‘Mr. Rascal’ನ ನಟಿ ಯಾರೀಕೆ ‘ಊಸರವಳ್ಳಿ’ ಪಾಯಲ್ ಘೋಷ್?


Team Udayavani, Sep 20, 2020, 1:27 PM IST

‘Mr. Rascal’ನ ನಟಿ ಯಾರೀಕೆ ‘ಊಸರವಳ್ಳಿ’ ಪಾಯಲ್ ಘೋಷ್?

ಮುಂಬಯಿ: ಚಿತ್ರರಂಗವೇ ಹಾಗೆ. ಇಲ್ಲಿ ಕೆಲವರು ತಮ್ಮ ಕೆಲಸಗಳ ಮೂಲಕ ಪ್ರಸಿದ್ಧಿಗೆ ಬಂದರೆ ಇನ್ನು ಕೆಲವರು ಗಾಸಿಪ್ ಮತ್ತು ಹೇಳಿಕೆಗಳ ಮೂಲಕ ಹೆಡ್ ಲೈನ್ ನ್ಯೂಸ್ ಆಗುತ್ತಾರೆ.

ಇಂತವರ ಸಾಲಿಗೆ ಕಿರುತೆರೆ ಮತ್ತು ಬಹುಭಾಷಾ ನಟಿ ಪಾಯಲ್ ಘೋಷ್ ಎಂಬ ನಟಿ ಇದೀಗ ಸೇರ್ಪಡೆಗೊಂಡಿದ್ದಾರೆ.

‘ಬ್ಲ್ಯಾಕ್ ಫ್ರೈಡೇ’, ‘ನೊ ಸ್ಮೋಕಿಂಗ್’ ಮೊದಲಾದ ಸಿನೆಮಾಗಳ ನಿರ್ದೇಶಕ, ಬರಹಗಾರ, ನಿರ್ಮಾಪಕರಾಗಿರುವ ಅನುರಾಗ್ ಕಶ್ಯಪ್ ಮೇಲೆ ಲೈಂಗಿಕ ಕಿರುಕುಳದ ಆರೋಪವನ್ನು ಮಾಡುವ ಮೂಲಕ ನಟಿ ಪಾಯಲ್ ಘೋಷ್ ಇದೀಗ ಏಕಾಏಕಿ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ.

ಶನಿವಾರದಂದು ಪಾಯಲ್ ತಮ್ಮ ಈ ಸ್ಪೋಟಕ ಟ್ವೀಟ್ ಮೂಲಕ ಅನುರಾಗ್ ಮೇಲೆ ಈ ಗಂಭೀರವಾದ ಆರೋಪವನ್ನು ಮಾಡಿದ್ದರು. ಮಾತ್ರವಲ್ಲದೇ ಈ ಟ್ವೀಟ್ ನಲ್ಲಿ ಅವರು ಪ್ರಧಾನ ಮಂತ್ರಿ ಕಛೇರಿ ಹಾಗೂ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ಟ್ವಿಟ್ಟರ್ ಖಾತೆಯನ್ನೂ ಸಹ ಟ್ಯಾಗ್ ಮಾಡಿದ್ದರು.

ಇದನ್ನೂ ಓದಿ: ‘ವಾವ್.. ನನ್ನ ಬಾಯಿ ಮುಚ್ಚಿಸುವ ಪ್ರಯತ್ನಕ್ಕೆ ಇಷ್ಟು ಸಮಯ ವ್ಯಯಿಸಿದಿರಲ್ಲಾ…’!: ಅನುರಾಗ್


ಹೀಗೆ ಏಕಾ ಏಕಿ ಸುದ್ದಿಯ ಕೇಂದ್ರಬಿಂದುವಾದ ನಟಿ ಪಾಯಲ್ ಘೋಷ್ ಬಾಲಿವುಡ್ ಮತ್ತು ದಕ್ಷಿಣ ಭಾರತದ ಕೆಲವೊಂದು ಚಿತ್ರಗಳಲ್ಲಿ ನಟಿಸಿದ್ದಾರೆ.

2017ರಲ್ಲಿ ರಿಷಿ ಕಪೂರ್ ಮತ್ತು ಪರೇಶ್ ರಾವಲ್ ಮುಖ್ಯ ಪಾತ್ರದಲ್ಲಿ ನಟಿಸಿದ್ದ ‘ಪಟೇಲ್ ಕಿ ಪಂಜಾಬ್ ಶಾದಿ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಪಡೆದಿದ್ದರು. ಇನ್ನು 2008ರಲ್ಲಿಯೇ ಪಾಯಲ್ ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಅಡ್ವಾಣಿ ಎದುರು ಸ್ಪರ್ಧೆ, 15 ವರ್ಷದ ನಟಿ ಜತೆ ಸೂಪರ್ ಸ್ಟಾರ್ ವಿವಾಹ! ಪ್ರಿಯತಮೆ ಮುನಿಸು

‘ಪ್ರಯಾಣಂ’, ‘ವರ್ಷಧಾರೆ’, ‘ಊಸರವಳ್ಳಿ’ ಮತ್ತು ‘Mr. Rascal’ ಸೇರಿದಂತೆ ದಕ್ಷಿಣ ಭಾರತದ ಅದರಲ್ಲೂ ಮುಖ್ಯವಾಗಿ ತೆಲುಗು ಚಿತ್ರಗಳಲ್ಲಿ ಪಾಯಲ್ ಘೋಷ್ ಅವರು ನಾಯಕಿಯಾಗಿ ನಟಿಸಿದ್ದಾರೆ.

‘ಸಾಥ್ ನಿಭಾನಾ ಸಾಥಿಯಾ’ ಎಂಬ ಜನಪ್ರಿಯ ಕಿರುತೆರೆ ಕಾರ್ಯಕ್ರಮದಲ್ಲೂ ಪಾಯಲ್ ಘೋಷ್ ಅವರು ಭಾಗವಹಿಸಿದ್ದಾರೆ.

ಈ ರೀತಿಯಾಗಿ ಕಳೆದ 12 ವರ್ಷಗಳಿಂದ ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲಿ ತನ್ನ ನಟನಾ ಪ್ರತಿಭೆಯಿಂದ ಮಿಂಚಿರುವ ಈ ನಟಿ ಇದೀಗ ಹೆಸರಾಂತ ನಿರ್ದೇಶಕ ಹಾಗೂ ಕ್ರಿಯಾಶೀಲ ಬರಹಗಾರ ಅನುರಾಗ್ ಕಶ್ಯಪ್ ಮೇಲೆ ಲೈಂಗಿಕ ಕಿರುಕುಳ ಆರೋಪವನ್ನು ಮಾಡಿರುವುದು ಈ ನಟಿಯನ್ನು ಇದೀಗ ಟಾಕ್ ಆಫ್ ದಿ ಟೌನ್ ಆಗಿಸಿದೆ.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.