ಸಂಸ್ಥಾಪಕರ ದಿನಾಚರಣೆ, ಶೈಕ್ಷಣಿಕ ಅನುದಾನ ವಿತರಣೆ
Team Udayavani, Jun 9, 2019, 6:02 AM IST
ಬೆಳ್ಮಣ್: ಜೀವನದಲ್ಲಿ ಯಶಸ್ಸು ಗಳಿಸಲು ವಿದ್ಯೆ ಅತ್ಯಂತ ಆವಶ್ಯಕ. ಸಂಸ್ಕಾರಯುತ ಶಿಕ್ಷಣದಿಂದ ಸುಸಂಸ್ಕೃತ ಬದುಕು ಕಟ್ಟಬಹುದು ಎಂದು ಶಿರ್ತಾಡಿ ಶ್ರೀ ಮಹಾಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ ಹೇಳಿದರು.
ಶನಿವಾರ ಮುಂಡ್ಕೂರು ವಿದ್ಯಾವರ್ಧಕ ಪ.ಪೂ. ಕಾಲೇಜಿನಲ್ಲಿ ನಡೆದ ಸಂಸ್ಥಾಪಕರ ದಿನಾಚರಣೆಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶೈಕ್ಷಣಿಕ ಅನುದಾನ ವಿತರಣೆ
ಮುಂಬಯಿಯ ವಿದ್ಯಾದುರ್ಗಾ ಟ್ರಸ್ಟ್, ಮುಂಡ್ಕೂರಿನ ವೇದಾವತಿ ರಾಘವೇಂದ್ರ ಪ್ರಭು ಪಬ್ಲಿಕ್ ಚಾರಿಟೆಬಲ್ ಟ್ರಸ್ಟ್ ನಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ದತ್ತಿ ನಿಧಿಗಳ ಮೂಲದೊಂದಿಗೆ ಸುಮಾರು 2 ಲಕ್ಷ ರೂ. ಮೌಲ್ಯದ ಶೈಕ್ಷಣಿಕ ಅನುದಾನದ ವಿತರಣೆ ನಡೆಯಿತು.
ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಡಾ| ಪಿ. ಬಾಲಕೃಷ್ಣ ಆಳ್ವ ಆಧ್ಯಕ್ಷತೆ ವಹಿಸಿದ್ದರು. ಮುಂಡ್ಕೂರಿನ ವೇದಾವತಿ ರಾಘವೇಂದ್ರ ಪ್ರಭು ಪಬ್ಲಿಕ್ ಚಾರಿಟೆಬಲ್ ಟ್ರಸ್ಟ್ ನಅಧ್ಯಕ್ಷ ಬಿ. ರಮಾನಾಥ ಪ್ರಭು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿದರು.
ಆಡಳಿತ ಮಂಡಳಿ ಕಾರ್ಯದರ್ಶಿ ಬಿ. ಪಾಂಡುರಂಗ ಪ್ರಭು, ಕೋಶಾಧಿಕಾರಿ ಡಾ| ಪ್ರಭಾಕರ ಶೆಟ್ಟಿಗಾರ್, ಸದಸ್ಯರಾದ ಅಂಗಡಿಗುತ್ತು ನರಸಿಂಹ ಶೆಟ್ಟಿ, ಅಶೋಕ ಶೆಟ್ಟಿ, ಶಿಕ್ಷಣ ಪ್ರೇಮಿಗಳಾದ ಶಿವಶಂಕರ ಪ್ರಭು, ಶುಭಲಕ್ಷ್ಮೀ ಶಿವಶಂಕರ ಪ್ರಭು, ಆವಿಲ್ ಡಿ’ಸೋಜಾ,ಇನ್ನಾಬೀಡು ದಿನೇಶ್ ಶೆಟ್ಟಿ, ನಿವೃತ್ತ ಶಿಕ್ಷಕಿ ರತೀದೇವಿ, ಹಳೆ ವಿದ್ಯಾರ್ಥಿ ಸಂಘದ ಆಧ್ಯಕ್ಷ ಶರತ್, ವಿದ್ಯಾರ್ಥಿ ನಾಯಕ ಚಿಂತನ್, ಉಪನಾಯಕಿ ಪ್ರತೀಕ್ಷಾ ಉಪಸ್ಥಿತರಿದ್ದರು.
ಕನ್ನಡ ಅಧ್ಯಾಪಕ ಪ್ರಭಾಕರ ಶೆಟ್ಟಿ ಸ್ವಾಗತಿಸಿ, ಪ.ಪೂ. ಕಾಲೇಜು ಪ್ರಾಂಶುಪಾಲ ಸುದರ್ಶನ್ ವೈ.ಎಸ್. ಪ್ರಸ್ತಾವಿಸಿದರು. ಮಾಲತೇಶ್ ಇಂಗಳಕಿ ಪ್ರತಿಭಾ ಪುರಸ್ಕೃತರ ವಿವರ ನೀಡಿದರು. ಪ್ರೌಢಶಾಲಾ ಹಿರಿಯ ಶಿಕ್ಷಕಿ ಸವಿತಾ ಸದಾನಂದ್ ವಂದಿಸಿದರು. ಉಪನ್ಯಾಸಕ ಪ್ರಕಾಶ್ ನಾೖಕ್ ಕಾರ್ಯಕ್ರಮ ನಿರೂಪಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ