ಕಳಸ: 190 ಕ್ಕೂ ಹೆಚ್ಚು ಮಂದಿಗೆ ಹೋಂ ಕ್ವಾರಂಟೈನ್
Team Udayavani, Jul 10, 2020, 12:47 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮೂಡಿಗೆರೆ: ಕಳಸ ಪಟ್ಟಣದಲ್ಲಿ ಕುಟುಂಬವೊಂದಕ್ಕೆ ಕೋವಿಡ್ ಸೋಂಕು ತಗಲಿರುವುದು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಸೋಂಕು ಹಿನ್ನೆಲೆಯಲ್ಲಿ 190 ಕ್ಕೂ ಹೆಚ್ಚು ಜನರನ್ನು ಹೋಂ ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಮುಂದಾಗಿದೆ.
ಕುಟುಂಬವೊಂದರ ಇಬ್ಬರು ಮಹಿಳೆಯರಿಗೆ ಸೋಂಕು ಕಾಣಿಸಿಕೊಂಡಿದ್ದರಿಂದ ಆ ಮನೆಯ ಸದಸ್ಯರು ಹಾಗೂ ಮನೆಯ ಸದಸ್ಯರ ಜೊತೆಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿ ಇದ್ದ 120 ಜನರ ಪಟ್ಟಿಯನ್ನು ಜಿಲ್ಲಾಡಳಿತದ ಸೂಚನೆ ಮೇರೆಗೆ ಆರೋಗ್ಯ ಇಲಾಖೆ ಸಿದ್ಧಪಡಿಸಿಕೊಂಡು ಹೋಂ ಕ್ವಾರಂಟೈನ್ಗೆ ಮುಂದಾಗಿದೆ. ಇತ್ತ ಎಂ.ಎಲ್.ಸಿ. ಯೊಬ್ಬರಿಗೆ ಸೋಂಕು ತಗಲಿರುವುದರಿಂದ, ಅವರು ಜುಲೈ ಕೊನೆಯ ವಾರದಲ್ಲಿ ಕಳಸದ ಗ್ರಾಪಂ ಕಸ ವಿಲೇವಾರಿ ಘಟಕದ ಉದ್ಘಾಟನೆಗೆ ಬಂದಿದ್ದರಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸುಮಾರು 70 ಜನರನ್ನು ಹೋಂ ಕ್ವಾರಂಟೈನ್ಗೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊರನಾಡಿನ ಭೀಮೇಶ್ವರ ಜೋಷಿ, ಕಳಸ ಗ್ರಾಪಂ ಅಧ್ಯಕ್ಷರು ಸೇರಿದಂತೆ ಹಲವರನ್ನು ಈಗಾಗಲೇ ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ಕಳಸದ ಕುಟುಂಬದ ಸೋಂಕಿತ ಮಹಿಳೆಯ ಮಗ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದಿದ್ದು ಆತನ ಸಂಪರ್ಕದಲ್ಲಿ ಬಂದಿದ್ದ ಆತನ ಗೆಳೆಯರು, ಸಹಪಾಠಿಗಳು, ಒಂದೇ ಕೊಠಡಿಯಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಹೋಂ ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಈ ಪೈಕಿ ಹಲವರು ಹೋಂ ಕ್ವಾರಂಟೈನ್ ನಿಯಮಾವಳಿಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿ ತಿರುಗಾಡುತ್ತಿರುವುದನ್ನು ಸ್ಥಳೀಯರು ಆಕ್ಷೇಪಿಸಿದ್ದು, ಪ್ರಕರಣ ದಾಖಲಿಸುವಂತೆ ಒತ್ತಾಯ ಮಾಡಿದ್ದಾರೆ.
ಇದರ ನಡುವೆ ಈ ಬಗ್ಗೆ ತೀವ್ರ ಕಟ್ಟೆಚ್ಚರ ವಹಿಸಿರುವ ಕಳಸ ಠಾಣಾಧಿಕಾರಿ ಮಂಜಯ್ಯ ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳದ ಕೆಲ ವ್ಯಾಪಾರಿಗಳಿಗೆ, ಸಾರ್ವಜನಿಕರಿಗೆ, ಹೋಂ ಕ್ವಾರಂಟೈನ್ಗೆ ಒಳಗಾದ ಜನರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಾಸ್ಕ್ ಧರಿಸದೆ ಇದ್ದ ಹಲವರಿಗೆ ದಂಡ ವಿಧಿಸುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ