ವೈಯಕ್ತಿಕ ದ್ವೇಷ: ವಾಹನ ಹರಿಸಿ ಓರ್ವನ ಕೊಲೆ ? ಕುಂದಾಪುರದ ಯಡಮೊಗೆ ಯಲ್ಲಿ ನಡೆದ ಘಟನೆ
Team Udayavani, Jun 6, 2021, 12:12 AM IST
ಕುಂದಾಪುರ : ವೈಯಕ್ತಿಕ ಜಗಳವೊಂದು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಕುಂದಾಪುರದ ಯಡಮೊಗೆ ಯಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಯಡಮೊಗೆಯ ಹೊಸಬಾಳು ನಿವಾಸಿ ಉದಯ ಗಾಣಿಗ (45) ಕೊಲೆಯಾದ ವ್ಯಕ್ತಿ.
ಯಡಮೊಗೆಯ ಗ್ರಾ.ಪಂ. ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ವಿರುದ್ಧ ಉದಯ ಕುಟುಂಬಸ್ಥರು ಕೊಲೆ ಆರೋಪ ಹೊರಿಸಿದ್ದಾರೆ.
ಘಟನೆ ಹೇಗಾಯಿತು?
ರಾತ್ರಿ 8 ಗಂಟೆ ಸುಮಾರಿಗೆ ತನ್ನ ಮನೆಯ ಎದುರಿನ ರಸ್ತೆಯ ಮೇಲೆ ನಿಂತಿದ್ದ ಉದಯ ಅವರ ಮೇಲೆ ಪ್ರಾಣೇಶ್ ಯಡಿಯಾಳ ಏಕಾಏಕಿಯಾಗಿ ಕಾರು ಚಲಾಯಿಸಿದ್ದಾನೆ. ಉದಯ ಗಂಭೀರವಾಗಿ ಗಾಯಗೊಂಡರು. ಅವರನ್ನು ಸ್ಥಳೀಯರು 108 ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯುವ ಯತ್ನ ನಡೆಸಿದರಾದರೂ ದಾರಿ ಮಧ್ಯೆಯೇ ಕೊನೆಯುಸಿರೆಳೆದರು.
ಇದನ್ನೂ ಓದಿ ;ರೋಹಿಣಿ ಸಿಂಧೂರಿ, ಶಿಲ್ಪಾನಾಗ್ ಸೇರಿ 7 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರದ ಆದೇಶ
ಇದು ಅಪಘಾತವಲ್ಲ.. ಮೇಲ್ನೋಟಕ್ಕೆ ಕೊಲೆಯೆಂದು ತಿಳಿದು ಬರುತ್ತಿದ್ದು, ಮೃತನ ಕುಟಂಬಸ್ಥರು ಸಹ ಸಂಶಯ ವ್ಯಕ್ತಪಡಿಸಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಗ್ರಾ.ಪಂ.ನಲ್ಲಿ ನಡೆಯುವ ಅನ್ಯಾಯ, ಅಕ್ರಮಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಉದಯ ಗಾಣಿಗ ಬರಹ ಪ್ರಕಟಿಸಿ ಪ್ರಶ್ನಿಸುತ್ತಿದ್ದರು ಎನ್ನಲಾಗುತ್ತಿದ್ದು, ಇದರಿಂದಾಗಿಯೇ ಗ್ರಾ.ಪಂ. ಅಧ್ಯಕ್ಷ ಪ್ರಾಣೇಶ್ ಹಾಗೂ ಉದಯ ಮಧ್ಯೆ ವೈಯಕ್ತಿಕ ದ್ವೇಷ ಮೂಡಿತ್ತು ಎನ್ನಲಾಗಿದೆ.
ಉದಯ್ ವಿವಾಹಿತರಾಗಿದ್ದು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ರಸಗೊಬ್ಬರ ಅಂಗಡಿಯನ್ನು ನಡೆಸುತ್ತಿದ್ದ ಅವರು ಕೃಷಿಕರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ
“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ
Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ
Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ
Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ