ಪರಿಸರ ಉಳಿಸಿ ಬೆಳೆಸಲು ನಿಜಗುಣಪ್ರಭು ಶ್ರೀ ಸಲಹೆ

ಅಗತ್ಯ ಇರುವ ಸೌಲಭ್ಯಗಳನ್ನು ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ

Team Udayavani, Aug 1, 2022, 6:23 PM IST

ಪರಿಸರ ಉಳಿಸಿ ಬೆಳೆಸಲು ನಿಜಗುಣಪ್ರಭು ಶ್ರೀ ಸಲಹೆ

ಬಸವನಬಾಗೇವಾಡಿ: ಜಗತ್ತಿನಲ್ಲಿ ಪ್ರಕೃತಿ, ಗಾಳಿ, ನೀರಿನ ಮುಂದೆ ಯಾವುದೂ ದೊಡ್ಡದಲ್ಲ, ಎಲ್ಲವೂ ಶೂನ್ಯ ಎಂದು ತೋಂಟದಾರ್ಯ ಹಾಗೂ ನಿಷ್ಕಲ ಮಂಟಪ ಬೈಲೂರು ಮಠದ ನಿಜಗುಣಪ್ರಭು ಶ್ರೀಗಳು ಹೇಳಿದರು.

ಶ್ರಾವಣ ಮಾಸದ ನಿಮಿತ್ತ ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಬಸವೇಶ್ವರ ದೇವಸ್ಥಾನದ ಅಂತಾರಾಷ್ಟ್ರೀಯ ಆಂಗ್ಲಮಾಧ್ಯಮ ಶಾಲೆ ಆವರಣದಲ್ಲಿ ತಿಂಗಳವರೆಗೆ ನಡೆಯಲಿರುವ ಅನುಭಾವ ದರ್ಶನ ಪ್ರವಚನ ಆರಂಭೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಜಗತ್ತಿನಲ್ಲಿ ಕೆಲವರು ಆಸ್ತಿ, ಅಂತಸ್ತು, ಸಂಪತ್ತು, ಐಶ್ವರ್ಯವೇ ದೊಡ್ಡದೆಂದು ತಿಳಿದುಕೊಂಡು ರಾಜ್ಯ ವೈಭವ ಮಾಡುತ್ತಿದ್ದರು. ಆದರೆ ಕಳೆದೆರೆಡು ವರ್ಷದ ಹಿಂದೆ ಜಗತ್ತಿಗೆ ಅಪ್ಪಳಿಸಿದ ಕೊರೊನಾ ರೋಗ ಮಾನವ ಕುಲಕ್ಕೆ ಆಸ್ತಿ, ಅಂತಸ್ತು, ಸಂಪತ್ತು, ಐಶ್ವರ್ಯವೇ ದೊಡ್ಡದಲ್ಲ ಎಂದು ತೋರಿಸಿಕೊಟ್ಟಿದೆ ಎಂದು ಹೇಳಿದರು.

ನಾವು ಮತ್ತು ನಮ್ಮ ಕುಟುಂಬ ಸುಂದರ ಬದುಕು ಸಾಗಿಸಬೇಕಾದರೆ ಪರಿಸರವನ್ನು ಕಾಪಾಡಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಪ್ರಕೃತಿಯನ್ನು ಪೂಜಿಸಿ ಪರಿಸರ ಸಂರಕ್ಷಿಸಿ ಉಳಿಸಿ ಬೆಳೆಸಬೇಕಿದೆ ಎಂದರು. ಪ್ರವಚನಕ್ಕೆ ಚಾಲನೆ ನೀಡಿದ ಮಾಜಿ ಸಚಿವ, ಶಾಸಕ ಶಿವಾನಂದ ಪಾಟೀಲ ಮಾತನಾಡಿ, ಬಸವಣ್ಣನವರ ಜನ್ಮಸ್ಥಳವಾದ ಬಸವನಬಾಗೇವಾಡಿ ಪಟ್ಟಣಕ್ಕೆ ಆಗಮಿಸುವ ರಾಜ್ಯ ಮತ್ತು ಹೊರ ರಾಜ್ಯದ ಭಕ್ತರಿಗೆ ಅಗತ್ಯ ಇರುವ ಮೂಲ ಸೌಲಭ್ಯ ದೊರಕಿಸಿ ಕೊಡಲಾಗಿದೆ. ಇನ್ನೂ ಅಗತ್ಯ ಇರುವ ಸೌಲಭ್ಯಗಳನ್ನು ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಈ ನಾಡಿನ ಅನೇಕ ಹರಗುರು ಚಿರಮೂರ್ತಿಗಳ ಮತ್ತು ಪಟ್ಟಣದ ಹಿರಿಯರ ಆಸೆಯಂತೆ ಮೂಲ ನಂದೀಶ್ವರನ ಮೂರ್ತಿಗೆ ಬೆಳ್ಳಿ ಲೇಪನ ಮಾಡುವುದು ಮತ್ತು ನಂದಿ ಮೂರ್ತಿ ಕೊಂಬಿಗೆ ಬಂಗಾರದ ಕೊಮ್ಮನ್ಸು ಮಾಡಿಸುವ ವಿಚಾರ ಪದೆ ಪದೆ ಕೇಳಿ ಬರುತ್ತಿದೆ. ಹೀಗಾಗಿ ಈ ವರ್ಷದಿಂದಲೇ ತಮ್ಮ ಆಸೆಯಂತೆ ಶೀಘ್ರದಲ್ಲೇ ನಾನು ಹಾಗೂ ಪಟ್ಟಣದ ಅಗರವಾಲ ಬಂಧುಗಳು ಸೇರಿ ನಂದಿ ಮೂರ್ತಿಯ ಕೊಂಬಿಗೆ ಬಂಗಾರದ ಕೊಮ್ಮನ್ಸು ಮಾಡಿಸುತ್ತೇವೆ ಎಂಬ ಭರವಸೆ ನೀಡಿದರು.

ಈ ಬಾರಿ ಜಾತ್ರೆಯನ್ನು ಅದ್ದೂರಿಯಾಗಿ ಆಚರಿಸಬೇಕು. ರಾಜ್ಯ ಮತ್ತು ಹೊರ ರಾಜ್ಯಗಳಿಂದ ಬಂದ ಭಕ್ತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ವಸತಿ ಮತ್ತು ಇನ್ನಿತರ ಸೌಲಭ್ಯ ಒದಗಿಸಿಕೊಡುವಲ್ಲಿ ಜಾತ್ರಾ ಕಮಿಟಿ ಪದಾಧಿಕಾರಿಗಳು ಅಚ್ಚು ಕಟ್ಟಾಗಿ ನಿಭಾಯಿಸುತ್ತಾರೆ ಎಂಬ ಆತ್ಮವಿಶ್ವಾಸವಿದ್ದು. ಅದ್ದೂರಿಯಾಗಿ ಜಾತ್ರೆ ಆಚರಿಸಲು ಪಟ್ಟಣದ ಜನತೆಯ ಸಹಕಾರ ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿರಕ್ತಮಠದ ಸಿದ್ದಲಿಂಗ ಶ್ರೀಗಳು, ಜಾತ್ರಾ ಕಮಿಟಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಮುಖಂಡರಾದ ಶಿವನಗೌಡ ಬಿರಾದಾರ, ಬಸವರಾಜ ಹಾರಿವಾಳ, ಭರತ್‌ಕುಮಾರ ಅಗರವಾಲ, ಸಂಗಮೇಶ ಓಲೇಕಾರ, ಬಸವರಾಜ ಗೊಳಸಂಗಿ, ಶೇಖರಗೌಡ ಪಾಟೀಲ, ಪರಶುರಾಮ ಜಮಖಂಡಿ, ಮೇರಾಸಾಬ ಕೊರಬು, ಸಂಗಮೇಶ ವಾಡೇದ, ಸುರೇಶಗೌಡ ಪಾಟೀಲ, ಸುರೇಶ ಹಾರಿವಾಳ, ಸುಭಾಷ್‌ ಚಿಕ್ಕೊಂಡ, ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರ ಆಯುಕ್ತ
ಬಸವರಾಜ ಪೂಜಾರಿ, ಪುರಸಭೆ ಅಧ್ಯಕ್ಷ ರೇಖಾ ಬೆಕಿನಾಳ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.