ಮೋದಿ ಕೇರ್‌ ಸಹಾಯ ಉತ್ತಮವಾಗಿ ಬಳಕೆಯಾಗಲಿ


Team Udayavani, May 31, 2022, 6:00 AM IST

Udayavani Kannada Newspaper

2020ರ ಆರಂಭದಿಂದಲೂ ಕಾಡುತ್ತಿರುವ ಕೊರೊನಾದಿಂದಾಗಿ ದೇಶವಾಸಿಗಳು ಪಡುತ್ತಿರುವ ಕಷ್ಟ ಅಷ್ಟಿಷ್ಟಲ್ಲ. ಆ ವರ್ಷ ಕಾಡಿದ ಮೊದಲ ಅಲೆಯಲ್ಲಿ ಕೊರೊನಾ ಬಂದವರಿಗೆ ಯಾವ ರೀತಿ ಚಿಕಿತ್ಸೆ ನೀಡಬೇಕು ಎಂಬುದೇ ವಿಜ್ಞಾನಿಗಳಿಂದ ಹಿಡಿದು ಯಾರಿಗೂ ಗೊತ್ತಿರಲಿಲ್ಲ. ಆಗ ದೇಶದಲ್ಲಿ ಅಪಾರ ಸಾವು ನೋವುಗಳನ್ನು ಕಾಣಬೇಕಾಯಿತು.

ಇನ್ನು ಎರಡನೇ ಅಲೆ ವೇಳೆಯಂತೂ ಮೊದಲ ಅಲೆಗಿಂತಲೂ ಹೆಚ್ಚು ಸಾವು ನೋವುಗಳನ್ನು ಇಡೀ ದೇಶ ನೋಡಿತು. ಇದಕ್ಕೆ ಕಾರಣ, ಕೊರೊನಾದ ರೂಪಾಂತರಿಯು ನೇರವಾಗಿ ಶ್ವಾಸಕೋಶಕ್ಕೇ ಸಮಸ್ಯೆ ಮಾಡಿದ್ದರಿಂದ ಉಸಿರಾಟದ ತೊಂದರೆ ಹೆಚ್ಚಾಗಿ ಕಾಣಿಸಿಕೊಂಡಿತು. ಈ ಸಮಯದಲ್ಲಿಯೂ ಮೊದಲ ಅಲೆಗಿಂತಲೂ ಹೆಚ್ಚು ಸಾವು ನೋವುಗಳನ್ನು ಇಡೀ ದೇಶ ನೋಡಿತು.

ಮನೆಗಳಲ್ಲಿ ದುಡಿಯುವವರೇ ಕೊರೊನಾಕ್ಕೆ ತುತ್ತಾದರು. ಕೆಲವು ಮನೆಗಳಲ್ಲಿ ಗಂಡ ಮತ್ತು ಹೆಂಡತಿ ಇಬ್ಬರೂ ಕೊರೊನಾಗೆ ತುತ್ತಾಗಿ ಮಕ್ಕಳಷ್ಟೇ ಉಳಿದುಕೊಂಡರು. ಇನ್ನು ಕೆಲವು ಸಂದರ್ಭಗಳಲ್ಲಿ ತಂದೆ ಅಥವಾ ತಾಯಿಯಷ್ಟೇ ಉಳಿದರು. ಅಂದರೆ, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಕಾರ ದೇಶದಲ್ಲಿ 1.53 ಲಕ್ಷ ಮಕ್ಕಳು ತಂದೆ ಅಥವಾ ತಾಯಿಯನ್ನು ಕಳೆದುಕೊಂಡಿದ್ದಾರೆ. 10,386 ಮಕ್ಕಳು ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡಿದ್ದಾರೆ.

ಈ ಹಿಂದೆಯೇ ಕೇಂದ್ರ ಸರಕಾರ, ಇಂಥ ಮಕ್ಕಳ ನೆರವಿಗೆ ಬರುವುದಾಗಿ ಘೋಷಿಸಿತ್ತು. ಅಲ್ಲದೆ, ಇವರಿಗಾಗಿಯೇ ಒಂದು ಪೋರ್ಟಲ್‌ ತೆರೆದು ಅನಾಥ ಮಕ್ಕಳ ಬಗ್ಗೆ ಇದರಲ್ಲಿ ದಾಖಲಿಸುವಂತೆ ಸೂಚನೆ ನೀಡಿತ್ತು. ಅದರಂತೆ ಈಗ ಅನಾಥ ಮಕ್ಕಳನ್ನು ಗುರುತಿಸಿ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಯೋಜನೆಯನ್ನು ಘೋಷಿಸಿದ್ದಾರೆ.

ಮೋದಿ ಕೇರ್‌ನ ಮೂಲಕ ಅನಾಥ ಮಕ್ಕಳಿಗೆ ಪ್ರತೀ ತಿಂಗಳು 4 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ. ಇದನ್ನು ಅವರ ಮೂಲಸೌಕರ್ಯ ಅಗತ್ಯಗಳಿಗೆ ಬಳಸಿಕೊಳ್ಳಬಹುದು. ಇದರ ಜತೆಗೆ ಶಾಲೆಗೆ ಹೋಗಲು ಹಣಕಾಸು ಸಹಾಯ, ಉನ್ನತ ಶಿಕ್ಷಣಕ್ಕಾಗಿ ಸ್ಕಾಲರ್‌ಶಿಪ್‌ ಮತ್ತು 5 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ವಿಮೆಯನ್ನೂ ನೀಡಲಾಗುತ್ತದೆ.

ಒಂದು ವೇಳೆ ಈ ಮಗು ವೃತ್ತಿಪರ ಕೋರ್ಸ್‌ ಮತ್ತು ಉನ್ನತ ಶಿಕ್ಷಣಕ್ಕೆ ಶೈಕ್ಷಣಿಕ ಸಾಲ ಬೇಕಾದರೂ ಅದಕ್ಕೂ ಮೋದಿ ಕೇರ್‌ ಮೂಲಕವೇ ಸಹಾಯ ಸಿಗುತ್ತದೆ. ಅಲ್ಲದೆ, ಕೊರೊನಾ ಅವಧಿಯಲ್ಲಿ ಪೋಷಕರನ್ನು ಕಳೆದುಕೊಂಡ 18-23 ವರ್ಷದೊಳಗಿನ ಯುವಕರಿಗೂ ಸಹಾಯ ಸಿಗಲಿದ್ದು, ಇವರಿಗೆ ಮಾಸಿಕ ಸಹಾಯಧನ ಮತ್ತು 23 ವರ್ಷ ಪೂರೈಸುತ್ತಿದ್ದಂತೆ 10 ಲಕ್ಷ ರೂ. ಸಿಗಲಿದೆ.

ಕೊರೊನಾ ಅನಂತರದ ವಿದ್ಯಮಾನಗಳನ್ನು ಗಮನಿಸಿದರೆ, ಈ ಸೌಲಭ್ಯಗಳು ಅಗತ್ಯವಾಗಿ ಬೇಕಾದವುಗಳೇ ಆಗಿವೆ. ಏಕೆಂದರೆ ಇಂಥ ಸಂದರ್ಭದಲ್ಲಿ ಅನಾಥ ಮಕ್ಕಳ ಸಹಾಯಕ್ಕೆಂದು ಬರುವವರ ಸಂಖ್ಯೆ ತೀರಾ ಕಡಿಮೆ. ಈಗಂತೂ ಕೊರೊನಾ ನೋವಿಲ್ಲದ ಮನೆಯನ್ನು ಹುಡುಕುವುದೇ ಕಷ್ಟ ಎಂಬ ಸ್ಥಿತಿ ಇದೆ. ಸರಕಾರವೇ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಅವರ ಸಹಾಯಕ್ಕೆ ಹೋಗುತ್ತಿರುವುದು ಸ್ವಾಗತಾರ್ಹ ಹೆಜ್ಜೆಯಾಗಿದೆ. ಇದರ ಜತೆಯಲ್ಲೇ ಇಂಥ ಮಕ್ಕಳಿಗೆ ಮುಂದಿನ ದಿನಗಳಲ್ಲಿ ಉದ್ಯೋಗ ಸೌಲಭ್ಯವನ್ನು ನೀಡಿದರೆ ಇನ್ನಷ್ಟು ಸಹಾಯವಾಗಬಹುದು. ತಂದೆ ಅಥವಾ ತಾಯಿ ಕಳೆದುಕೊಂಡ ಮಕ್ಕಳ ನೆರವಿಗೆ ಹೋದರೆ ಇನ್ನಷ್ಟು ಸಹಾಯ ಮಾಡಿದಂತೆ ಆಗುತ್ತದೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.