ಚೀನ ಜತೆಗಿನ ಗಡಿ ತಂಟೆ ಪರಿಹರಿಸುವ ಟ್ರಂಪ್‌ ಆಫ‌ರ್‌ಗೆ ಕೇಂದ್ರ ತಣ್ಣೀರು


Team Udayavani, May 29, 2020, 6:10 AM IST

Donald-Trump-01-730

ಹೊಸದಿಲ್ಲಿ/ನ್ಯೂಯಾರ್ಕ್‌: ಚೀನ ಜತೆಗಿನ ಗಡಿ ತಂಟೆ ಪರಿಹರಿಸುವ ಬಗ್ಗೆ ನೆರವು ನೀಡುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೀಡಿದ ಆಫ‌ರ್‌ಗೆ ಕೇಂದ್ರ ತಣ್ಣೀರು ಹಾಕಿದೆ.

ಸದ್ಯ ಉಂಟಾಗಿರುವ ಗಡಿ ತಂಟೆಯನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುತ್ತಿದೆ ಎಂದು ಗುರುವಾರ ವಿದೇಶಾಂಗ ಇಲಾಖೆ ಸಮಜಾಯಿಷಿ ನೀಡಿದೆ.

ಹೊಸದಿಲ್ಲಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಇಲಾಖೆ ವಕ್ತಾರ ಅನುರಾಗ್‌ ಶ್ರೀವಾಸ್ತವ ಈ ಮಾಹಿತಿ ನೀಡಿದ್ದಾರೆ. ಭಾರತ ಮತ್ತು ಚೀನದ ನಡುವೆ ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಪರಸ್ಪರ ಚರ್ಚೆ ನಡೆಸುತ್ತಿವೆ.

ಉಭಯ ದೇಶಗಳ ನಡುವೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು 1993ರಿಂದ ಈ ತನಕ ಐದು ವಿವಿಧ ಒಪ್ಪಂದಗಳು ಜಾರಿಯಲ್ಲಿವೆ. ಹೀಗಾಗಿ ಯಾರ ಮಧ್ಯಸ್ಥಿಕೆಯೂ ಬೇಡ ಎಂದು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷರು ನೇರವಾಗಿಯೇ ವಿವಾದದ ಬಗ್ಗೆ ಮಧ್ಯಸ್ಥಿಕೆ ನಡೆಸುತ್ತೇನೆ ಎಂದು ಹೇಳಿದ್ದಾರೆಯೇ ಎಂಬ ಪ್ರಶ್ನೆಗೆ ವಕ್ತಾರರು ಮೌನವಾಗಿಯೇ ಉಳಿದರು.

ಶಾಂತಿಗೆ ಬದ್ಧ: ಪೂರ್ವ ಲಡಾಖ್‌ ಪರಿಸ್ಥಿತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಭಾರತ ಶಾಂತಿ ಸ್ಥಾಪನೆಗೆ ಬದ್ಧವಾಗಿದೆ ಎಂದರು. ದೇಶದ ಸೇನೆ ಗಡಿಯಲ್ಲಿ ಜವಾಬ್ದಾರಿಯುತವಾಗಿಯೇ ಹೊಣೆ ನಿಭಾಯಿಸಿದೆ ಎಂದರು.

ತಿಳಿಗೊಳ್ಳದ ಸಂದಿಗ್ಧತೆ: ಇದೇ ವೇಳೆ ಪೂರ್ವ ಲಡಾಖ್‌ನಲ್ಲಿ ಉಂಟಾಗಿರುವ ಪರಿಸ್ಥಿತಿ ತಿಳಿಯಾಗಿಲ್ಲ. ಗ್ಯಾಲ್ವನ್‌ ಕಣಿವೆ ಹಾಗೂ ಪಾಂಗೊಂಗ್‌ ತ್ಸೊ ಪ್ರಾಂತ್ಯಗಳ ಒಟ್ಟು ನಾಲ್ಕು ಕಡೆ ಇಬ್ಬದಿಯ ಸೈನಿಕರು ಗಣನೀಯ ಸಂಖ್ಯೆಯಲ್ಲಿ ಜಮಾವಣೆಗೊಂಡಿರುವುದು ಇನ್ನೂ ಮುಂದುವರಿದಿದೆ.

ಭಾರತ ಮತ್ತು ಚೀನದ ನೈಜ ಗಡಿಯಲ್ಲಿ ಸೈನಿಕರ ಮುಖಾಮುಖಿ ಉಂಟಾಗಿಲ್ಲ ಎಂದು ಚೀನ ಸೇನೆ ಹೇಳಿದೆ. ಆದರೆ, ಚೀನ ಹೇಳಿದ್ದೇ ಬೇರೆ, ಅಲ್ಲಿ ನಡೆಯುತ್ತಿರುವುದೇ ಬೇರೆ ಎನ್ನುವಂತಾಗಿದೆ.

ಪಾಂಗೊಂಗ್‌ ತ್ಸೋ ಸರೋವರ ಬಳಿಯ ಒಂದು ಕಡೆ ಹಾಗೂ ಗ್ಯಾಲ್ವನ್‌ ಕಣಿವೆಯ ಮೂರು ಕಡೆಯಲ್ಲಿರುವ ನೈಜ ಗಡಿ ರೇಖೆಗೆ ತೀರಾ ಹತ್ತಿರದವರೆಗೂ ತನ್ನ ಸೈನಿಕರನ್ನು ಚೀನ ಸೇನೆ ರವಾನಿಸಿರುವುದು ಖಚಿತವಾಗಿದೆ.

ಭಾರತ- ಚೀನ ನಡುವೆ ಉದ್ಭವಿಸಿರುವ ಗಡಿಬಿಕ್ಕಟ್ಟಿನ ವಿಚಾರದ ಬಗ್ಗೆ ವಿಶ್ವಸಂಸ್ಥೆಯೂ ಈಗ ಧ್ವನಿಯೆತ್ತಿದೆ. ಎರಡೂ ರಾಷ್ಟ್ರಗಳ ನಡುವೆ ತಲೆದೋರಿರುವ ಗಡಿ ಸಮಸ್ಯೆಯನ್ನು ಪರಸ್ಪರ ಮಾತುಕತೆಯಿಂದ ಬಗೆ ಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.