ಲಾಕ್ ಡೌನ್: ನರೇಗಾದಲ್ಲಿ ಕೂಲಿ ಕೆಲಸ ಮಾಡಿ ಮಾದರಿಯಾದ ಸಿವಿಲ್ ಇಂಜಿನಿಯರ್, ಪ್ರವಾಸಿಗೈಡ್ಸ್
Team Udayavani, May 27, 2020, 12:41 PM IST
ಗಂಗಾವತಿ: ಕೊವಿಡ್ -19 ರೋಗ ಹರಡದಂತೆ ಜಾರಿಗೊಳಿಸಿದ ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸೆ ಹೋಗಿ ವಿವಿಧ ಕಂಪನಿ ಮತ್ತು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದವರು ಊರಿಗೆ ಮರಳಿ ಖಾಲಿ ಇರದೇ ಸರಕಾರ ಅನುಷ್ಠಾನಗೊಳಿಸಿರುವ ಮಹಾತ್ಮಗಾಂಧಿ ನರೇಗಾ ಯೋಜನೆಯ ವಿವಿಧ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಲೂಕಿನ ಹೊಸ್ಕೇರಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೆಂಗಳೂರು ಖಾಸಗಿ ಕಂಪನಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿರುವ ವಿನೋದ ನಾಯಕ ಮತ್ತು ಕಳೆದ 20 ವರ್ಷ ಹಂಪಿಯಲ್ಲಿ ಪ್ರವಾಸಿ ಮಾರ್ಗದರ್ಶಕ(ಗೈಡ್) ಕೆಲಸ ಮಾಡುತ್ತಿರುವ ಹೊಸ್ಕೇರಿ ಮಲ್ಲಿಕಾರ್ಜುನ ಮತ್ತು ಪದವಿ ಮಹಾವಿದ್ಯಾಲಯದಲ್ಲಿ ಪದವಿ ಅಂತಿಮ ಸೆಮಿಸ್ಟರ್ ಓದುತ್ತಿರುವವರು ಕಳೆದ ಒಂದು ತಿಂಗಳಿಂದ ಹೊಸ್ಕೇರಿ ಗ್ರಾ.ಪಂ ಸುತ್ತಲು ನರೇಗಾ ಯೋಜನೆ ಕೂಲಿಕೆಲಸದಲ್ಲಿ ಕೂಲಿಗಾರರ ಜತೆ ಪಾಲ್ಗೊಂಡು ಕಾಲುವೆ ಹೂಳು ತೆಗೆಯುವ ಕೆಲಮಾಡುತ್ತಿದ್ದಾರೆ.
ನರೇಗಾದಲ್ಲಿ ಕೆಲಸ ಮಾಡುವುದು ಖುಷಿಯಾಗಿದೆ: ಕೊವಿಡ್-19 ರೋಗದ ಹಿನ್ನೆಲೆಯಲ್ಲಿ ಕಂಪನಿ ಲಾಕ್ ಡೌನ್ ಮಾಡಲಾಗಿದೆ. ಕೆಲಸ ಇಲ್ಲದೇ ಇರುವ ಕಾರಣ ವಾಪಸ್ ಊರಿಗೆ ಬಂದಿದ್ದು ಮನೆಯಲ್ಲಿ ಖಾಲಿ ಇರದೇ ನರೇಗಾ ಯೋಜನೆ ಕೂಲಿ ಕೆಲಸಕ್ಕೆ ಹೊರಟಿದ್ದು ಈ ಮೊದಲು ಗದ್ದೆಗಳಲ್ಲಿ ಕೆಲಸ ಮಾಡಿದ ಅನುಭವ ಇರುವುದರಿಂದ ತೊಂದರೆಯಾಗಿಲ್ಲ. ನರೇಗಾ ಯೋಜನೆಯಿಂದ ಸಮಗ್ರ ಅಭಿವೃದ್ಧಿ ಸಾಧ್ಯ. ಅನುಷ್ಠಾನ ಮಾಡುವವರು ಪ್ರಾಮಾಣಿಕರಾಗಿರಬೇಕೆಂದು ಸಿವಿಲ್ ಇಂಜಿನಿಯರ್ ವಿನೋದ ನಾಯಕ ಉದಯವಾಣಿ ಗೆ ತಿಳಿಸಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…