ಇನ್ನೂ ಅನುಷ್ಠಾನ ಆಗದ ಫೂಟ್ ಬ್ರಿಡ್ಜ್ ಕಾಮಗಾರಿ

ಬಂಟ್ವಾಳ ರೈಲು ನಿಲ್ದಾಣದಿಂದ ಬಿ.ಸಿ.ರೋಡ್‌ ಸಮೀಪ ಸಂಪರ್ಕ

Team Udayavani, Oct 20, 2021, 5:13 AM IST

ಇನ್ನೂ ಅನುಷ್ಠಾನ ಆಗದ ಫೂಟ್ ಬ್ರಿಡ್ಜ್ ಕಾಮಗಾರಿ

ಬಂಟ್ವಾಳ: ಬಂಟ್ವಾಳ ರೈಲ್ವೇ ನಿಲ್ದಾಣನಿಂದ ನಗರಕ್ಕೆ ಸಮೀಪ ಸಂಪರ್ಕ ಕಲ್ಪಿಸುವ ಆದರ್ಶ ರೈಲು ನಿಲ್ದಾಣ ಯೋಜನೆಯ ಮೂಲಕ ನಡೆಯಬೇಕಿದ್ದ ಫೂಟ್ ಬ್ರಿಡ್ಜ್ ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಯೋಜನೆಯ ಇತರ ಕಾಮಗಾರಿಗಳು ಬಹುತೇಕ ಅಂತಿಮ ಹಂತದಲ್ಲಿ ಇದೆ.

ಕಳೆದ ಕೆಲವು ವರ್ಷಗಳ ಹಿಂದೆ ರೈಲ್ವೇ ಇಲಾಖೆಯಿಂದ ಆದರ್ಶ ರೈಲು ನಿಲ್ದಾಣ ಯೋಜನೆಯ ಮೂಲಕ ಬಂಟ್ವಾಳ ರೈಲು ನಿಲ್ದಾಣಕ್ಕೆ 5.56 ಕೋ.ರೂ. ಮಂಜೂರುಗೊಂಡು ಕಾಮಗಾರಿ ಆರಂಭಗೊಂಡಿತ್ತು. ನಿರೀಕ್ಷೆಯಂತೆ ಕಾಮಗಾರಿ ನಡೆದಿದ್ದರೆ 2020ರ ಫೆಬ್ರವರಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ ಕೊರೊನಾ ಕಾರಣದಿಂದ ನಿಂತ ಕಾಮಗಾರಿ ಇನ್ನೂ ಆರಂಭಗೊಂಡಿಲ್ಲ.

2019ರಲ್ಲಿ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ್ದ ದ.ಕ.ಸಂಸದ ನಳಿನ್‌ಕುಮಾರ್‌ ಕಟೀಲು ಅವರು ನಿಲ್ದಾಣದ ಕಾಮಗಾರಿಯನ್ನು ಪರಿಶೀಲಿಸಿ ವೇಗವಾಗಿ ಮುಗಿಸುವಂತೆ ಸೂಚನೆಯನ್ನೂ ನೀಡಿದ್ದರು. ಒಟ್ಟು 2 ಫ್ಲ್ಯಾಟ್ ಫಾರ್ಮ್ ಗಳನ್ನು ಒಳಗೊಂಡಿರುವ ನಿಲ್ದಾಣದಲ್ಲಿ ಫ್ಲ್ಯಾಟ್ ಫಾರ್ಮ್ ಒಂದಕ್ಕೆ 1.57 ಕೋ.ರೂ. ಹಾಗೂ ಫ್ಲ್ಯಾಟ್ ಫಾರ್ಮ್ ಎರಡಕ್ಕೆ 2.60 ಕೋ.ರೂ. ಅನುದಾನ ಮಂಜೂರಾಗಿರುವ ಕುರಿತು ಸಂಸದರು ಮಾಹಿತಿ ನೀಡಿದ್ದರು.

ಬಿ.ಸಿ.ರೋಡ್‌ ತಲುಪಲು ಸಮೀಪದ ವ್ಯವಸ್ಥೆ
ಪ್ರಸ್ತುತ ಬಂಟ್ವಾಳ ರೈಲು ನಿಲ್ದಾಣವನ್ನು ಪ್ರವೇಶಿಸಬೇಕಾದರೆ ಬಿ.ಸಿ.ರೋಡ್‌ ನಗರ ಕೇಂದ್ರದಿಂದ ಪಾಣೆಮಂಗಳೂರು ರಸ್ತೆಯ ಮೂಲಕ ಸಾಗಿ ನಿಲ್ದಾಣ ಸೇರಬೇಕಿದೆ. ಆದರೆ ಇದು ಕೊಂಚ ದೂರದ ವ್ಯವಸ್ಥೆಯಾದ ಕಾರಣ ಜನರು ನಗರ ಕೇಂದ್ರದಿಂದ ಆಟೋ ರಿಕ್ಷಾ ಅಥವಾ ಇತರ ವಾಹನಗಳನ್ನು ಬಳಸಿ ಸಾಗಬೇಕಿದೆ.

ಇದನ್ನೂ ಓದಿ:ದಾಂಡೇಲಿ: ನಗರದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅತಿಕ್ರಮಣ-ತೆರವುಗೊಳಿಸದ ನಗರ ಸಭೆ

ಪ್ರಯಾಣಿಕರು ನಿಲ್ದಾಣದಿಂದ ಇನ್ನೊಂದು ಭಾಗಕ್ಕೆ ನಡೆದುಕೊಂಡು ಹೋಗುವ ವ್ಯವಸ್ಥೆ ಇದ್ದರೆ ಕೈಕುಂಜೆ ಮಾರ್ಗವಾಗಿ ಬಿ.ಸಿ.ರೋಡ್‌ ನಗರವನ್ನು ಸುಲಭವಾಗಿ ತಲುಪಬಹುದಾಗಿದೆ. ಹೀಗಾಗಿ ಫ‌ೂಟ್‌ ಬ್ರಿಡ್ಜ್ ಬೇಡಿಕೆಯ ಹಿನ್ನೆಲೆಯಲ್ಲಿ ಸುಮಾರು 78 ಲಕ್ಷ ರೂ.ಗಳಲ್ಲಿ ಕಾಮಗಾರಿ ಆರಂಭಗೊಂಡಿತ್ತು. ಆದರೆ ಅದು ಇನ್ನೂ ಅನುಷ್ಠಾನ ಹಂತದಲ್ಲೇ ಇರುವ ಕಾರಣ ಹತ್ತಿರದ ನಗರ ಸಂಪರ್ಕ ವ್ಯವಸ್ಥೆ ಇನ್ನೂ ಈಡೇರಿಲ್ಲ. ರೈಲು ನಿಲ್ದಾಣದಿಂದ ಕೈಕುಂಜೆ ಭಾಗಕ್ಕೆ ಬರುವವರು ಪ್ರಸ್ತುತ ರೈಲ್ವೇ ಹಳಿಯನ್ನು ದಾಟಿ ಬರುತ್ತಿದ್ದು, ರಸ್ತೆಯ ಮಾಹಿತಿ ಇರುವ ಪ್ರಯಾಣಿಕರು ಕೂಡ ಹಳಿ ದಾಟಿ ಬಿ.ಸಿ.ರೋಡ್‌ಗೆ ಬರುತ್ತಿದ್ದಾರೆ. ಆದರೆ ಹಳಿ ದಾಟುವುದು ಬಹಳ ತ್ರಾಸದಾಯಕವಾಗಿರುವುದರಿಂದ ಫ‌ೂಟ್‌ ಬ್ರಿಡ್ಜ್ ನಿರ್ಮಾಣ ಗೊಂಡರೆ ಹಳಿದಾಟುವುದಕ್ಕೆ ಅನುಕೂಲವಾಗಲಿದೆ.

ಆದರ್ಶ ಯೋಜನೆಯ ಕಾಮಗಾರಿಗಳೇನು?
ಆದರ್ಶ ನಿಲ್ದಾಣ ಯೋಜನೆಯ ಮೂಲಕ ಫ್ಲ್ಯಾಟ್ ಫಾರ್ಮ್ ಮೇಲ್ಛಾವಣಿ, ವಿದ್ಯುದ್ದೀಪ, ಪ್ರಯಾಣಿಕರಿಗೆ ಆಸನಗಳ ವ್ಯವಸ್ಥೆ, ಶುದ್ಧೀಕರಿಸಿದ ಕುಡಿಯುವ ನೀರಿನ ಘಟಕ, ಅಂಗವಿಕಲರಿಗೆ ವಿಶೇಷ ಶೌಚಗೃಹ, ಹೊಸ ಶೌಚಾಲಯ ಕಾಂಪ್ಲೆಕ್ಸ್‌ ರಚನೆ, ಫ್ಲ್ಯಾಟ್ ಫಾರ್ಮ್ ಸುತ್ತಲೂ ಆವರಣಗೋಡೆ ನಿರ್ಮಾಣ, ಫ್ಲ್ಯಾಟ್ ಫಾರ್ಮ್ ನಲ್ಲಿ ಬೆಂಚು, ರೈಲ್ವೇ ಭದ್ರತೆ ವ್ಯವಸ್ಥೆ ಗಟ್ಟಿಗೊಳಿಸುವುದು, ಕಿತ್ತು ಹೋಗಿರುವ ಶೀಟ್‌ಗಳನ್ನು ಮತ್ತೆ ಹಾಕಿಸುವುದು, ರೈಲು ನಿಲ್ದಾಣದಲ್ಲಿ ಸಮರ್ಪಕವಾಗಿ ಸಿಸಿ ಕೆಮರಾ ಅಳವಡಿಸುವುದು ಮೊದಲಾದ ಕಾಮಗಾರಿಗಳು ನಡೆಯಬೇಕಿದೆ. ಇವುಗಳಲ್ಲಿ ಬಹುತೇಕ ಕಾಮಗಾರಿಗಳು ಅಂತಿಮ ಹಂತದಲ್ಲಿವೆ.

ಟಾಪ್ ನ್ಯೂಸ್

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

HDK

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-sadsad

Davanagere ವೃದ್ಧರೊಬ್ಬನ್ನು ಅಪಹರಿಸಿ ಭಾರಿ ಹಣಕ್ಕೆ ಬೇಡಿಕೆ; ಐವರ ಬಂಧನ

1-sddasd

SNM ಪಾಲಿಟೆಕ್ನಿಕ್ NSS ನವರಿಂದ ಬಡವರ ಮನೆಗಳಿಗೆ ಕಾಯಕಲ್ಪ

1-wewqewq

Amazon ಫ್ಯಾಷನ್‌ನಿಂದ ವಾರ್ಡ್‌ರೋಬ್‌ ರಿಫ್ರೆಶ್‌ ಸೇಲ್‌ ಆರಂಭ

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

1-qwwqeqwe

Mahalingpur ಗಾಳಿ ಮಳೆಗೆ ವ್ಯಾಪಕ ನಷ್ಟ; ಹಲವು ಮನೆಗಳಿಗೆ ಹಾನಿ, ಪರದಾಟ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

12-sadsad

Davanagere ವೃದ್ಧರೊಬ್ಬನ್ನು ಅಪಹರಿಸಿ ಭಾರಿ ಹಣಕ್ಕೆ ಬೇಡಿಕೆ; ಐವರ ಬಂಧನ

1-sddasd

SNM ಪಾಲಿಟೆಕ್ನಿಕ್ NSS ನವರಿಂದ ಬಡವರ ಮನೆಗಳಿಗೆ ಕಾಯಕಲ್ಪ

1-wewqewq

Amazon ಫ್ಯಾಷನ್‌ನಿಂದ ವಾರ್ಡ್‌ರೋಬ್‌ ರಿಫ್ರೆಶ್‌ ಸೇಲ್‌ ಆರಂಭ

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

1-qwwqeqwe

Mahalingpur ಗಾಳಿ ಮಳೆಗೆ ವ್ಯಾಪಕ ನಷ್ಟ; ಹಲವು ಮನೆಗಳಿಗೆ ಹಾನಿ, ಪರದಾಟ