ಶಾಲೆಗೆ ಸೇರ್ಪಡೆಗೊಂಡ ಪ್ರತಿ ವಿದ್ಯಾರ್ಥಿಯ ಹೆಸರಿನಲ್ಲಿ 2 ಸಾವಿರ ರೂ.ಠೇವಣಿ
ಕುಚ್ಚೂರು ಗ್ರಾ.ಪಂ. ವ್ಯಾಪ್ತಿಯ ಸರಕಾರಿ ಶಾಲೆ
Team Udayavani, May 31, 2019, 6:10 AM IST
ಹೆಬ್ರಿ :ಇಲ್ಲಿಗೆ ಸಮೀಪದ ಕುಚ್ಚೂರು ಗ್ರಾ.ಪಂ. ವ್ಯಾಪ್ತಿಯ 4 ಸರಕಾರಿ ಶಾಲೆಗಳಿಗೆ 2018-19 ನೇ ಸಾಲಿನಲ್ಲಿ ಒಂದನೇ ತರಗತಿಗೆ ದಾಖಲಾದ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ ತಲಾ 2000 ರೂ.ಡೆಪೋಸಿಟ್ ನೀಡಲು ದಾನಿಗಳು ಮುಂದಾಗಿದ್ದಾರೆ.
ಸ್ಥಳೀಯ ನಿವಾಸಿ ಬೇಳಂಜೆ ಹಾಲು ಉತ್ಪಾದಕರ ಸಂಘ ಅಧ್ಯಕ್ಷರಾದ ಭೂತುಗುಂಡಿ ಕರುಣಾಕರ ಶೆಟ್ಟಿ ಅವರ ನೇತೃತ್ವದಲ್ಲಿ ದಾನಿಗಳ ನೆರವಿನೊಂದಿಗೆ .ಸ.ಪ್ರಾ. ಶಾಲೆ ಕುಚ್ಚೂರು , ಸ.ಕಿ.ಪ್ರಾ. ಶಾಲೆ ದಾಸನ ಗುಡ್ಡೆ, ಸ.ಕಿ.ಪ್ರಾ. ಶಾಲೆ ದೂಪದ ಕಟ್ಟೆ ಹಾಗೂ ಸ.ಕಿ.ಪ್ರಾ. ಶಾಲೆ ಸೊಳ್ಳೆಕಟ್ಟೆ ಈ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ವಿನೂತನ ಯೋಜನೆಗೆ ಮುಂದಾಗಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ವ್ಯಾಮೋಹದಿಂದ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗುತ್ತಿರುವ ಹಿನ್ನಲೆಯಲ್ಲಿ ಸರಕಾರಿ ಶಾಲೆಗಳನ್ನು ಉಳಿಸಬೇಕು ಬೆಳೆಸಬೇಕು ಎಂಬ ಉದ್ದೇಶದಿಂದ ಕಳೆದ 6 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೆ ಆದ ಸಹಕಾರವನ್ನು ಕರುಣಾಕರ ಶೆಟ್ಟಿ ನೀಡುತ್ತಿದ್ದು ಇದರರಿಂದ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ನೆರವಾಗಿದೆ.
ನಿರಂತರ ಶೈಕ್ಷಣಿಕ ಸೇವೆ
ಮಂಗಳೂರು ಬಂಟರ ಮಾತೃಸಂಘ ಸಂಘದ ನಿರ್ದೇಶಕರಾದ ಭೂತಗುಂಡಿ ಕರುಣಾಕರ ಶೆಟ್ಟಿ ಹೆಬ್ರಿ ಸಂಘದ ಮೂಲಕ ಮದುವೆ ಆಗದವರಿಗೆ ಕರಿಮಣಿ ಭಾಗ್ಯ,ಬಡವಿದ್ಯಾರ್ಥಿಗಳು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ,ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಸಹಾಯಧನವನ್ನು ದಾನಿಗಳ ನೆರವಿನಿಂದ ಇವರ ನೇತೃತ್ವದಲ್ಲಿ ನೀಡುತ್ತಾ ಬಂದಿದ್ದಾರೆ.
ಕಳೆದ 6 ವರ್ಷಗಳಿಂದ ಉಚಿತ ಪುಸ್ತಕ ವಿತರಣೆ ಕುಚ್ಚಾರು ಗ್ರಾಮ ವ್ಯಾಪ್ತಿಯ 6 ಸರಕಾರಿ ಶಾಲೆಗಳಿಗೆ ಕಳೆದ 6 ವರ್ಷಗಳಿಂದ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕಗಳನ್ನು ದಾನಿಗಳ ನೆರವಿನಿಂದ ಕರುಣಾಕರ ಶೆಟ್ಟಿ ನೇತೃತವದಲ್ಲಿ ನೀಡಲಾಗುತ್ತಿದೆ.ಅಲ್ಲದೆ ಇವರ ನೇತೃತ್ವದಲ್ಲಿ ಪ್ರೌಢ ಶಾಲೆಯ ಆಯ್ದ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ಶಿಕ್ಷಣ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
MUST WATCH
ಹೊಸ ಸೇರ್ಪಡೆ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್