ದೇಶ ಹಿತಕ್ಕೆ ಮೋದಿ: ನಿರ್ಮಲಾ
Team Udayavani, Apr 22, 2019, 6:30 AM IST
ವಿದ್ಯಾನಗರ: ಸ್ವತ್ಛ ಆಡಳಿತದ ಮೂಲಕ ಜನತೆಯ ಬೇಡಿಕೆಗಳನ್ನು ಈಡೇರಿಸಿ ಭಾರತವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ನರೇಂದ್ರ ಮೋದಿ ಇನ್ನೊಮ್ಮೆ ಪ್ರಧಾನಿಯಾಗಬೇಕು. ಬಲಿ ಚಕ್ರವರ್ತಿಯ ತ್ಯಾಗ ಭೂಮಿಯಾದ ಕೇರಳದ ಜನತೆ ಇದಕ್ಕೆ ಕಾರಣಕರ್ತರಾಗಬೇಕು ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಅವರು ಕಸಬ ಕಡಪ್ಪುರದಲ್ಲಿ ರವಿವಾರ ನಡೆದ ಎನ್ಡಿಎ ಚುನಾವಣಾ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಭ್ರಷ್ಟಾಚಾರ ಮುಕ್ತವಾದ ಪರಿಶ್ರಮಯುಕ್ತ, ಕಳಂಕವಿಲ್ಲದ ಆಡಳಿತದಿಂದಾಗಿ ದೇಶ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಲು ಸಾಧ್ಯವಾಗಿದೆ. ಕೇರಳದಲ್ಲಿ ಸೈದ್ಧಾಂತಿಕ ಸಂಘರ್ಷದಿಂದ ಜೀವಕ್ಕೆ ಬೆಲೆ ಇಲ್ಲದಾಗಿದೆ. ಜನರ ಸಂರಕ್ಷಣೆಯ ಹೊಣೆ ಹೊತ್ತ ಸರಕಾರ ಅದೆಷ್ಟೋ ಜನರ ಬಲಿದಾನವನ್ನು ಕಂಡೂ ಕಾಣದಂತೆ ನಟಿಸುತ್ತಿದೆ. ಜನರಿಗೆ ನೀಡಬೇಕಾದ ಸೌಲಭ್ಯಗಳೂ ದೊರಕದೆ ಹೋಗಲು ಇಲ್ಲಿನ ಭ್ರಷ್ಟ ಆಡಳಿತವೇ ಕಾರಣ ಎಂದು ಅವರು ಹೇಳಿದರು.
ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಪಿ.ಎಸ್. ಶ್ರೀಧರನ್ ಪಿಳ್ಳೆ ಮಾತನಾಡಿದರು.
ರಕ್ಷಣಾ ಸಚಿವರನ್ನು ಪಕ್ಷದ ಜಿಲ್ಲಾಧ್ಯಕ್ಷ ಅಡ್ವ ಶ್ರೀಕಾಂತ್ ಸ್ವಾಗತಿಸಿದರು.
ಬಿಜೆಪಿಯ ಪ್ರಮೀಳಾ ಸಿ. ನಾಯಕ್ ಮಲ್ಲಿಗೆ ಹಾಗೂ ಗುಲಾಬಿ ಹೂಗಳಿಂದ ವಿಶೇಷವಾಗಿ ತಯಾರಿಸಿದ ಕಿರೀಟವನ್ನು ತೊಡಿಸಿದರು. ಕಾಸರಗೋಡು ಲೋಕಸಭಾ ಅಭ್ಯರ್ಥಿ ರವೀಶ ತಂತ್ರಿ ಅವರನ್ನು ಸಚಿವರು ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಚುನಾವಣೆ ಕರ್ತವ್ಯನಿರತ ಬಿಎಲ್ಒ ಸಾವು
Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು
G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ
Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು
Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್ ಶೆಟ್ಟರ್
MUST WATCH
ಹೊಸ ಸೇರ್ಪಡೆ
Raichur; ಚುನಾವಣೆ ಕರ್ತವ್ಯನಿರತ ಬಿಎಲ್ಒ ಸಾವು
Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು
G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ
Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು
Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್ ಶೆಟ್ಟರ್