ಹದಗೆಟ್ಟ ಹೊಸಂಗಡಿ -ಬಜೆ ರಸ್ತೆ: ಪ್ರತಿಭಟಿಸಿದರೂ ಪ್ರಯೋಜನವಿಲ್ಲ
Team Udayavani, Jul 9, 2019, 5:33 AM IST
ಹಿರಿಯಡಕ: ಇಲ್ಲಿನಗ್ರಾ.ಪಂ. ವ್ಯಾಪ್ತಿಯ ಬುಕ್ಕಿಗುಡ್ಡೆಯಿಂದ ಕೈರು, ಹೊಸಂಗಡಿ ಬಜೆಗೆ ತೆರಳುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ನಿತ್ಯ ಸಂಚಾರಕ್ಕೆ ಸಮಸ್ಯೆಯಾಗಿದೆ.
ಕಳೆದ ಒಂದು ವರ್ಷಗಳಿಂದಲೂ ಸಮಸ್ಯೆಗೆ ಮುಕ್ತಿಸಿಗದಿದ್ದರಿಂದ ಗ್ರಾಮಸ್ಥರೇ ಈಗ ಹೊಂಡ ಗುಂಡಿಗಳಿಗೆ ಕಾಂಕ್ರೀಟ್ ಹಾಕಿ ತಾತ್ಕಾಲಿಕ ದುರಸ್ತಿಗೆ ಮುಂದಾಗಿದ್ದಾರೆ.
ಮಳೆಗಾಲದಲ್ಲಿ ರಸ್ತೆಯಲ್ಲೇ ನೀರು ಹರಿಯುತ್ತಿದ್ದು, ಹೊಂಡಗುಂಡಿಗಳಾಗಿದೆ. ಕೆಸರಿನಿಂದ ಈ ಕೂಡಿದ ಮಾರ್ಗದಲ್ಲೇ ಉದ್ಯೋಗಿಗಳು, ವಿದ್ಯಾರ್ಥಿಗಳು, ಇತರ ಕೆಲಸಕ್ಕೆ ಹೋಗುವವರು ಸಂಚರಿಸ ಬೇಕಾಗಿದೆ.
ಪ್ರತಿಭಟಿಸಿದರೂ ಪ್ರಯೋಜನವಿಲ್ಲ
ಕಳೆದ ಬಾರಿ ಸುಮಾರು 500 ಕ್ಕಿಂತ ಹೆಚ್ಚಿನ ಸಂಖ್ಯೆಯ ಗ್ರಾಮಸ್ಥರು ಬಜೆಯಿಂದ ಪೆರ್ಡೂರು ಗ್ರಾ.ಪಂ.ವರೆಗೆ ಕಾಲ್ನಡಿಗೆಯ ಮೂಲಕ ಪ್ರತಿಭಟನೆ ನಡೆಸಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಆದರೂ ಈ ವರೆಗೆ ಯಾವುದೇ ಪ್ರಯೋಜನವಾಗಿಲ್ಲ.
ಮನವಿಗೂ ಸ್ಪಂದಿಸಿಲ್ಲ
ರಸ್ತೆ ಅಭಿವೃದ್ಧಿ ಪಡಿಸುವಂತೆ ತಾ.ಪಂ., ಜಿ.ಪಂ, ಶಾಸಕರು, ಡಿಸಿಗೆ ಮನವಿ ಸಲ್ಲಿಸಿ ದ್ದರೂ ಯಾರೂ ಮನವಿಗೆ ಓಗೊಟ್ಟಿಲ್ಲ. ರಸ್ತೆ ಪರಿಸ್ಥಿತಿ ಪರಿಶೀಲನೆಗೂ ಯಾರೂ ಬಂದಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಬಸ್ಸುಗಳ ಸಂಚಾರ ಸ್ಥಗಿತ
ಈ ಮಾರ್ಗದಲ್ಲಿ 6 ಬಸ್ಸುಗಳಿಗೆ ಸಂಚಾರಕ್ಕೆ ಪರವಾನಗಿ ಇದ್ದು, 2 ಬಸ್ಸುಗಳು ಮಾತ್ರ ಸಂಜೆ ವೇಳೆ ಓಡಾಡುತ್ತಿವೆ. ಕಲೆಕ್ಷನ್ಗಿಂತ ಬಸ್ಸುಗಳ ರಿಪೇರಿಗೆ ಹೆಚ್ಚು ವೆಚ್ಚವಾಗುವುದರಿಂದ ಬಸ್ಸು ಸಂಚಾರ ಸ್ಥಗಿತಗೊಳಿಸಿರುವುದಾಗಿ ಬಸ್ಸಿನವರು ಹೇಳುತ್ತಾರೆ. ಇದರೊಂದಿಗೆ ಖಾಸಗಿ ಬಸ್ನವರು, ರಿಕ್ಷಾದವರೂ ಬರುತ್ತಿಲ್ಲ. ಪರಿಣಾಮ ನಿತ್ಯ ಸಂಚರಿಸುವ ನಾಗರಿಕರು ಮತ್ತು ವಿದ್ಯಾರ್ಥಿಗಳ ಮೇಲಾಗಿದೆ.
ಮುಖ್ಯ ರಸ್ತೆಗೆ ತಡೆ ಎಚ್ಚರಿಕೆ
ಇನ್ನಾದರೂ ಸಂಬಂಧ ಪಟ್ಟ ಇಲಾಖೆ ರಸ್ತೆ ದುರಸ್ತಿಗೆ ಮುಂದಾಗದಿದ್ದಲ್ಲಿ, ಮುಖ್ಯ ರಸ್ತೆ ತಡೆದು ಪ್ರತಿಭಟಿಸುವ ಎಚ್ಚರಿಕೆಯನ್ನು ಗ್ರಾಮಸ್ಥರು ನೀಡಿದ್ದಾರೆ.
ತಾತ್ಕಾಲಿಕ ದುರಸ್ತಿಗೆ ಮುಂದಾದ ಗ್ರಾಮಸ್ಥರು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!