Lok Sabha Polls; ಆಗುಂಬೆ ಹೋಬಳಿಯಲ್ಲಿ ಚುನಾವಣಾ ಬಹಿಷ್ಕಾರ ..!
ರಸ್ತೆ ಸಮಸ್ಯೆಯಿಂದ ಇಲ್ಲಿನ ಯುವಕರಿಗೆ ಹೆಣ್ಣು ಕೂಡ ಸಿಗುತ್ತಿಲ್ಲ
Team Udayavani, Apr 17, 2024, 4:47 PM IST
ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಹೋಬಳಿಯ ಬಾಳೆಹಳ್ಳಿ ಗ್ರಾಮ, ಉಳುಮಡಿ ,ಸುರುಳಿಗದ್ದೆ, ಕಣಗುಲ್ ,ಈ ಗ್ರಾಮಗಳಿಗೆ ರಸ್ತೆ ಮಾರ್ಗ ಆಗುವರೆಗೂ ಚುನಾವಣಾ ಬಹಿಷ್ಕಾರ ಮಾಡುತ್ತೇವೆ ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಸುಮಾರು 40 ರಿಂದ 45 ಕುಟುಂಬಗಳು ವಾಸವಾಗಿರುವ ಈ ಗ್ರಾಮಗಳಲ್ಲಿ ಮನೆಗಳಿಗೆ ಹೋಗಲು ಸರಿಯಾದ ರಸ್ತೆ ಸಂಪರ್ಕವಿಲ್ಲ, ರಸ್ತೆ ಸರಿ ಇಲ್ಲದ ಕಾರಣ 20 ರಿಂದ 30 ಜನ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಕೂಡ ತೊಂದರೆಯಾಗುತ್ತಿದೆ ಇದೇ ರಸ್ತೆ ಸಮಸ್ಯೆಯಿಂದ ಇಲ್ಲಿನ ಯುವಕರಿಗೆ ಹೆಣ್ಣು ಕೂಡ ಸಿಗುತ್ತಿಲ್ಲ ಎನ್ನುವುದು ನೊಂದ ಯುವಕರ ದೂರು.
ಹಾಗೆ ಗ್ರಾಮಕ್ಕೆ ಕರೆಂಟಿನ ವ್ಯವಸ್ಥೆ ಇದ್ದರೂ ಕೂಡ ಸರಿಯಾದ ಟಿಸಿ ಇರದೆ ನೀರಿನ ಸಮಸ್ಯೆ ಕೂಡ ಎದುರಾಗಿದೆ. ಹಾಗೆ ಗ್ರಾಮದ ಹಳ್ಳಗಳಿಗೆ ಹೋಗಲು ಇರುವ ಕಲ್ಲು ಸಂಕಗಳಿಗೆ ಸರಿಯಾದ ಮಾರ್ಗಗಳು ಇಲ್ಲದೆ ಅವ್ಯವಸ್ಥೆಯ ಆಗರವಾಗಿದೆ ಕೂಡಲೇ ಇವೆಲ್ಲವನ್ನೂ ಸರಿಪಡಿಸಬೇಕು ಇಲ್ಲವಾದರೆ ನಾವು ಯಾವುದೇ ರೀತಿಯಿಂದಲೂ ಮತಗಳನ್ನು ಚಲಾಯಿಸುವುದಿಲ್ಲ ಈ ಇಡೀ ಗ್ರಾಮಸ್ಥರು ಚುನಾವಣಾ ಬಹಿಷ್ಕಾರ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಮುಖೇನ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್ ತೀರ್ಪು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ