Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ
Team Udayavani, May 5, 2024, 1:54 AM IST
ಸಿಸಾಯಿ/ಪಲಮು: ಎನ್ಡಿಎ ಸರಕಾರ ಭ್ರಷ್ಟರ ನಿಜ ಬಣ್ಣವನ್ನು ಬಯಲು ಮಾಡಿದೆ. ಮುಂದಿನ 5 ವರ್ಷ ಗಳಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿರುವ ಎಲ್ಲರಿಗೂ ಕಾನೂ ನಿನ ಪ್ರಕಾರ ತಕ್ಕ ಶಾಸ್ತಿ ಮಾಡಲಾಗುವುದು ಎಂದು ಮೋದಿ ಎಚ್ಚರಿಕೆ ನೀಡಿದ್ದಾರೆ. ಝಾರ್ಖಂಡ್ನ ಪಲಮು ಮತ್ತು ಸಿಸಾಯ್ನಲ್ಲಿ ಚುನಾವಣ ರ್ಯಾಲಿ ಗಳಲ್ಲಿ ಮಾತನಾಡಿದ ಪ್ರಧಾನಿ, ಜೈಲಲ್ಲಿರುವ ಝಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಹೆಸರೆತ್ತದೇ ಪರೋಕ್ಷವಾಗಿ ಅವರನ್ನು ಉಲ್ಲೇಖೀಸಿದ ಮೋದಿ, “ಭ್ರಷ್ಟಾಚಾರದಲ್ಲಿ ಮುಳುಗಿರುವ ಇಂಡಿಯಾ ಒಕ್ಕೂಟವು ಜೈಲಲ್ಲಿರುವ ಭ್ರಷ್ಟರನ್ನು ಬೆಂಬಲಿಸಿ ರ್ಯಾಲಿ ನಡೆಸುತ್ತದೆ. ಇದು ಅವರ ನೈಜ ಮುಖವನ್ನು ಬಯಲು ಮಾಡಿದೆ’ ಎಂದಿದ್ದಾರೆ.
“ಕಾಂಗ್ರೆಸ್ನವರು ಹೇಡಿಗಳು. ಭಯೋತ್ಪಾದಕ ದಾಳಿ ನಡೆದಾಗೆಲ್ಲ ಹಿಂದಿನ ಕಾಂಗ್ರೆಸ್ ಸರಕಾರ ಜಾಗತಿಕ ವೇದಿಕೆಯಲ್ಲಿ ಹೋಗಿ ಅಳುತ್ತಿತ್ತು. ಆದರೆ ನಮ್ಮ ಸರಕಾರ ಬಂದ ಬಳಿಕ ಪರಿಸ್ಥಿತಿ ಬದಲಾಗಿದೆ. ಈಗ ಪಾಕಿಸ್ಥಾನವೇ ಅಳುತ್ತಾ, ಸಹಾ ಯಕ್ಕಾಗಿ ಬೊಬ್ಬಿರಿ ಯುತ್ತಿದೆ’ ಎಂದರು. ಕಾಂಗ್ರೆಸ್ ಸರಕಾರವು ಶಾಂತಿಯ ನಿರೀಕ್ಷೆಯಲ್ಲಿ ಪಾಕಿಸ್ಥಾನಕ್ಕೆ ಲವ್ ಲೆಟರ್ ಬರೆಯುತ್ತಿತ್ತು. ಅದಕ್ಕೆ ಬದಲಾಗಿ ನೆರೆರಾಷ್ಟ್ರವು ಮತ್ತಷ್ಟು ಉಗ್ರರನ್ನು ಇಲ್ಲಿಗೆ ಕಳುಹಿಸುತ್ತಿತ್ತು. ಈಗಿ ರುವುದು ನವ ಭಾರತ. ಇಲ್ಲಿ ನಾವು ಉಗ್ರರ ನೆಲಕ್ಕೇ ನುಗ್ಗಿ ಹೊಡೆದು ಬರುತ್ತೇವೆ. ಅದೇ ಕಾರಣಕ್ಕೆ ಪಾಕಿ ಸ್ಥಾನವು “ಶೆಹಜಾದಾ'(ರಾಹುಲ್) ಪ್ರಧಾನಿಯಾಗ ಲೆಂದು ಬೇಡುತ್ತಿದೆ’ ಎಂದಿದ್ದಾರೆ.
ಪಟ್ನಾದಲ್ಲೂ ಒಬ್ಬ ಶೆಹಜಾದಾ: ಮೋದಿ
“ದಿಲ್ಲಿಯಲ್ಲಿ ಒಬ್ಬ ಶೆಹಜಾದಾ(ರಾಜಕುಮಾರ) ಇರುವಂತೆ ಪಟ್ನಾದಲ್ಲೂ ಇದ್ದಾರೆ. ದಿಲ್ಲಿಯ ಶೆಹಜಾದಾ ಇಡೀ ದೇಶವನ್ನೇ ತನ್ನ ಆಸ್ತಿ ಎಂದು ಭಾವಿಸಿದ್ದರೆ, ಪಟ್ನಾದ ರಾಜಕುಮಾರ ಇಡೀ ಬಿಹಾರವೇ ತನ್ನ “ಆಸ್ತಿ’ ಎಂದು ಭಾವಿಸಿದ್ದಾರೆ’ ಎಂದು ಮೋದಿ ಟೀಕಿಸಿದ್ದಾರೆ.
“ಮನೆ, ಸೈಕಲ್ ಕೂಡ ಇಲ್ಲ’
25 ವರ್ಷಗಳಲ್ಲಿ ನನ್ನ ಮೇಲೆ ಭ್ರಷ್ಟಾಚಾರದ ಒಂದೇ ಒಂದು ಕಪ್ಪುಚುಕ್ಕೆಯೂ ಇಲ್ಲ. ನನ್ನ ಬಳಿ ಸ್ವಂತ ಮನೆ ಯೂ ಇಲ್ಲ, ಒಂದು ಸೈಕಲ್ ಕೂಡ ಇಲ್ಲ. ಆದರೆ ಕಾಂಗ್ರೆಸ್ ಮತ್ತು ಜೆಎಂಎಂ ನಾಯಕರು ತಮ್ಮ ಮಕ್ಕ ಳಿಗಾಗಿ ಪ್ರಮಾಣದ ಆಸ್ತಿಪಾಸ್ತಿಗಳನ್ನು ಮಾಡಿ ಟ್ಟು ಕೊಂಡಿದ್ದಾರೆ ಎಂದ ಮೋದಿ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ
Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್ ಮಹಲ್ ಪ್ರತಿಸ್ಪರ್ಧಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು
Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ
Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್