ಫ್ರಾನ್ಸ್‌ : ನಿಕೋಟಿನ್‌ ನಿರ್ಬಂಧ


Team Udayavani, Apr 29, 2020, 3:07 PM IST

ಫ್ರಾನ್ಸ್‌ : ನಿಕೋಟಿನ್‌ ನಿರ್ಬಂಧ

ಫ್ರಾನ್ಸ್‌ : ಸಿಗರೇಟ್‌ನಲ್ಲಿರುವ ನಿಕೋಟಿನ್‌ ಅಂಶವು ಜನರಲ್ಲಿ ಕೋವಿಡ್‌ ಸೋಂಕು ಪ್ರತಿರೋಧಕವಾಗಿ ಕೆಲಸ ಮಾಡುತ್ತದೆ ಎಂದು ಫ್ರಾನ್ಸ್‌ ಸಂಶೋಧಕರು ತಿಳಿಸಿದ್ದರು. ಈ ಬೆನ್ನಲ್ಲೇ ಸರಕಾರವು ನಿಕೋಟಿನ್‌ ಉತ್ಪನ್ನಗಳ ಮಾರಾಟದ ಮೇಲೆ ನಿರ್ಬಂಧ ಹೇರಿದೆ.

ದೇಶದಲ್ಲಿನ ಲಾಕ್‌ಡೌನ್‌ ಸಡಿಲಗೊಳ್ಳುವವರೆಗೂ ನಿಕೋಟಿನ್‌ ಮಾರಾಟದ ಮೇಲೆ ನಿಬಂಧನೆ ಹೇರಿರುವ ಸರಕಾರ ಕೇವಲ ಒಂದು ತಿಂಗಳ ಅಗತ್ಯದಷ್ಟು ಮಾತ್ರ ಮಾರಾಟ ನಡೆಸುವಂತೆ ಸೂಚಿಸಿದೆ. ಅದೂ ಪರಿಸ್ಥಿತಿ ಮತ್ತು ಸಂದರ್ಭವನ್ನು ಪರಿಶೀಲಿಸಿ ನಿಕೋಟಿನ್‌ ಅಂಶ ಇರುವ ಔಷಧ ಪದಾರ್ಥಗಳನ್ನು ನೀಡಬೇಕೆಂದು ತಿಳಿಸಿದೆ.

ದುರ್ಬಳಕೆಯ ಸಾಧ್ಯತೆ
ನಿಕೋಟಿನ್‌ ಸೋಂಕು ತಗುಲದಂತೆ ತಡೆಯುತ್ತದೆ ಎಂಬ ಮಾಹಿತಿ ದುರ್ಬಳಕೆ ಆಗುವ ಸಾಧ್ಯತೆ ಇದೆ. ಜನರ ತಪ್ಪು ಗ್ರಹಿಕೆಗೂ ಕಾರಣವಾಗಬಹುದು. ಪರಿಣಾಮವಾಗಿ ಇನ್ನಿತರ ಆರೋಗ್ಯ ಸಮಸ್ಯೆಗಳು ಎದುರಾಗಿ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳಬಹುದು. ಹಾಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರಕಾರ ಸುತ್ತೋಲೆ ಹೊರಡಿಸಿದೆ.

2 ವಿಭಿನ್ನ ವರದಿ
ಪ್ಯಾರಿಸ್‌ನ ಉನ್ನತ ಆಸ್ಪತ್ರೆಯ ಸಂಶೋಧಕರು ನಡೆಸಿದ ಸಂಶೋಧನೆಯಲ್ಲಿ ಸುಮಾರು 500 ಕೋವಿಡ್‌-19 ರೋಗಿಗಳನ್ನು ಪರೀಕ್ಷಿಸಿದ್ದು, ಶೇ.5ರಷ್ಟು ಮಾತ್ರ ಧೂಮಪಾನಿಗಳು ಸೋಂಕಿಗೆ ತುತ್ತಾಗಿದ್ದಾರೆ ಎಂದು ತಿಳಿದು ಬಂದಿತ್ತು. ಆದರೆ ಕಳೆದ ತಿಂಗಳು ನ್ಯೂ ಇಂಗ್ಲೆಂಡ್‌ ಜರ್ನಲ್‌ ಆಫ್‌ ಮೆಡಿಸಿನ್‌ನಲ್ಲಿ ಇದೇ ರೀತಿಯ ಸಂಶೋಧನೆ ವರದಿ ಪ್ರಕಟವಾಗಿದ್ದು, ಚೀನದ 1,000(ಶೇ.26) ಜನಸಂಖ್ಯೆಯ ಪೈಕಿ ಶೇ12.6 ರಷ್ಟು ಧೂಮಪಾನ ವ್ಯಸನಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು ಎಂದಿದೆ.

ಈ ಎಲ್ಲ ಅಂಶವನ್ನು ‌ಮನದಲ್ಲಿರಿಸಿಕೊಂಡು ಫ್ರಾನ್ಸ್‌ ಈ ನಿರ್ಧಾರ ಕೈಗೊಂಡಿದ್ದು, ಸಂಪೂರ್ಣವಾಗಿ ಸಂಶೋಧನ ಮಾಹಿತಿ ಹೊರ ಬರುವವರೆಗೂ ನಿಕೋಟಿನ್‌ ಮಾರಾಟದ ಮೇಲೆ ಮಿತಿ ಇರಲಿದೆ ಎಂದು ಹೇಳಿದೆ.

ಫ್ರಾನ್ಸ್‌ನಲ್ಲಿ ಪ್ರತಿ ವರ್ಷ ತಂಬಾಕಿನಿಂದಾಗಿ 70 ಸಾವಿರಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಇದನ್ನೂ ಗಮನಿಸುವುದು ಒಳಿತು ಎಂದಿರುವ ಫ್ರಾನ್ಸ್‌ ಆರೋಗ್ಯ ಸಚಿವ ಆಲಿವಿಯರ್‌ವೊರಾನ್‌, ಕೋವಿಡ್ ಹತ್ತಿಕ್ಕಲು ನಿಕೋಟಿನ್‌ ಉತ್ಪನ್ನಗಳನ್ನು ಖರೀದಿಸಬೇಡಿ. ಆದಷ್ಟು ಅವುಗಳಿಂದ ದೂರ ಇರಿ. ಅದೇ ಒಳಿತು ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.