ರಸ್ತೆ ದಾಟಲು ವಾಹನ ಸವಾರರ ಪರದಾಟ


Team Udayavani, Jun 19, 2021, 11:31 AM IST

Untitled-2

ಮುಂಡಗೋಡ: ಇಲ್ಲಿನ ಚಿಕ್ಕ ನೀರಾವರಿ ಇಲಾಖೆಯ ಅವೈಜ್ಞಾನಿಕ ಕಾಮಗಾರಿಯಿಂದ ಯಲ್ಲಾಪುರ ರಸ್ತೆಯಲ್ಲಿ ಕಳೆದ ಮೂರ್‍ನಾಲ್ಕು ದಿನಗಳಿಂದ ಪಾದಾಚಾರಿಗಳಿಗೆ ಮತ್ತು ವಾಹನ ಸವಾರರಿಗೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಚಿಕ್ಕ ನೀರಾವಾರಿ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ನಡುವೆ ಸಮನ್ವಯ ಇಲ್ಲದ್ದರಿಂದ ಕಳೆದ ಒಂದು ವರ್ಷದಿಂದ ಸವಾರರು ಮತ್ತು ಜನರು ಪರದಾಡುವಂತಾಗಿದೆ.

ಪಟ್ಟಣದ ಯಲ್ಲಾಪುರಮುಖ್ಯ ರಸ್ತೆಯಲ್ಲಿ ನಿತ್ಯ ನೂರಾರು ವಾಹನಗಳು ಓಡಾಡುತ್ತವೆ. ಕಳೆದ ವರ್ಷ ಇಲ್ಲಿನ ಸಣ್ಣ ನೀರಾವರಿ ಇಲಾಖೆ ಅಮ್ಮಾಜಿ ಕೆರೆಯಿಂದ ಹೆಚ್ಚುವರಿ ನೀರು ಹರಿದು ಹೋಗಲು ಅವೈಜ್ಞಾನಿಕವಾಗಿ ಕಂದಕ ತೋಡಿದ್ದರು. ಆದರೆ ಇದರಿಂದ ಆ ಭಾಗದ ರೈತರು ತಮ್ಮ ಗದ್ದೆಗಳಿಗೆ ಮಳೆ ನೀರು ಹರಿದು ಬೆಳೆ ಹಾನಿಯಾಗುತ್ತದೆ. ಹಾಗೂ ನಿಯಮದಂತೆ ಕಾಲುವೆ ನಿರ್ಮಿಸಿಲ್ಲ ಎಂದು ಪ್ರತಿಭಟಿಸಿ ನ್ಯಾಯಾಲಯದ ಮೊರೆ ಹೋಗಿದ್ದು ಸದ್ಯ ಈ ಪ್ರಕರಣ ನ್ಯಾಯಾಲಯದಲ್ಲಿದೆ. ಒಟ್ಟಿನಲ್ಲಿ ಚಿಕ್ಕ ನೀರಾವಾರಿ ಇಲಾಖೆಯ ಬೇಜವಾಬ್ದಾರಿಯಿಂದ ಈ ವರ್ಷವು ಸಾರ್ವಜನಿಕರು ಜೀವ ಕೈಯಲ್ಲಿ ಹಿಡಿದುಕೊಂಡು ಸಂಚಾರ ಮಾಡುವಂತಾಗಿದೆ.

ತಾಲೂಕಿನಾದ್ಯಂತ ಕೆಲದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನೀರು ಕಂದಕಗಳಲ್ಲಿ ತುಂಬಿ ಹೆಚ್ಚಾಗಿ ರಸ್ತೆಯ ಮೇಲೆ ನಿಂತು ಕೆರೆಯಾಗಿದೆ. ಕಂದಕಗಳಿಂದ ತುಂಬಿಕೊಂಡು ಬಂದು ರಸ್ತೆಯ ಮೇಲೆ ನಿಂತ ನೀರು ದಾಟಿ ಹೋಗಲು ಸಾಹಸಪಡಬೇಕಾಗಿದೆ. ಇದಲದೇ ನೀರು ಹರಿದು ಹೋಗಲು ಮರಗಳ ಬುಡದ ಪಕ್ಕದಲ್ಲಿಯೇ ಅಗಲವಾದ ಕಂದಕಗಳನ್ನು ತೋಡುತ್ತಾ ಹೋಗಿದ್ದರು. ಇದರಿಂದ ಬೇರುಗಳು ಸಡಿಲಗೊಂಡು 4 ಮರಗಳು ಮತ್ತು ಮರದ ಬೃಹತ್‌ ಟೊಂಗೆ ಮುರಿದು ಬಿದ್ದಿದೆ. ಮುಂದಿನ ದಿನಗಳಲ್ಲಿಯೂ ಬೃಹತ್‌ ಮರಗಳು ಧರೆಗೆ ಉರುಳಬಹುದು ಎಂದುಆ ಭಾಗದ ರೈತರು ತಿಳಿಸಿದ್ದಾರೆ.  ಇದು ಲೋಕೋಪಯೋಗಿ ಇಲಾಖೆಗೆ ಸಂಬಂ ಸಿದ್ದು ಅವರನ್ನು ಕೇಳಿ ಎಂದು ಎಇಇ ಸಣ್ಣ ನೀರಾವರಿ ಇಲಾಖೆ ಗಿರೀಶ ಜೋಶಿ ಪ್ರತಿಕ್ರಿಯಿಸಿದರು.

ಕಳೆದ ವರ್ಷವೂ ನಾವು ಈ ಸ್ಥಳವನ್ನು ದಾಟಿ-ಹೋಗಲು ಪರದಾಡಿದೆವು. ಈಬಾರಿಯೂ ಅದೇ ಪರಿಸ್ಥಿತಿಯಾಗಿದೆ. ಬೈಕ್‌ ಸವಾರರು ಎದ್ದು-ಬಿದ್ದು ಹೋಗುತ್ತಿದ್ದಾರೆ.ಇಂತಹ ಪರಿಸ್ಥಿತಿಯಲ್ಲಿ ಅಧಿಕಾರಿಗಳೇನು ಮಲಗಿದ್ದಾರಿಯೇ ಎಂದು ಆಕ್ರೋಶ ವ್ಯಕ್ತಪಡಿಸಿದರು. -ಅಕ್ಕಮ್ಮಾ ವಿ., ಕರವಳ್ಳಿ ಗ್ರಾಮದ ನಿವಾಸಿ.

ಚಿಕ್ಕ ನೀರಾವರಿ ಇಲಾಖೆಯವರು ಮೊದಲು ಕೋಡಿ ಹೋಗುವಮೂಲಮಾರ್ಗ ಪತ್ತೆ ಹಚ್ಚಿ ತೆರವುಗೊಳಿಸಿದರೆ ಈ ಸಮಸ್ಯೆ ಬಗೆ ಹರಿಯುತ್ತದೆ. ನೀರಾವರಿ ಇಲಾಖೆಯವರೇ ನಮ್ಮ ರಸ್ತೆಯನ್ನು ಆಕ್ರಮಿಸಿ ಅಪಾಯಕಾರಿ ಕಾಲುವೆ ನಿರ್ಮಿಸಿದ್ದಾರೆ. ರಸ್ತೆಹಾಳಾದರೆ ಮತ್ತು ಯಾವುದೇ ಅಪಾಯವಾದರೆ ಇವರೇ ಹೊಣೆಗಾರರಾಗಿದ್ದಾರೆ. ಈ ಬಗ್ಗೆ ಅವರ ಇಲಾಖೆಗೆ ಇಂದೇ ಪತ್ರ ಬರೆಯುತ್ತೇನೆ. ಇದರಲ್ಲಿ ನಮ್ಮ ಇಲಾಖೆಯಿಂದ ನಿರ್ಲಕ್ಷ್ಯವಿಲ್ಲ. -ವಿ.ಎಂ. ಭಟ್ಟ, ಪಿಡಬ್ಲ್ಯುಡಿ ಹೆಚ್ಚುವರಿ ಪ್ರಭಾರಿ ಎಇಇ

 

ಮುನೇಶ ತಳವಾರ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.