ಮೆಟ್ರೋ ರೈಲು ಯೋಜನೆಯಲ್ಲಿ ಅವ್ಯವಹಾರ: ಡಿಎಂಕೆ ಭ್ರಷ್ಟಾಚಾರ ತನಿಖೆಗೆ ಸಿಬಿಐಗೆ ದೂರು
Team Udayavani, May 1, 2023, 7:45 AM IST
ಚೆನ್ನೈ: ಚೆನ್ನೈನ ಮೆಟ್ರೋ ರೈಲು ಯೋಜನೆಯಲ್ಲಿ ಅವ್ಯವಹಾರ ಉಂಟಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಸಿಬಿಐಗೆ ದೂರು ನೀಡಿದ್ದಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಭಾನುವಾರ ಹೇಳಿದ್ದಾರೆ.
2006ರಿಂದ 2011ರ ಅವಧಿಯಲ್ಲಿ ಡಿಎಂಕೆ ಸರ್ಕಾರದ ಅವಧಿಯಲ್ಲಿ ಅನುಷ್ಠಾನಗೊಂಡಿದ್ದ ಚೆನ್ನೈ ಮೆಟ್ರೋ ರೈಲು ಯೋಜನೆ ಮೊದಲನೇ ಹಂತದಲ್ಲಿ ಭ್ರಷ್ಟಾಚಾರ ಎಸಗಲಾಗಿದೆ ಎಂದು ದೂರಿದ್ದಾರೆ. ಇದೇ ಆರೋಪವನ್ನು ಮುಂದಿಟ್ಟುಕೊಂಡು ಇನ್ನೂ ಆರು ಮಂದಿ ಕೇಸು ದಾಖಲಿಸಿದ್ದಾರೆ ಎಂದರು.
2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಪೂರಕವಾಗಿ “ನನ್ನ ನೆಲ; ನನ್ನ ಮಣ್ಣು’ ಯಾತ್ರೆ ಕೈಗೆತ್ತಿಕೊಳ್ಳಲಾಗುತ್ತದೆ. ಅದರಲ್ಲಿ ಡಿಎಂಕೆ ನಡೆಸಿರುವ ಭ್ರಷ್ಟಾಚಾರ ಪ್ರಕರಣಗಳನ್ನು ಕೈಗೆತ್ತಿಕೊಂಡು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದರು. ಕೆಲ ದಿನಗಳ ಹಿಂದೆ ಅಣ್ಣಾಮಲೈ ಅವರು ತಮಿಳುನಾಡಿನ ಹಾಲಿ ಆಡಳಿತ ಪಕ್ಷದ ವಿರುದ್ಧ “ಡಿಎಂಕೆ ಫೈಲ್ಸ್’ ಎಂಬ ಸರಣಿ ಬಿಡುಗಡೆ ಮಾಡಿದ್ದರು. ಅದರ ವಿರುದ್ಧ ಅಣ್ಣಾಮಲೈ ವಿರುದ್ಧ ಮೊಕದ್ದಮೆ ಹೂಡುವ ಎಚ್ಚರಿಕೆಯನ್ನೂ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
MUST WATCH
ಹೊಸ ಸೇರ್ಪಡೆ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!