Anantnag-Rajouri; ಸ್ಪರ್ಧೆಯಿಂದ ಹಿಂದೆ ಸರಿದ ಗುಲಾಂ ನಬಿ ಆಜಾದ್
Team Udayavani, Apr 17, 2024, 8:59 PM IST
ಶ್ರೀನಗರ: ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಸಂಸ್ಥಾಪಕ ಗುಲಾಂ ನಬಿ ಆಜಾದ್ ಲೋಕಸಭೆ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ.
ಮಾಜಿ ಕಾಂಗ್ರೆಸ್ ನಾಯಕನನ್ನು ಅನಂತನಾಗ್-ರಾಜೌರಿ ಸಂಸದೀಯ ಕ್ಷೇತ್ರದ ಅಭ್ಯರ್ಥಿಯಾಗಿ ಡಿಪಿಎಪಿ ನಾಮನಿರ್ದೇಶನ ಮಾಡಿತ್ತು. ಅನಂತನಾಗ್ನಲ್ಲಿ ಬುಧವಾರ ನಡೆದ ಸಭೆಯಲ್ಲಿ ಗುಲಾಂ ನಬಿ ಆಜಾದ್ ಅವರು ಸ್ಪರ್ಧಿಸುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ.
ಏಪ್ರಿಲ್ 2 ರಂದು, ಮಾಜಿ ಕೇಂದ್ರ ಸಚಿವ ಆಜಾದ್ ಅನಂತನಾಗ್-ರಜೌರಿ ಕ್ಷೇತ್ರದಿಂದ ಸ್ಪರ್ಧಿಸಲು ನಾಮನಿರ್ದೇಶನಗೊಂಡಿದ್ದರು. ಕಾಶ್ಮೀರದ ಹೈ ವೋಲ್ಟೇಜ್ ಕ್ಷೇತ್ರ ಎಂದು ಪರಿಗಣಿಸಲಾಗಿತ್ತು.
ಡಿಪಿಎಪಿಯ ಅಭ್ಯರ್ಥಿಯಾಗಿ ಆಜಾದ್ ಅವರು ಪಿಡಿಪಿ ನಾಯಕಿ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಇಂಡಿ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ನ್ಯಾಷನಲ್ ಕಾನ್ಫರೆನ್ಸ್ನ ಹಿರಿಯ ನಾಯಕ ಮಿಯಾನ್ ಅಲ್ತಾಫ್ ಅಹ್ಮದ್ ಅವರನ್ನು ಎದುರಿಸಬೇಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Constitution ಬದಲಿಸಲು ಕಾಂಗ್ರೆಸ್ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ
PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್ ನಕಾರ
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ