ಮರದ ಬೇರಿನಲ್ಲಿ ಸಿಲುಕಿದ ಕಾಡುಕೋಣ ಮರಿ-ಗಾಯ
Team Udayavani, May 27, 2020, 4:02 PM IST
ಹೊಸನಗರ: ಬಾಳಮನೆಯಲ್ಲಿ ಮರದ ಬೇರಿನಲ್ಲಿ ಕಾಲುಗಳು ಸಿಲುಕಿ ಗಾಯಗೊಂಡಿದ್ದ ಕಾಡುಕೋಣ ಮರಿಗೆ ವೈದ್ಯರು ಚಿಕಿತ್ಸೆ ನೀಡಿದರು
ಹೊಸನಗರ: ಧರೆಯಿಂದ ಇಳಿಯುವಾಗ ಮರದ ಬೇರಿನಲ್ಲಿ ಕಾಲುಗಳು ಸಿಲುಕಿಕೊಂಡ ಪರಿಣಾಮ ಕಾಡುಕೋಣ ಮರಿಯೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ನಗರ ವಲಯ ಅರಣ್ಯ ವ್ಯಾಪ್ತಿಯ ಬಾಳಮನೆಯಲ್ಲಿ ಮಂಗಳವಾರ ನಡೆದಿದೆ.
ಅಂಡಗದೂರು ಗ್ರಾಪಂ ವ್ಯಾಪ್ತಿಯ ಬಾಳಮನೆಯ ಮರವೊಂದರ ಬಳಿ ಕಾಡುಕೋಣ ಮರಿಯೊಂದು ಸಿಲುಕಿ ಕೊಂಡು ಒದ್ದಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಡಿಆರ್ ಎಫ್ಒ ಯೋಗರಾಜ್, ಸಿಬ್ಬಂದಿ ರಾಮು ಸ್ಥಳಕ್ಕೆ ತೆರಳಿ ಕಾಡುಕೋಣ ಮರಿಯನ್ನು ಅರಣ್ಯ ಇಲಾಖೆ ಜೀಪ್ನಲ್ಲಿ ಪಶು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ನಗರ ಪಶು ಆಸ್ಪತ್ರೆಯ ಡಾ| ಮಹಮದ್ ಖಲೀಲ್, ಮರದ ಬೇರಿನಲ್ಲಿ ಕಾಲುಗಳು ಸಿಲುಕಿದ್ದರಿಂದ ಹಿಂಭಾಗದ ಕಾಲುಗಳು ಸಂಪೂರ್ಣ ಸ್ವಾಧೀನ ಕಳೆದುಕೊಂಡಿವೆ. ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆಗೆ ಹೇಗೆ ಸ್ಪಂದಿಸುತ್ತದೆ ಎಂಬುದನ್ನು ನೋಡಿ ಮುಂದಿನ ಚಿಕಿತ್ಸೆ ನೀಡಬೇಕೆಂದರು. ಅರಣ್ಯಾಧಿಕಾರಿ ಎಂ.ಪಿ.ಆದರ್ಶ ಮಾತನಾಡಿ, ಈಗಾಗಲೇ ಕಾಡುಕೋಣ ಮರಿಗೆ ಅರಣ್ಯ ಇಲಾಖೆಯ ಕ್ವಾರ್ಟರ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರೊಂದಿಗೆ ಮಾತನಾಡಿ ಅಗತ್ಯವಿದ್ದರೆ ತಾವರೆಕೊಪ್ಪಕ್ಕೆ ರವಾನಿಸಲಾಗುವುದೆಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ