೆಲಸಮಾಡಬೇಕು. ಆದರೆ ಇಂದು ಪೊಲೀಸರು ಕಾನೂನು ಚೌಕಟ್ಟಿಗೆ ವಿರುದ್ಧವಾಗಿ ಕೆಲಸ ಮಾಡಿದ್ದಾರೆ ಎಂದು ಗುಡುಗಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನುಡಿದಂತೆ ನಡೆಯಲು ಆಗಲಿಲ್ಲ. ಕರೋನಾ ಸಂದರ್ಭದಲ್ಲಿಯೂ ಸರ್ಕಾರಗಳು ಬಡವರಪರ ಬರಲಿಲ್ಲ. ಬಿಜೆಪಿ ಸರಕಾರ ಹಾಸಿಗೆ ದಿಂಬು ಔಷದಿಯಲ್ಲಿ ನಾಲ್ಕು ಸಾವಿರ ಕೋಟಿ ರೂಪಾಯಿ ನುಂಗಿ ನೀರು ಕುಡಿದಿದ್ದಾರೆ ಎಂದರು.

ಮಾತು ಮುಂದುವರೆಸಿ ಯಾವನೋ ತಗಡು ಕಂಪ್ಲೇಟ್ ಕೊಟ್ಟ ಎಂದಾಕ್ಷಣ‌ ಸಾಗರ ಪೊಲೀಸರು ಸೋನಿಯಾ ಗಾಂದಿ ಮೇಲೆ‌ ಎಫ್ ಐ ಆರ್ ದಾಖಲಿಸಿದ್ದರು. ಯಾವುದನ್ನೂ ನಾವು ಮರೆತಿಲ್ಲ. ಸೋನಿಯಾ ಗಾಂಧಿ ಮೇಲೆ ಪ್ರಕರಣ ದಾಖಲಿಸಿದವರಿಗೆ ಸಂಗಮೇಶ್ ಮೇಲೆ ಪ್ರಕರಣ‌ ದಾಖಲಿಸುವುದು ಕಷ್ಟವಲ್ಲ ಬಿಡಿ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ : ‘ಬಾಂಬೆ ಬೇಗಮ್ಸ್’ ಪ್ರಸಾರ ರದ್ದುಗೊಳಿಸುವಂತೆ ನೆಟ್ ಫ್ಲಿಕ್ಸ್ ಗೆ  NCPCR ನೋಟಿಸ್

ರೈತರಿಗೆ ಭೂಮಿ‌ ನೀಡುವವರು ಕಾಂಗ್ರೆಸ್ಸಿಗರು, ರೈತರ ಭೂಮಿ ಕಿತ್ತುಕೊಂಡು‌‌ ಮಾರುವವರು ಬಿಜೆಪಿಯವರು. ಇದೇ ಕಾಂಗ್ರೆಸ್ ಹಾಗೂ ಬಿಜೆಪಿಗೆ ಇರುವ ವ್ಯತ್ಯಾಸ. ಕಾಂಗ್ರೆಸ್ಸಿನದು ರಾಷ್ಟ್ರೀಕರಣ ನೀತಿ. ಬಿಜೆಪಿಯದ್ದು ಖಾಸಗಿಕರಣ ನೀತಿ. ರಾಜ್ಯದಲ್ಲಿ ಬಿಜೆಪಿಯ ಅಂತ್ಯ ಶಿವಮೊಗ್ಗದಿಂದಲೇ‌ ಆರಂಭಗೊಳ್ಳಬೇಕು. ಇದಕ್ಕಾಗಿಯೇ ಶಿವಮೊಗ್ಗದಿಂದಲೇ‌ ಹೋರಾಟ ಆರಂಭಿಸಿದ್ದೇವೆ ಎಂದು ಸರಕಾರದ ವಿರುದ್ಧ ಹರಿಹಾಯ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.