ಕೊರೊನಾ ತಡೆಗೆ ಕಠಿಣ ಕ್ರಮ ಅನಿವಾರ್ಯ

ಹೆಚ್ಚುವರಿ ನಾಲ್ಕು ಚೆಕ್‌ಪೋಸ್ಟ್‌ ತೆರೆಯಲು ಶಾಸಕ ಭೀಮಾ ನಾಯ್ಕ ಸೂಚನೆ

Team Udayavani, Apr 8, 2020, 3:43 PM IST

08-April-25

ಕೊಟ್ಟೂರು: ಶಾಸಕ ಭೀಮಾ ನಾಯ್ಕ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು

ಕೊಟ್ಟೂರು: ಕೋವಿಡ್‌ -19ಗೆ ಸಂಬಂಧಿಸಿದಂತೆ ಶಾಸಕ ಎಸ್‌. ಭಿಮಾ ನಾಯ್ಕ ನೇತೃತ್ವದಲ್ಲಿ ಕೊಟ್ಟೂರಿನ ಹರಿಪ್ರಿಯ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದರು. ಜಿಲ್ಲೆಯಲ್ಲಿ ಈಗಾಗಲೇ 6 ಕೊರೊನಾ ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಬಳ್ಳಾರಿಯ ತೀವ್ರ ನಿಗಾ ಘಟಕದಲ್ಲಿ ಇಡಲಾಗಿದೆ. ಆರೋಗ್ಯ ಇಲಾಖೆ ಶ್ರಮದಿಂದಾಗಿ ಬೇರೆ ಊರು, ದೇಶಗಳಿಂದ ಬಂದವರ ಮಾಹಿತಿ ಪಡೆದು ಅವರನ್ನೂ ಗೃಹಬಂಧನಲ್ಲಿ ಇರಿಸಲಾಗಿದೆ ಎಂದರು.

ಕೊರೊನಾ ತಡೆಗಟ್ಟಲು ಕೆಲವು ಕಠಿಣ ಕ್ರಮ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಿ ಹಲವು ಮಹತ್ವದ ಅಂಶಗಳನ್ನು ಚರ್ಚಿಸಲಾಯಿತು. ಪ್ರಧಾನಿ, ಸಿಎಂ ಸೂಚಿಸಿರುವ ಲಾಕ್‌ಡೌನ್‌ ಗೆ ಸ್ಪಂದಿಸಬೇಕಾದುದು ನಮ್ಮ ಕರ್ತವ್ಯ ಎಂದರು. ತಾಲೂಕು ದಂಡಾಧಿಕಾರಿಗಳು ಈಗಾಗಲೇ ಸ್ವತಃ ವಾರ್ಡ್‌ಗಳಲ್ಲಿ ಹಾಗೂ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಔಷಧ ಗಳನ್ನು ಸಿಂಪಡಿಸಿ ಜನ ಜಾಗ್ರತೆ ಮೂಡಿಸುತ್ತಿದ್ದಾರೆ ಹಾಗೂ ಪ್ರತಿ ವಾರ್ಡ್‌ನ ಕಡುಬಡವರಿಗೆ
ಉಚಿತ ಹಾಲು ಸೌಲಭ್ಯ ಮತ್ತು 2 ತಿಂಗಳ ಪಡಿತರವನ್ನು ಸಹ ವಿತರಿಸಲಾಗುತ್ತಿದೆ ಎಂದರು.

ಎರಡು ಜಿಲ್ಲೆಗಳು ಸೇರುವ ಗಡಿಗಳಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸಿ ಸಂಚಾರ ನಿಯಮ ಪಾಲಿಸುತ್ತಿರುವ ಪೊಲೀಸ್‌ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಸೇವೆ ಶ್ಲಾಘನೀಯ ಎಂದರು. ಇನ್ನೂ 4 ಚೆಕ್‌ ಪೋಸ್ಟ್‌ ನಿರ್ಮಿಸುವಂತೆ ಸೂಚಿಸಿದರು. ಅಗತ್ಯ ವಸ್ತುಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು. ಮತ್ತು ಮುಸ್ಲಿಂ ಬಾಂಧವರು ನಮಾಜ್‌ನ್ನು ಮನೆಯಲ್ಲಿಯೇ ಮಾಡಿಕೊಳ್ಳಿ ಎಂದು ಹೇಳಿದರು.

ತಾಲೂಕು ದಂಡಾಧಿಕಾರಿ ಜಿ.ಅನಿಲ್‌ ಕುಮಾರ, ಜಿಪಂ ಸದಸ್ಯ ಎಂ.ಎಂ.ಜೆ. ಹರ್ಷವರ್ಧನ, ಪಶುವೈದ್ಯ ಡಾ| ರವಿಪ್ರಕಾಶ, ಪಪಂ ಮುಖ್ಯಾಧಿಕಾರಿ ಎಚ್‌.ಎಫ್‌ ಬಿದರಿ, ತಾಲೂಕು ವೈದ್ಯಾಧಿಕಾರಿ ಷಣ್ಮುಖ ನಾಯ್ಕ, ರವೀಂದ್ರ ಕುರುಬಗಟ್ಟೆ, ಕಾಳಿಂಗ, ಇಒ ಬಸಣ್ಣ ಹಾಗೂ ಪಪಂ ಸದಸ್ಯರು ಮತ್ತು ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.