ಕಾಸರಗೋಡು: 11 ಮಂದಿಗೆ ಪಾಸಿಟಿವ್
Team Udayavani, Jul 10, 2020, 8:33 AM IST
ಸಾಂದರ್ಭಿಕ ಚಿತ್ರ
ಕಾಸರಗೋಡು: ಜಿಲ್ಲೆಯಲ್ಲಿ ಗುರುವಾರ 11 ಮಂದಿಗೆ ಕೋವಿಡ್ ದೃಢವಾಗಿದೆ. 8 ಮಂದಿ ವಿದೇಶಗಳಿಂದ, ಮೂವರು ಇತರ ರಾಜ್ಯಗಳಿಂದ ಬಂದವರು. 15 ಮಂದಿ ಗುಣಮುಖರಾಗಿ ತೆರಳಿದ್ದಾರೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ| ಎ.ವಿ. ರಾಮದಾಸ್ ತಿಳಿಸಿದ್ದಾರೆ.
ಕೇರಳದಲ್ಲಿ 339 ಮಂದಿಗೆ ಸೋಂಕು
ಕೇರಳದಲ್ಲಿ ಗುರುವಾರ 339 ಮಂದಿಗೆ ಸೋಂಕು ದೃಢವಾಗಿದೆ. ಇದೇ ವೇಳೆ 149 ಮಂದಿ ಗುಣಮುಖರಾಗಿದ್ದಾರೆ. ವಿದೇಶದಿಂದ ಬಂದ 117 ಮಂದಿಗೆ, ಇತರ ರಾಜ್ಯಗಳಿಂದ ಬಂದ 74 ಮಂದಿಗೆ ಹಾಗೂ ಸಂಪರ್ಕದಿಂದ 133 ಮಂದಿಗೆ ಸೋಂಕು ಬಾಧಿಸಿದೆ. 7 ಮಂದಿಯ ಸೋಂಕಿನ ಮೂಲಕ ತಿಳಿದಿಲ್ಲ.
217 ಪ್ರಕರಣ ದಾಖಲು
ಲಾಕ್ಡೌನ್ ಉಲ್ಲಂಘಿಸಿದ ಆರೋಪದಲ್ಲಿ ಜಿಲ್ಲೆಯಲ್ಲಿ 9 ಪ್ರಕರಣಗಳನ್ನು ದಾಖಲಿಸಲಾಗಿದೆ. 12 ಮಂದಿಯನ್ನು ಬಂಧಿಸಿ ಒಂದು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಮಾಸ್ಕ್ ಧರಿಸದ ಆರೋಪದಲ್ಲಿ 208 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮೃತ ವ್ಯಕ್ತಿಗೆ ಪಾಸಿಟಿವ್
ಹುಬ್ಬಳ್ಳಿಯಲ್ಲಿ ವ್ಯಾಪಾರಿಯಾಗಿದ್ದ ಮೊಗ್ರಾಲ್ಪುತ್ತೂರು ಕೋಟ್ಟಕುನ್ನು ನಿವಾಸಿ ಬಿ.ಎಂ. ಅಬ್ದುಲ್ ರಹಿಮಾನ್ (55) ಅವರ ಸಾವು ಕೋವಿಡ್ ದಿಂದ ಸಂಭವಿಸಿರುವುದು ದೃಢವಾಗಿದೆ. ಅವರು ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದರು. ಜ್ವರದ ಹಿನ್ನೆಲೆಯಲ್ಲಿ ಜು. 6ರಂದು ಹುಬ್ಬಳ್ಳಿಯಿಂದ ಕಾರಿನಲ್ಲಿ ಕರೆತರಲಾಗಿತ್ತು. ಜು. 7ರ ಮುಂಜಾನೆ 3.30ಕ್ಕೆ ತಲಪಾಡಿ ಚೆಕ್ಪೋಸ್ಟ್ ತಲುಪಿ ಇನ್ನೊಂದು ಕಾರಿನಲ್ಲಿ ಊರಿಗೆ ಬರುತ್ತಿದ್ದಾಗ ರಸ್ತೆ ಮಧ್ಯೆ ಜ್ವರ ಉಲ್ಬಣಿಸಿತ್ತು. ನೇರವಾಗಿ ಜನರಲ್ ಆಸ್ಪತ್ರೆಗೆ ಕೊಂಡೊಯ್ದರೂ ಅವರ ಸಾವು ಸಂಭವಿಸಿತ್ತು. ಅವರು ಕಾಸರಗೋಡಿನಲ್ಲಿ ಚಿಕಿತ್ಸೆ ಪಡೆ ಯದೇ ಇರುವುದರಿಂದ ಅವರನ್ನು ಜಿಲ್ಲೆಯ ಯಾದಿಯಲ್ಲಿ ಸೇರ್ಪಡೆಗೊಳಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
MUST WATCH
ಹೊಸ ಸೇರ್ಪಡೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ