ಶಿಕ್ಷಣ ಸಂಸ್ಥೆಗಳು ಬದುಕಿಗೆ ಬೆಳಕಾಗಲಿ: ಸುಬ್ರಹ್ಮಣ್ಯ ಶ್ರೀ


Team Udayavani, May 31, 2019, 6:00 AM IST

subra

ಅಜೆಕಾರು: ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಭವಿಷ್ಯ ರೂಪಿಸುವ ಕೇಂದ್ರ ಗಳಾಗಿ ವಿದ್ಯಾರ್ಥಿಗಳ ಜೀವನಕ್ಕೆ ಬೆಳಕಾಗಬೇಕು. ಈ ನಿಟ್ಟಿನಲ್ಲಿ ಜ್ಞಾನ ಸುಧಾ ಕಾಲೇಜು ದಿಟ್ಟ ಹೆಜ್ಜೆಯನ್ನಿಟ್ಟಿದ್ದು ಇತರ ಶಿಕ್ಷಣ ಸಂಸ್ಥೆಗಳಿಗೆ ಮಾದರಿಯಾಗಿ ರೂಪುಗೊಂಡಿದೆ ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ಅಜೆಕಾರು ಪದ್ಮಗೋಪಾಲ ಎಜುಕೇಶನ್‌ ಟ್ರಸ್ಟ್‌ ಮತ್ತು ಕಾರ್ಕಳ ಗಣಿತನಗರ ಜ್ಞಾನಸುಧಾ ಸಂಸ್ಥೆಗಳಆಶ್ರಯದಲ್ಲಿ ಸಂಸ್ಥೆಯ ಸಭಾಂಗಣ ದಲ್ಲಿ ನಡೆದ ಶ್ರೀ ಮಹಾಗಣಪತಿ ದೇವಸ್ಥಾನದ 6ನೇ ಪ್ರತಿಷ್ಠಾ ಮಹೋತ್ಸವ ಮತ್ತು ಜ್ಞಾನಸುಧಾ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಶ್ರೀಗಳು ಆಶೀರ್ವಚನ ನೀಡಿದರು.

ಬದುಕಿಗೆ ಲೌಕಿಕ ಶಿಕ್ಷಣದ ಜತೆಗೆ ಅಧ್ಯಾತ್ಮ ಶಿಕ್ಷಣವೂ ಅಗತ್ಯ, ಇದನ್ನು ಮನಗಂಡ ಡಾ| ಸುಧಾಕರ ಶೆಟ್ಟಿ ಅವರು ಶಿಕ್ಷಣ ಸಂಸ್ಥೆಯ ವಠಾರದಲ್ಲಿಯೇ ದೇವಸ್ಥಾನ ನಿರ್ಮಿಸಿ ಮಕ್ಕಳಿಗೆ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಮಾಡಿದ್ದಾರೆ. ಹೆತ್ತವರೂ ಸಹ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು ಆಗ ವಿದ್ಯಾರ್ಥಿಯು ರಾಷ್ಟ್ರೀಯ ಸಂಪತ್ತಾಗುತ್ತಾನೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಅಜೆಕಾರು ಪದ್ಮಗೋಪಾಲ್ ಎಜುಕೇಶನ್‌ ಟ್ರಸ್ಟ್‌ನ ಸದಸ್ಯ ಗಣಪತಿ ಪೈ ಅವರು ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಬೇಕೆಂಬ ಉದ್ದೇಶ ದಿಂದ ಈ ಸಂಸ್ಥೆ ನಿರ್ಮಾಣಗೊಂಡಿದೆ ಎಂದರು.

ಮುಖ್ಯ ಅತಿಥಿ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಮಾತನಾಡಿ ಶಿಕ್ಷಣದ ಜತೆಗೆಮಾನವೀಯ ಮೌಲ್ಯ ಬೆಳೆಸುವ ಕಾರ್ಯವನ್ನು ಈ ಶಿಕ್ಷಣ ಸಂಸ್ಥೆ ಮಾಡುತ್ತಿರು ವುದು ಹೆಮ್ಮೆಯ ವಿಷಯ ಎಂದರು.

ಅಜೆಕಾರು ಪದ್ಮಗೋಪಾಲ್ ಎಜುಕೇಶನ್‌ ಟ್ರಸ್ಟ್‌ನ ಅಧ್ಯಕ್ಷರು, ಜ್ಞಾನಸುಧಾ ಕಾಲೇಜಿನ ಸಂಸ್ಥಾಪಕ ಡಾ| ಸುಧಾಕರ್‌ ಶೆಟ್ಟಿ ಪ್ರಸ್ತಾವಿಸಿದರು. ಟ್ರಸ್ಟಿಗಳಾದ ಕರುಣಾಕರ ಶೆಟ್ಟಿ, ಪ್ರಕಾಶ್‌ ಶೆಣೈ, ವಿದ್ಯಾ ಎಸ್‌. ಶೆಟ್ಟಿ, ಆಡಳಿತ ಮಂಡಳಿ ಸದಸ್ಯರಾದ ಅನಿಲ್ ಕುಮಾರ್‌ ಜೈನ್‌ ಉಪಸ್ಥಿತರಿದ್ದರು.

ಪ್ರತಿಭಾ ಪುರಸ್ಕಾರದ ಪಟ್ಟಿಯನ್ನು ಶಿಕ್ಷಕರಾದ ಶಿಲ್ಪಾ, ರವಿ, ಸಂದೀಪ್‌, ಪ್ರಜ್ವಲ್ ಕುಲಾಲ್ ವಾಚಿಸಿದರು. ಡಾ| ಸುಧಾಕರ ಶೆಟ್ಟಿ ಸ್ವಾಗತಿಸಿದರು. ಸಂಗೀತ ಕುಲಾಲ್ ನಿರೂಪಿಸಿದರು. ಸಂಸ್ಥೆಯ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ ವಂದಿಸಿದರು.

ಸಂಸ್ಥೆಯ ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ವಿಭಾಗದಲ್ಲಿ ವಿಷಯವಾರು ಶೇ. 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಸಾಧನೆಗೆ ಕಾರಣರಾದ ಶಿಕ್ಷಕರಿಗೆ ಸುಮಾರು 44 ಲಕ್ಷ ರೂ. ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಎಸ್‌ಎಸ್‌ಎಲ್ಸಿಯಲ್ಲಿ 624 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಸಂಸ್ಥೆಯ ವಿದ್ಯಾರ್ಥಿ ಮನ್ವಿತ್‌ ಪ್ರಭು, ಬ್ಯಾಡ್‌ಮಿಂಟನ್‌ನಲ್ಲಿ ರಾಷ್ಟ್ರ ಮಟ್ಟದ ಸಾಧನೆ ಮಾಡಿದ ನಿಯತಿ ಕೆ. ಶೆಟ್ಟಿ, ಪಿಎಚ್‌ಡಿ ಪದವಿ ಪಡೆದ ಡಾ| ಮಹಾದೇವ ಗೌಡ, ಕೋಚ್ ಸುಭಾಶ್‌ ಜೈನ್‌ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕಿ ಸೌಜನ್ಯಾ ಹೆಗ್ಡೆ, ಸಿಇಟಿಯಲ್ಲಿ ಉತ್ತಮ ರ್‍ಯಾಂಕ್‌ ಪಡೆದವರನ್ನು ಗೌರವಿಸಲಾಯಿತು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.