ಏಷ್ಯಾ ಕಪ್ ಗೆ ಭಾರತ ತಂಡ ಪ್ರಕಟ; ಬುಮ್ರಾ, ಹರ್ಷಲ್ ಪಟೇಲ್ ಗಾಯಾಳಾಗಿ ಹೊರಗೆ
Team Udayavani, Aug 8, 2022, 9:55 PM IST
ನವದೆಹಲಿ: ಏಷ್ಯಾ ಕಪ್ ಭಾರತ ತಂಡವನ್ನು ಸೋಮವಾರ ಪ್ರಕಟವಾಗಿದ್ದು ರೋಹಿತ್ ಶರ್ಮಾ ಮುನ್ನೆಡಸಲಿದ್ದು,ಹಿರಿಯ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದ ಟಿ20 ಟೂರ್ನಿಯಿಂದ ಹೊರಗುಳಿಯಲಿದ್ದಾರೆ.
ಕೆ. ಎಲ್. ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಆರ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಜಡೇಜಾ, ಆರ್. ಅಶ್ವಿನ್, ವೈ. ಚಾಹಲ್ , ಆರ್. ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಹರ್ಷಲ್ ಪಟೇಲ್ ಗಾಯದ ಕಾರಣ ಆಯ್ಕೆಗೆ ಲಭ್ಯರಿರಲಿಲ್ಲ. ಮೂವರು ಆಟಗಾರಾರಾದ ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಮತ್ತು ದೀಪಕ್ ಚಹಾರ್ ಅವರನ್ನು ಸ್ಟ್ಯಾಂಡ್ಬೈ ಎಂದು ಹೆಸರಿಸಲಾಗಿದೆ.
ಏಷ್ಯಾ ಕಪ್ ಪಂದ್ಯಾವಳಿಯ 15 ನೇ ಆವೃತ್ತಿಯು ಯುಎಇಯಲ್ಲಿ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ ನಡೆಯಲಿದ್ದು, ಆರು ತಂಡಗಳ ನಡುವೆ ನಡೆಯಲಿದೆ.
ಏಳು ಬಾರಿ ಟ್ರೋಫಿ ಗೆದ್ದಿರುವ ಹಾಲಿ ಚಾಂಪಿಯನ್ ಭಾರತವೂ ಅತ್ಯಂತ ಯಶಸ್ವಿ ತಂಡವಾಗಿದ್ದು, ಪಂದ್ಯಾವಳಿಯ ಹಿಂದಿನ ಆವೃತ್ತಿಯು ಏಕದಿನ ಮಾದರಿಯಲ್ಲಿ ನಡೆದಿದ್ದರೆ, ಈ ಆವೃತ್ತಿಯು ಟಿ 20 ಸ್ವರೂಪದಲ್ಲಿ ನಡೆಯುತ್ತಿದೆ.
ಆರು ತಂಡಗಳನ್ನು ಭಾರತ, ಪಾಕಿಸ್ತಾನ ಮತ್ತು ಎ ಗುಂಪಿನಲ್ಲಿ ಅರ್ಹತಾ ತಂಡದೊಂದಿಗೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ ಮತ್ತು ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಬಿ ಗುಂಪಿನಲ್ಲಿ ಆಡಲಿವೆ. ಪ್ರತಿಯೊಂದು ತಂಡವು ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೂಪರ್ 4 ಸುತ್ತಿಗೆ ಮುನ್ನಡೆಯುತ್ತವೆ. ಸೂಪರ್ 4ರಲ್ಲಿ ಅಗ್ರ 2 ತಂಡಗಳು ಫೈನಲ್ಗೆ ಅರ್ಹತೆ ಪಡೆಯಲಿವೆ ಎಂದು ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ