ಬೀದಿ ನಾಯಿಗಳಿಗೆ “ಡಂಪಿಂಗ್‌ ಯಾರ್ಡ್‌ʼ ಆಶ್ರಯತಾಣ !

ಪಚ್ಚನಾಡಿ ಸುತ್ತಮುತ್ತ ಬೀದಿನಾಯಿಗಳ ಉಪಟಳ

Team Udayavani, Feb 9, 2023, 10:16 AM IST

STREET DG

ಮಂಗಳೂರು: ನಗರದ ತ್ಯಾಜ್ಯಗಳು ವಿಲೇವಾರಿಯಾಗುವ ಪಚ್ಚನಾಡಿ ಪ್ರದೇಶ ಈಗ ಬೀದಿ ನಾಯಿಗಳ ಆಶ್ರಯ ತಾಣವಾಗಿ ಬದಲಾಗುತ್ತಿದೆ. ಕೆಲವರು ತಮ್ಮ ಮನೆಯ ಸಾಕು ನಾಯಿಗಳನ್ನು, ಬೆಕ್ಕುಗಳನ್ನು ಅಲ್ಲಿ ಬಿಟ್ಟು ಹೋಗುತ್ತಿದ್ದು, ಸಾರ್ವಜನಿಕರಿಗೆ ತೀರಾ ಸಮಸ್ಯೆ ಉಂಟಾಗುತ್ತಿದೆ. ನಾಯಿ, ಬೆಕ್ಕಿನ ಮರಿಗಳನ್ನು ಮನೆಗಳಲ್ಲಿ ಸಾಕಲು ಸಾಧ್ಯವಾಗದ ಮಂದಿ ಪಚ್ಚನಾಡಿ, ಮಂಗಳಾಜ್ಯೋತಿ, ಆಶ್ರಯನಗರ, ಸಂತೋಷ್‌ ನಗರ, ದೇವಿನಗರ ಮುಂತಾದ ಕಡೆಗಳಲ್ಲಿ ಬಿಡುತ್ತಿದ್ದಾರೆ. ಇದರಿಂದಾಗಿ ಉಪಟಳ ಹೆಚ್ಚಾಗುತ್ತಿದೆ.

ಈ ರೀತಿ ನಾಯಿ ಮರಿ, ಬೆಕ್ಕಿನ ಮರಿಗಳನ್ನು ತಂದು ಬಿಡುವವರನ್ನು ಖಂಡಿಸಿ ಮಂಗಳಜ್ಯೋತಿ ನಗರದಲ್ಲಿ ಕಠೊರ ಶಬ್ದಗಳಿಂದ ಬರೆದ ಬ್ಯಾನರ್‌ ಕೂಡ ಅಳವಡಿಸಲಾಗಿದೆ.
ನಗರದಲ್ಲಿ ಸುತ್ತಾಡುವ ಬೀದಿ ನಾಯಿಗಳನ್ನು ಎನಿಮಲ್‌ ಕೇರ್‌ ಟ್ರಸ್ಟ್‌ ಮೂಲಕ ಬಲೆಯನ್ನು ಉಪ ಯೋಗಿಸಿ ಹಿಡಿಯ ಲಾಗುತ್ತದೆ. ಬಳಿಕ ಪಾಲಿಕೆಯ ಸಹಕಾರ ದೊಂದಿಗೆ ಶಕ್ತಿನಗರದಲ್ಲಿರುವ ಎನಿಮಲ್‌ ಕೇರ್‌ ಸಂಸ್ಥೆಗೆ ತಲುಪಿಸಲಾಗುತ್ತದೆ.

ಅನಂತರ ಅವುಗಳನ್ನು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಬಳಿಕ ಯಾವ ಪ್ರದೇಶದಿಂದ ನಾಯಿಗಳನ್ನು ಹಿಡಿದು ತರಲಾಗಿತ್ತೋ, ಅಲ್ಲೇ ಮರಳಿ ಬಿಡಲಾಗುತ್ತದೆ. ಈ ಸಮಯದಲ್ಲಿ ನಾಯಿಗಳಿಗೆ ರೇಬಿಸ್‌ ಚುಚ್ಚುಮದ್ದು ನೀಡಲಾಗುತ್ತದೆ. ಅಲ್ಲದೆ ಸಂತಾನಶಕ್ತಿ ಹರಣ ಮಾಡಿದ ನಾಯಿಯ ಎಡ ಕಿವಿಯಲ್ಲಿ “ವಿ’ ಆಕಾರದಲ್ಲಿ ಮಾರ್ಕ್‌ ಮಾಡಲಾಗುತ್ತದೆ. ಪ್ರತ್ಯೇಕ ಮಾರ್ಗಸೂಚಿ ಬೀದಿ ನಾಯಿಗಳ ಕಡಿತ, ರೇಬಿಸ್‌ ರೋಗ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲ ಸ್ಥಳೀಯ ಆಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀದಿ ನಾಯಿ ಸಂತಾನಶಕ್ತಿ ಹರಣ ಯೋಜನೆಯನ್ನು ಕಟ್ಟುನಿಟ್ಟಾಗಿ, ಕ್ರಮಬದ್ಧವಾಗಿ ಜಾರಿಗೊಳಿಸುವಂತೆ ರಾಜ್ಯ ಸರಕಾರ ಆದೇಶಿಸಿದೆ.

ನಗರಾಭಿವೃದ್ಧಿ ಇಲಾಖೆ ಹಾಗೂ ಪಶುಪಾಲನ ಮತ್ತು ಪಶುವೈದ್ಯ ಸೇವಾ ಇಲಾಖೆಗಳು ಜಂಟಿ ಸುತ್ತೋಲೆ ಹೊರಡಿಸಿದ್ದು, ಬೀದಿ ನಾಯಿ ಸಂತಾನಶಕ್ತಿ ಹರಣ ನಿಯಮದ ಅಡಿಯಲ್ಲಿ ಕೈಗೊಳ್ಳ ಬೇಕಾದ ಕ್ರಮಗಳ ಕುರಿತಂತೆ ಮಾರ್ಗಸೂಚಿ ಪ್ರಕಟಿಸಲಾಗಿದೆ. 9 ಅಂಶಗಳ ಮಾರ್ಗಸೂಚಿ ಕ್ರಮಬದ್ಧವಾಗಿ ಪಾಲಿಸಿ ಬೀದಿ ನಾಯಿ ಕಡಿತ, ರೇಬಿಸ್‌ ರೋಗ ನಿಯಂತ್ರಣಕ್ಕೆ ಮುಂದಾಗಬೇಕೆಂದು ಸೂಚಿಸಲಾಗಿದೆ. ಪ್ರತಿವರ್ಷ ಸ್ಥಳೀಯ ಸಂಸ್ಥೆಗಳ ಆಯವ್ಯಯದಲ್ಲಿ ಬೀದಿ ನಾಯಿಗಳ ಸಂತಾನ ನಿಯಂತ್ರಣಕ್ಕಾಗಿ ಅಗತ್ಯ ಹಣಕಾಸು ಹಂಚಿಕೆ ಮಾಡಬೇಕು.

ಸಂತಾನ ನಿಯಂತ್ರಣಕ್ಕೆ ಕೆಲಸ ಮಾಡುವ ಪ್ರಾಣಿ ಕಲ್ಯಾಣ ಸಂಸ್ಥೆಗಳಿಗೆ ಸ್ಥಳೀಯ ಸಂಸ್ಥೆಗಳೇ ಮೂಲಸೌಕರ್ಯ ಒದಗಿಸಬೇಕು. ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಅನಂತರ ನಾಯಿಗಳಿಗೆ ಲಸಿಕೆ ನೀಡಿ, ಅವುಗಳನ್ನು ಯಾವ ಪ್ರದೇಶದಲ್ಲಿ ಹಿಡಿಯಲಾಗಿತ್ತೋ ಅಲ್ಲಿಗೆ ವಾಪಾಸು ಬಿಡಬೇಕು ಎಂದು ತಿಳಿಸಿದೆ.

ಅರಿವು ಮೂಡಬೇಕಿದೆ
ಕೆಲವೊಬ್ಬರು ಮನೆಯಲ್ಲಿನ ಬೆಕ್ಕು, ನಾಯಿಗಳನ್ನು ಅನೇಕ ಸಮಯಗಳಿಂದ ಇಲ್ಲೇ ಬಿಡುತ್ತಿದ್ದು, ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿದೆ. ಈ ಕುರಿತು ಸಾರ್ವಜನಿಕರು ಕೂಡ ಸಮಸ್ಯೆ ಹೇಳಿಕೊಂಡಿದ್ದು, ಎನಿಮಲ್‌ ಕೇರ್‌ ಟ್ರಸ್ಟ್‌ ಮೂಲಕ ಶ್ವಾನಗಳಿಗೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ನೀಡಲಾಗುತ್ತಿದೆ. ಬೀದಿಗೆ ಪ್ರಾಣಿಗಳನ್ನು ಬಿಡಬಾರದು ಎಂಬುದಾಗಿ ಜನರಲ್ಲಿ ಅರಿವು ಮೂಡಬೇಕಿದೆ. – ಸಂಗೀತಾ ಆರ್‌. ನಾಯಕ್‌, ಮನಪಾ ಸದಸ್ಯೆ ಪಚ್ಚನಾಡಿ ವಾರ್ಡ್‌

ಟಾಪ್ ನ್ಯೂಸ್

U T KHADER

ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್

Yatindra

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ: ಡಾ.ಯತೀಂದ್ರ

1-sad-sad-d

64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ

swamiji ticket

ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ

Dark-circle

ಮುಖದ ಅಂದ ಕೆಡಿಸುವ “ಡಾರ್ಕ್ ಸರ್ಕಲ್ಸ್” ನಿವಾರಣೆಗೆ ಈ ಮನೆಮದ್ದು ಬಳಸಿ…

Kharge (2)

ರಾಹುಲ್ ಅನರ್ಹ; ಖರ್ಗೆ ಸೇರಿ ವಿಪಕ್ಷ ನಾಯಕರಿಂದ ವ್ಯಾಪಕ ಆಕ್ರೋಶ

bel defence

ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಮಹತ್ವದ ಒಪ್ಪಂದ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ

ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ

U T KHADER

ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್

1-fqweeqwe

ಮಂಗಳೂರು: ಪೊಲೀಸರಿಂದ 11 ಕೆಜಿ ಗಾಂಜಾ ಸಹಿತ ಮಾದಕ ವಸ್ತು ನಾಶ

ರೈತರ ಹಕ್ಕಿಗಾಗಿ ಸಂಘಟಿತರಾಗಿ ಹೋರಾಟ ಅನಿವಾರ್ಯ; ಶಾಂತಿ ಪ್ರಸಾದ್‌ ಹೆಗ್ಡೆ

ರೈತರ ಹಕ್ಕಿಗಾಗಿ ಸಂಘಟಿತರಾಗಿ ಹೋರಾಟ ಅನಿವಾರ್ಯ; ಶಾಂತಿ ಪ್ರಸಾದ್‌ ಹೆಗ್ಡೆ

ಮಂಗಳೂರು ಸೆಂಟ್ರಲ್‌: ರೈಲ್ವೇ ಯುಟಿಎಸ್‌ ಕೌಂಟರ್‌ ಪುನರಾರಂಭ

ಮಂಗಳೂರು ಸೆಂಟ್ರಲ್‌: ರೈಲ್ವೇ ಯುಟಿಎಸ್‌ ಕೌಂಟರ್‌ ಪುನರಾರಂಭ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ

ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ

U T KHADER

ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್

Yatindra

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ: ಡಾ.ಯತೀಂದ್ರ

1-sad-sad-d

64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ

swamiji ticket

ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.