ಪ್ರವಾಸೋದ್ಯಮ ಅಭಿವೃದ್ಧಿ: ಉಡುಪಿಗೆ ಶೀಘ್ರ ಗೋವಾ ಸಿಎಂ: ರಘುಪತಿ ಭಟ್
Team Udayavani, Jun 24, 2019, 10:41 AM IST
Goa CM
ಉಡುಪಿ: ಪ್ರವಾಸೋದ್ಯಮ ಅಭಿವೃದ್ಧಿಯನ್ನು ಉಡುಪಿ ಜಿಲ್ಲೆಯಲ್ಲಿ ಸಾಧಿಸುವ ನಿಟ್ಟಿನಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಶೀಘ್ರವೇ ಉಡುಪಿಗೆ ಆಗಮಿಸಲಿದ್ದಾರೆ.
ಗೋವಾದಲ್ಲಿ ಮುಖ್ಯಮಂತ್ರಿಯವರನ್ನು ಕಂಡು ಭೇಟಿ ಮಾಡಿದ ಶಾಸಕ ಕೆ. ರಘುಪತಿ ಭಟ್ ಅವರು ಮಾಡಿದ ಮನವಿ ಮೇರೆಗೆ ಅವರು ಉಡುಪಿಗೆ ಭೇಟಿ ಕೊಡಲು ಒಪ್ಪಿಗೆ ಸೂಚಿಸಿದ್ದಾರೆ. ಈಗ ಪ್ರವಾಸಿಗರು ದೊಡ್ಡ ಸಂಖ್ಯೆಯಲ್ಲಿ ಗೋವಾಕ್ಕೆ ಬರುತ್ತಾರೆ. ಅವರನ್ನು ಅಲ್ಲಿನ ಬಳಿಕ ಉಡುಪಿಯತ್ತ ಕರೆಯಲು ಬೇಕಾದ ಪ್ರವಾಸೋದ್ಯಮ ಅಭಿವೃದ್ಧಿಯನ್ನು ಇಲ್ಲಿ ಸಾಧಿಸಬೇಕಾಗಿದೆ. ಈ ನಿಟ್ಟಿನಲ್ಲಿ ಎರಡೂ ಸರಕಾರಗಳ ಸಹಕಾರದಿಂದ ಅಭಿವೃದ್ಧಿ ಕೆಲಸ ಮಾಡಬೇಕಾಗಿದೆ. ಮುಖ್ಯಮಂತ್ರಿಯವರು ಆ. 15ರ ಬಳಿಕ ಉಡುಪಿಗೆ ಬರುವುದಾಗಿ ಹೇಳಿದ್ದಾರೆಂದು ಭಟ್ “ಉದಯವಾಣಿ’ಗೆ ತಿಳಿಸಿದರು.
ಮೀನುಗಾರರು ಮೀನುಗಾರಿಕೆಗೆ ತೆರಳಿದಾಗ ಕೆಲವು ಸಮಸ್ಯೆಗಳಾಗುತ್ತವೆ. ಇವುಗಳನ್ನು ಸೌಹಾರ್ದಯುತವಾಗಿ ಪರಿಹರಿಸಬೇಕೆಂದು ಕೇಳಿದಾಗ ಸಹಕಾರ ಕೊಡುವುದಾಗಿ ಮುಖ್ಯಮಂತ್ರಿ ತಿಳಿಸಿದರು. ವರ್ಷದ ಹಿಂದೆ ಮೀನುಗಾರಿಕಾ ಬೋಟಿನ ಸಮಸ್ಯೆಯಾದಾಗ ಆಗಿನ ಮುಖ್ಯಮಂತ್ರಿ ಪಾರಿಕ್ಕರ್ಗೆ ಆರೋಗ್ಯ ಸರಿ ಇಲ್ಲದಿದ್ದಾಗ ಸ್ಪೀಕರ್ ಆಗಿದ್ದ ಪ್ರಮೋದ್ ಸಾವಂತ್ ಅವರು ಸಹಕಾರ ನೀಡಿದ್ದರೆಂದು ಭಟ್ ಸ್ಮರಿಸಿಕೊಂಡರು. ಉಡುಪಿ ಪ್ರಸಾದ್ ನೇತ್ರಾಲಯದ ಮುಖ್ಯಸ್ಥ ಡಾ| ಕೃಷ್ಣಪ್ರಸಾದ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ