ಕುಟುಂಬ, ಸಮಾಜದ ಸುರಕ್ಷತೆ ಮಾಸ್ಕ್ ಅಗತ್ಯ : ನಿಯಮ ಪಾಲಿಸದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ
Team Udayavani, Oct 2, 2020, 12:59 AM IST
ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್, ಪೌರಾಯುಕ್ತ, ಪೊಲೀಸ್ ಅಧಿಕಾರಿಗಳು ರಸ್ತೆಗಿಳಿದು, ಮಾಸ್ಕ್ ಧರಿಸದವರ ವಿರುದ್ಧ ಕಾರ್ಯಚರಣೆ ನಡೆಸಿ ದಂಡ ವಿಧಿಸಿದ್ದಾರೆ.
ಕುಟುಂಬ, ಸಮಾಜದ ಸುರಕ್ಷತೆ ಮಾಸ್ಕ್ ಅಗತ್ಯ : ನಿಯಮ ಪಾಲಿಸದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ
ಉಡುಪಿ/ ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳ ಆಡಳಿತವು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡುತ್ತಿದೆ ಮಾತ್ರವಲ್ಲದೇ ನಿಯಮ ಪಾಲಿಸದವರ ವಿರುದ್ಧ ದಂಡ ವಿಧಿಸುವ ಕಟ್ಟುನಿಟ್ಟಿನ ಕಾರ್ಯಕ್ಕೆ ಮುಂದಾಗಿದೆ.
ನಮ್ಮ ಕುಟುಂಬ ಮತ್ತು ಸಮಾಜದ ಸುರಕ್ಷತೆ ನಮ್ಮ ಕೈಯಲ್ಲಿದೆ. ಈ ಕಾರಣ ಕ್ಕಾಗಿ ಮನೆಯಿಂದ ಹೊರಬರುವಾಗ ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ರೂಢಿಸಿಕೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ವತಃ ಕಾರ್ಯಾಚರಣೆಗೆ ಇಳಿದಿದ್ದು ನಿಯಮ ಉಲ್ಲಂ ಸಿದವರಿಗೆ ದಂಡ ವಿಧಿಸುತ್ತಿದ್ದಾರೆ.
12 ಲಕ್ಷ ರೂ. ಸಂಗ್ರಹ
ಇದುವರೆಗೆ ಉಭಯ ಜಿಲ್ಲೆಗಳಲ್ಲಿ 12 ಲಕ್ಷ ರೂ. ಸಂಗ್ರಹಿಸಲಾಗಿದೆ. ದ.ಕ. ಜಿಲ್ಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿ 3,246 ಮಂದಿಗೆ ದಂಡ ವಿಧಿಸಲಾಗಿದ್ದರೆ 4,41,679 ರೂ. ದಂಡ ಸಂಗ್ರಹಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ 7.5 ಲಕ್ಷ ರೂ. ಸಂಗ್ರಹಿಸಲಾಗಿದೆ.
ಎಲ್ಲೆಲ್ಲಿ ಮಾಸ್ಕ್ ಧರಿಸಬೇಕು?
ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಬಸ್ಗಳಲ್ಲಿ ಮಾತ್ರವಲ್ಲದೆ ವೈಯಕ್ತಿಕವಾಗಿ ಕಾರಿನಲ್ಲಿ ಪ್ರಯಾಣಿಸುವಾಗ, ಬೈಕಿನಲ್ಲಿ ಸವಾರಿ ಮಾಡುವಾಗಲೂ ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು.
ದಂಡದ ದರ ಏರಿಕೆ?
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ವಿಧಿಸುವ ದಂಡ ಪ್ರಮಾಣವನ್ನು ನಗರ ಪ್ರದೇಶದಲ್ಲಿ 1,000 ರೂ. ಮತ್ತು ಗ್ರಾಮೀಣ ಪ್ರದೇಶದಲ್ಲಿ 500 ರೂ.ಗೆ ಹೆಚ್ಚಿಸಲು ಸರಕಾರ ನಿರ್ಧರಿಸಿದೆ. ಮುಂದಿನ ದಿನದಲ್ಲಿ 100ರೂ. ಬದಲಾಗಿ 1,000 ರೂ. ದಂಡ ಪಾವತಿ ಮಾಡ
ಬೇಕಾಗುತ್ತದೆ.
ಕೊರೊನಾವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಜನಸಾಮಾನ್ಯರು ಸಹಕರಿಸಬೇಕು. ಮನೆಯಿಂದ ಹೊರಬರುವಾಗ ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ರೂಢಿಸಿಕೊಳ್ಳಬೇಕು. ನಮ್ಮ, ನಮ್ಮ ಕುಟುಂಬ ಮತ್ತು ಸಮಾಜದ ಸುರಕ್ಷತೆ ನಮ್ಮ ಕೈಯಲ್ಲಿದೆ ಎಂಬುದನ್ನು ಮರೆಯಬಾರದು.
ಡಾ| ಕೆ.ವಿ. ರಾಜೇಂದ್ರ, ದ.ಕ. ಜಿಲ್ಲಾಧಿಕಾರಿ
ಟ್ರೇಡ್ ಪರವಾನಿಗೆ ರದ್ದು
ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಓಡಾಡಬೇಕು. ಮೂಗಿನ ಕೆಳಗೆ ಮಾಸ್ಕ್ ಹಾಕಿ ತಿರುಗಾಡಿದರೆ ಅವರಿಗೂ ದಂಡ ವಿಧಿಸಲಾಗುತ್ತದೆ. ಅಂಗಡಿ ಹಾಗೂ ಹೊಟೇಲ್ ಮಾಲಕರು ಮಾಸ್ಕ್ ಹಾಕದೆ ಇರುವುದು ಕಂಡು ಬಂದರೆ ಟ್ರೇಡ್ ಪರವಾನಿಗೆ ರದ್ದುಗೊಳಿಸಲಾಗುತ್ತದೆ.
-ಜಿ.ಜಗದೀಶ್, ಜಿಲ್ಲಾಧಿಕಾರಿ, ಉಡುಪಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ