Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
ಘಟನಾ ಸ್ಥಳಕ್ಕೆ ಸಚಿವ ಎಚ್.ಕೆ ಪಾಟೀಲ ಭೇಟಿ
Team Udayavani, Apr 19, 2024, 8:49 AM IST
ಗದಗ: ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಎಸ್ಪಿ ಬಿ.ಎಸ್. ನೇಮಗೌಡ ಪ್ರತಿಕ್ರಿಯಿಸಿದ್ದು, ಮಧ್ಯರಾತ್ರಿ ನಾಲ್ಕು ಜನರಾದ ಪ್ರಕಾಶ ಬಾಕಳೆ ಮಗ ಕಾರ್ತಿಕ್, ಸಂಬಂಧಿಕರಾದ ಪರಶುರಾಮ್, ಲಕ್ಷ್ಮೀ, ಆಕಾಂಕ್ಷಾ ಹತ್ಯೆ ಆಗಿದೆ.
ಕುಟುಂಬಸ್ಥರು ಹೇಳುವ ಪ್ರಕಾರ ರಾತ್ರಿ 2 ರಿಂದ 3 ಗಂಟೆ ಆಗಿದೆ ಎನ್ನಲಾಗಿದ್ದು, ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವುದು ಕಂಡು ಬರುತ್ತಿದೆ. ಯಾರು ಎಂಬುದು ಗೊತ್ತಾಗಿಲ್ಲ. ಪರಿಶೀಲನೆ ಮುಂದುವರೆದಿದೆ ಎಂದು ತಿಳಿಸಿದರು.
ಮುಂದುವರೆದು ಮಾತನಾಡಿ, ಆದಷ್ಟು ಬೇಗ ದಸ್ತಗಿರಿ ಮಾಡುತ್ತೇವೆ. ಕುಟುಂಬಸ್ಥರು ಹೇಳುವ ಪ್ರಕಾರ ರಾತ್ರಿ ಬಾಗಿಲು ಬಡೆದರೂ ತೆಗೆದಿಲ್ಲ. ಆದರೆ ಹೊರಗಡೆ ಬಂದು ನೋಡಿದಾಗ 2 ರೂಮ್ ನಲ್ಲಿ ಹತ್ಯೆ ಆಗಿತ್ತು.ಈ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ಟೆರೇಸ್ ನಿಂದ ಬಂದಿದ್ದಾರೆ ಎನ್ನಲಾಗುತ್ತಿದ್ದು, ಪರಿಶೀಲನೆ ಮಾಡುತ್ತಿದ್ದೇವೆ ಎಂದರು.
ಘಟನಾ ಸ್ಥಳಕ್ಕೆ ಸಚಿವ ಎಚ್.ಕೆ ಪಾಟೀಲ ಭೇಟಿ
ಘಟನಾ ಸ್ಥಳಕ್ಕೆ ಗದಗ ಜಿಲ್ಲಾ ಉಸ್ತುವಾರಿ, ಕಾನೂನು, ನ್ಯಾಯ, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ ಭೇಟಿ ನೀಡಿದ್ದಾರೆ.
ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಮನೆಗೆ ಭೇಟಿ ನೀಡಿದ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಸಚಿವರ ಮುಂದೆ ಅಳಲು ತೋಡಿಕೊಂಡ ಕುಟುಂಬಸ್ಥರು, ಆರೋಪಿಗಳನ್ನು ಬೇಗ ಪತ್ತೆ ಹಚ್ಚುವಂತೆ ಎಸ್.ಪಿ ಅವರಿಗೆ ಹೇಳಿ ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.
ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ
UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ
B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು
ಬಿಜೆಪಿ ಶಾಸಕ ಯತ್ನಾಳ ಶುಗರ್ ಫ್ಯಾಕ್ಟ್ರಿ ಹೆಂಗ್ ಕಟ್ಟಿದ್ರು: ಶಿವಾನಂದ ಪಾಟೀಲ