ಪ್ರತಿಷ್ಠಾನದ ಹಣ ಕಲ್ಯಾಣ ಯೋಜನೆಗಳಿಗೆ ಬಳಕೆ: ಬಿಜೆಪಿ ಟೀಕೆಗೆ ಕಾಂಗ್ರೆಸ್‌ನಿಂದ ಸ್ಪಷ್ಟನೆ


Team Udayavani, Jun 28, 2020, 10:27 AM IST

ಪ್ರತಿಷ್ಠಾನದ ಹಣ ಕಲ್ಯಾಣ ಯೋಜನೆಗಳಿಗೆ ಬಳಕೆ: ಬಿಜೆಪಿ ಟೀಕೆಗೆ ಕಾಂಗ್ರೆಸ್‌ನಿಂದ ಸ್ಪಷ್ಟನೆ

ಹೊಸದಿಲ್ಲಿ: 2005-06ರಲ್ಲಿ ರಾಜೀವ್‌ಗಾಂಧಿ ಪ್ರತಿಷ್ಠಾನಕ್ಕೆ (ಆರ್‌ಜಿಎಫ್) ಚೀನದ ರಾಯಭಾರ ಕಚೇರಿಯಿಂದ ದೇಣಿಗೆ ಸ್ವೀಕರಿಸ­ಲಾಗಿದೆ ಎಂಬುದನ್ನು ಕಾಂಗ್ರೆಸ್‌ ಒಪ್ಪಿ­ಕೊಂ ಡಿದೆ. ಅಲ್ಲದೆ, ಈ ಹಣವನ್ನು ಕಲ್ಯಾಣ ಯೋ ಜನೆ­ಗಳಿಗೆ ಬಳಸಲಾಗಿದೆ ಎಂದು ಸ್ಪಷ್ಟಪಡಿಸಿದೆ. ಆದರೆ, ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ಈ ದೇಣಿಗೆ ಸ್ವೀಕರಿಸಲಾಗಿದೆ ಎಂಬ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಆರೋಪವನ್ನು ಅದು ಸಾರಾಸಗಟಾಗಿ ತಳ್ಳಿಹಾಕಿದೆ.

ಕಾಂಗ್ರೆಸ್‌ ವಕ್ತಾರ ರಂದೀಪ್‌ ಸಿಂಗ್‌ ಸುರ್ಜೆ­­ವಾಲಾ ಅವರು ಈ ಸಂಬಂಧ ಪ್ರಕಟಣೆ­ಯೊಂದನ್ನು ನೀಡಿದ್ದು, ಚೀನದ ರಾಯಭಾರ ಕಚೇರಿಯಿಂದ ಪ್ರತಿಷ್ಠಾನಕ್ಕೆ ನೀಡಲಾದ 1.45 ಕೋಟಿ ರೂ.ಗಳ ದೇಣಿಗೆಯನ್ನು ದಿವ್ಯಾಂಗರ ಕಲ್ಯಾಣಕ್ಕಾಗಿ ಮತ್ತು ಭಾರತ-ಚೀನ ಸಂಬಂಧ­ಗಳ ಸಂಶೋಧನಾ ಅಧ್ಯಯನಕ್ಕಾಗಿ ಬಳಸಲಾ­ಗಿದೆ. ಇನ್ನು, ಪ್ರತಿಷ್ಠಾನಕ್ಕೆ ಪ್ರಧಾನ­ಮಂತ್ರಿ ಪರಿ­ಹಾರ ನಿಧಿಯಿಂದ ನೀಡಲಾಗಿ­ರುವ 20 ಲಕ್ಷ ರೂ.ಗಳಿಗೂ ಅಧಿಕ ಮೊತ್ತದ ಅನುದಾನವನ್ನು ಸುನಾಮಿ ಸಂತ್ರಸ್ತರ ಪರಿಹಾರ ಕಾರ್ಯಗಳಿ­ಗಾಗಿ ಬಳಸಲಾಗಿದೆ ಎಂದು ತಿಳಿಸಿದ್ದಾರೆ.

ಹಣ ಸ್ವೀಕರಿಸಿದ್ದನ್ನು ದಾಖಲೆಗಳಲ್ಲಿ ತೋರಿ­ಸ­ಲಾಗಿದೆ. ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ ವಿಚಾರದಲ್ಲಿ ಪ್ರತಿಷ್ಠಾನ, ಹಣದ ಲೆಕ್ಕಪತ್ರ­ಗಳನ್ನು ಸರಿಯಾಗಿ ತೋರಿಸಿದೆ. ಎಲ್ಲವೂ ಕಾನೂನುಬದ್ಧವಾಗಿಯೇ ಇವೆ. ಇದರಲ್ಲಿ ಯಾವುದೇ ರಹಸ್ಯಗಳಿಲ್ಲ ಎಂದು ಅವರು ತಿಳಿಸಿದ್ದಾರೆ. ಚೀನ ಆಕ್ರಮಣದಿಂದ ದೇಶದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಬಿಜೆಪಿ ಇಂತಹ ಆರೋಪ ಮಾಡುತ್ತಿದೆ ಎಂದಿದ್ದಾರೆ.

ನಡ್ಡಾ ಮಾತು ಅರ್ಧ ಸತ್ಯ: ಚಿದಂಬರಂ
ಇದೇ ವೇಳೆ, ಬಿಜೆಪಿ ಅಧ್ಯಕ್ಷರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಹಿರಿಯ ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ, ನಡ್ಡಾ ಅವರ ಆರೋಪದಲ್ಲಿ ಅರ್ಧ ಸತ್ಯವಿದೆ. ಯಾವುದೇ ಪ್ರತಿಷ್ಠಾನ, ಚಿಂತಕರ ವೇದಿಕೆಗಳು ದೇಣಿಗೆ ಹಣದಿಂದಲೇ ನಡೆಯುತ್ತವೆ ಎಂಬುದು ಸಾಮಾನ್ಯ ಸಂಗತಿ. ರಾಜೀವ್‌ಗಾಂಧಿ ಪ್ರತಿಷ್ಠಾನದ ದೇಣಿಗೆ ವಿಚಾರದಲ್ಲಿ ಎಲ್ಲವೂ ಕಾನೂನುಬದ್ಧವಾಗಿಯೇ ಇವೆ ಎಂದು ತಿರುಗೇಟು ನೀಡಿದ್ದಾರೆ. ಒಂದು ವೇಳೆ, ಚೀನದಿಂದ ಪಡೆದ ದೇಣಿಗೆಯನ್ನು ಪ್ರತಿಷ್ಠಾನ ಹಿಂತಿರುಗಿಸಿದರೆ, ಚೀನ ತನ್ನ ಸೇನೆಯನ್ನು ಲಡಾಖ್‌ ಗಡಿಭಾಗದಿಂದ ಹಿಂತೆಗೆದುಕೊಳ್ಳುತ್ತದೆ ಎಂದು ಪ್ರಧಾನಿ ಮೋದಿಯವರು ದೇಶಕ್ಕೆ ಭರವಸೆ ನೀಡಬಹುದೇ ಎಂದು ಅವರು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.