ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ: ಆರಗ ಜ್ಞಾನೇಂದ್ರ
Team Udayavani, Aug 10, 2022, 2:17 PM IST
ಬೆಂಗಳೂರು : ಅಕ್ರಮ ವಿದೇಶಿ ವಲಸಿಗರನ್ನು ಹಿಡಿದಿಡುವ ದಿಗ್ಬಂಧನ ಕೇಂದ್ರದ ಸಾಮರ್ಥ್ಯ ವನ್ನು ಇಮ್ಮಡಿಗೊಳಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಬುಧವಾರ ಉನ್ನತ ಮಟ್ಟದ ಜಂಟಿ ಸಭೆಯನ್ನು, ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀನಿವಾಸ ಪೂಜಾರಿ, ಅವರೊಂದಿಗೆ ನಡೆಸಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಅಕ್ರಮ ವಲಸಿಗರು, ವೀಸಾ ಅವಧಿ ಮುಗಿದರೂ, ದೇಶದಲ್ಲಿಯೇ ಉಳಿದುಕೊಳ್ಳುತ್ತಿದ್ದು ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಅಪಾಯ ಇರುವ ದೃಷ್ಟಿಯಿಂದ, ಅವರನ್ನು ಗಡಿಪಾರು ಮಾಡುವ ಅಗತ್ಯವಿದೆ ಎಂದರು.
ಪ್ರಸ್ತುತ ಇರುವ ಅಕ್ರಮ ವಿದೇಶಿ ವಲಸಿಗರಿಗೆ ತಾತ್ಕಾಲಿಕ ವಸತಿ ಕಲ್ಪಿಸುವ ‘ ದಿಗ್ಬಂಧನ ಕೇಂದ್ರ ‘ (detention center) ವನ್ನು ವಿಸ್ತರಿಸಿ ಸಾಮರ್ಥ್ಯ ಹೆಚ್ಚಿಸುವ ಬಗ್ಗೆ, ರಾಜ್ಯ ಪೊಲೀಸ್ ಮಹನಿರ್ದೇಶಕ ಪ್ರವೀಣ್ ಸೂದ್ ಅವರು ಪ್ರಸ್ತಾಪಿಸಿ, ಅಕ್ರಮ ಬಾಂಗ್ಲಾದೇಶಿ ನಾಗರಿಕರೂ ಸೇರಿದಂತೆ ಇತರ ದೇಶದ ವಲಸಿಗರನ್ನು, ದೇಶದ ಕಾನೂನಿನಂತೆ, ಬಂಧಿಸಿ, ಯಾವುದೇ ಕಾರಾಗೃಹ ಗಳಲ್ಲಿ ಇಡದೆ, ಇವರಿಗೆಂದೇ ಇರುವ ದಿಗ್ಬಂಧನ ಕೇಂದ್ರದಲ್ಲಿ ವಸತಿ ಕಲ್ಪಿಸಬೇಕು ಹಾಗೂ ಅದಕ್ಕಾಗಿ ತಕ್ಷಣ ಕ್ರಮ ವಹಿಸಬೇಕಾಗಿದೆ. ಪ್ರಸ್ತುತ ಬೆಂಗಳೂರಿನ ಸಮೀಪ ವಿರುವ ನೆಲಮಂಗಲದ ಸಮೀಪ ದಿಗ್ಬಂಧನ ಕೇಂದ್ರವೊಂದು ಕಾರ್ಯಾಚರಣೆ ನಡೆಸುತ್ತಿದ್ದು, ಅಲ್ಲಿ ಸ್ಥಳಾವಕಾಶ ಕೊರತೆ ಇದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಪ್ರಸ್ತುತ ದಿಗ್ಬಂಧನ ಕೇಂದ್ರದ ಸಾಮರ್ಥ್ಯ ವಿಸ್ತರಣೆಗೆ ಸಮಾಜ ಕಲ್ಯಾಣ ಇಲಾಖೆ ಅನುದಾನ ಒದಗಿಸಬೇಕು ಹಾಗೂ ವಿಳಂಬ ವಿಲ್ಲದಂತೆ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿದರು.
ಈ ಕುರಿತು ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಈ ಕುರಿತು ಗೃಹ ಇಲಾಖೆ ಸಲ್ಲಿಸುವ ಪ್ರಸ್ತಾವನೆಯನ್ನು ಆದ್ಯತೆ ಮೇರೆಗೆ ಪರಿಗಣಿಸಲಾಗುವುದು ಎಂದರು.
ಇದನ್ನೂ ಓದಿ: ಚಾಮರಾಜಪೇಟೆ ಆಟದ ಮೈದಾನ ಜಮೀರ್ ಅಪ್ಪನ ಆಸ್ತಿಯಾ?: ಸಿ.ಟಿ.ರವಿ ಕಿಡಿ
ಸಭೆಯಲ್ಲಿ ಉಪಸ್ಥಿತರಿದ್ದ ಹಿರಿಯ ಸಮಾಜ ಕಲ್ಯಾಣ ಅಧಿಕಾರಿಗಳಿಗೆ, ಸಚಿವ ಪೂಜಾರಿಯವರು, ಸಭೆಯಲ್ಲಿಯೇ ನಿರ್ದೇಶನ ನೀಡಿದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ