Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!
Team Udayavani, Apr 17, 2024, 12:22 AM IST
ಕೋಟ: ಅನಾರೋಗ್ಯದಿಂದ ಬಳಲು ತ್ತಿದ್ದ ವೃದ್ಧೆಯೋರ್ವರು ಮನೆಯಲ್ಲೇ ಮತದಾನ ಕಾರ್ಯಕ್ರಮದಡಿ ಮತ ದಾನ ಮಾಡಿ ಕೆಲವೇ ಗಂಟೆಗಳಲ್ಲಿ ಕೊನೆಯುಸಿರೆಳೆದ ಘಟನೆ ಸಾಸ್ತಾನ ಪಾಂಡೇಶ್ವರದ ಚಡಗರ ಅಗ್ರಹಾರದ ಶ್ಯಾನುಭೋಗರ ಮನೆಯಲ್ಲಿ ಎ. 15ರಂದು ಸಂಭವಿಸಿದೆ.
ನಿವೃತ್ತ ಗ್ರಾಮಲೆಕ್ಕಾ ಧಿಕಾರಿ ದಿ| ನಾರಾಯಣ ಉಪಾಧ್ಯ ಅವರ ಪತ್ನಿ ಪಿ. ಯಶೋದಾ ನಾರಾಯಣ ಉಪಾಧ್ಯ (83) ಮೃತಪಟ್ಟವರು.ಅವರಿಗೆ ಶನಿವಾರ ರಾತ್ರಿಯಿಂದ ಸಣ್ಣ ಪ್ರಮಾಣದ ಎದೆನೋವು, ಸುಸ್ತು ಕಾಣಿಸಿಕೊಂಡಿತ್ತು. ಸೋಮವಾರ ಅವರಿಗೆ ಮನೆಯಿಂದಲೇ ಮತದಾನಕ್ಕೆ ಸಮಯ ನಿಶ್ಚಯವಾಗಿತ್ತು. ಆದ್ದರಿಂದ “ಮತದಾನ ಮುಗಿಸಿಯೇ ನಾನು ಆಸ್ಪತ್ರೆಗೆ ತೆರಳುವುದು’ ಹಠ ಹಿಡಿದಿದ್ದರು. ಸೋಮವಾರ ಬೆಳಗ್ಗೆ ಆಸ್ಪತ್ರೆಗೆ ಹೋಗುವಂತೆ ಮನೆಯವರು ಮತ್ತೊಮ್ಮೆ ಒತ್ತಾಯಿಸಿದ್ದರೂ “ಅಧಿಕಾರಿಗಳು ಮನೆಗೆ ಬರುವಾಗ ನಾನು ಇಲ್ಲದಿದ್ದರೆ ಅವರಿಗೆ ಬೇಸರವಾಗುತ್ತದೆ, ನಾನು ಮತದಾನ ಮಾಡಲೇ ಬೇಕು’ ಎಂದು ಹೇಳಿ ಮಧ್ಯಾಹ್ನ 12.30ರ ತನಕ ಕಾದು ಮತದಾನ ಮಾಡಿ ಬಳಿಕ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವಾಗ ಅನಾರೋಗ್ಯ ಉಲ್ಬಣಗೊಂಡು ರಾತ್ರಿ 9 ಗಂಟೆಗೆ ಕೊನೆಯುಸಿರೆಳೆದರು.
ಮೃತರು ಪುತ್ರ, ಇಬ್ಬರು ಪುತ್ರಿ ಯರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ