ಹೊಸ ಪ್ರಕರಣವಿಲ್ಲ: ಗುರುವಾರ ನಿರಾಳ
375 ಸೋಂಕಿತರಿಗೆ ಮುಂದುವರಿದ ಚಿಕಿತ್ಸೆಸೋಂಕು ತಡೆಗೆ ಮತ್ತೆ 7 ಕಂಟೇನ್ಮೆಂಟ್ ಝೋನ್ ರಚನೆ
Team Udayavani, Jun 5, 2020, 10:36 AM IST
ಕಲಬುರಗಿ: ಸತತವಾಗಿ ಎರಡು ದಿನಗಳ ತಲಾ ನೂರು ಕೋವಿಡ್ ಪಾಸಿಟಿವ್ ಪ್ರಕರಣಗಳ ಪತ್ತೆಯಿಂದ ತತ್ತರಿಸಿದ್ದ ಜಿಲ್ಲೆಯಲ್ಲಿ ಗುರುವಾರ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಇದರಿಂದ ಜನತೆ ಕೊಂಚ ನಿರಾಳರಾಗುವಂತೆ ಮಾಡಿತ್ತು.
ಮಂಗಳವಾರ 100 ಮತ್ತು ಬುಧವಾರ 105 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟು, ಎರಡೇ ದಿನದಲ್ಲಿ 205 ಪ್ರಕರಣಗಳು ದಾಖಲಾಗಿದ್ದವು. ಇದರೊಂದಿಗೆ ಕೋವಿಡ್ ಸೋಂಕಿತರ ಜಿಲ್ಲೆಗಳ ಪಟ್ಟಿಯಲ್ಲಿ ಕಲಬುರಗಿ ಪ್ರಥಮ ಸ್ಥಾನಕ್ಕೆ ಏರಿತ್ತು. ಗುರುವಾರ ಹೊಸ ಪ್ರಕರಣಗಳು ಪತ್ತೆಯಾಗದ ಕಾರಣ ಮತ್ತು ಉಡುಪಿಯಲ್ಲಿ 92 ಪ್ರಕರಣಗಳು ದೃಢಪಟ್ಟಿದ್ದರಿಂದ ಕಲಬುರಗಿ 510 ಪ್ರಕರಣಗಳೊಂದಿಗೆ ಎರಡನೇ ಸ್ಥಾನಕ್ಕೆ ಜಾರಿದೆ.
564 ಕೋವಿಡ್ ಪ್ರಕರಣಗಳೊಂದಿಗೆ ಉಡುಪಿ ಅಗ್ರ ಸ್ಥಾನದಲ್ಲಿ ಇದೆ. ಜಿಲ್ಲೆಯ 510 ಪ್ರಕರಣಗಳಲ್ಲಿ ಇದುವರೆಗೆ 128 ಜನ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಏಳು ಜನರು ಸೋಂಕಿಗೆ ಬಲಿಯಾಗಿದ್ದಾರೆ. ಉಳಿದಂತೆ 375 ಜನರು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
7 ಕಂಟೇನ್ಮೆಂಟ್ ಝೋನ್: ಬುಧವಾರ ಕೋವಿಡ್ ಪತ್ತೆಯಾದ ಸೋಂಕಿರುವ ವಾಸವಿರುವ ಪ್ರದೇಶಗಳಿಂದ ಕೋವಿಡ್ ಸೋಂಕು ಹರಡದಂತೆ ಮನ್ನೆಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಮತ್ತೆ 7 ಕಂಟೇನ್ಮೆಂಟ್ ಝೋನ್ ರಚಿಸಲಾಗಿದೆ. ಆ ಪ್ರದೇಶಗಳಿಗೆ ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ -ಇನ್ಸಿಡೆಂಟ್ ಕಮಾಂಡರ್ಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.
ನಗರದ ಇಂದಿರಾನಗರಕ್ಕೆ ಜಿಮ್ಸ್ ಆಡಳಿತಾಧಿಕಾರಿ ಪಾರ್ವತಿ, ಅಫಜಲಪುರ ತಾಲೂಕಿನ ಕೋಗನೂರ, ಬಳ್ಳೂರಗಿ ತಾಂಡಾ ಹಾಗೂ ಹೇರೂನಾಯಕ ತಾಂಡಾಗಳಿಗೆ ಅಲ್ಪಸಂಖ್ಯಾತರ ತಾಲೂಕು ವಿಸ್ತೀರ್ಣಾಧಿಕಾರಿ ವಾಜೀದ್ ಮುಖೇನ್, ಸೇಡಂ ತಾಲೂಕಿನ ಕಾನಾಗಡ್ಡಾ ಗ್ರಾಮಕ್ಕೆ ಜಿಪಂ ಇಂಜನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯನಿರ್ವಹಕ ಅಧಿಕಾರಿ ಶರಣಬಸಪ್ಪ ಅವರನ್ನು ನೇಮಕ ಮಾಡಲಾಗಿದೆ. ಅದೇ ರೀತಿ ಜೇವರ್ಗಿ ತಾಲೂಕಿನ ಕಲ್ಲೂರ(ಕೆ) ಗ್ರಾಮಕ್ಕೆ ಚಿಗರಳ್ಳಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಂ.ಎಚ್. ಬೆಣ್ಣೂರ ಹಾಗೂ ಕಮಲಾಪುರ ತಾಲೂಕಿನ ಬಚನಾಳ ತಾಂಡಾಕ್ಕೆ ಪಶು ವೈದ್ಯಕಿಯ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರಾಮಕುಮಾರ ಅವರನ್ನು ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ