ಹೆಚ್ಚಿನ ಬೆಲೆಗೆ ಪೆಟ್ರೋಲ್‌ ಮಾರಾಟ

ಲಾಕ್‌ಡೌನ್‌ ಪರಿಸ್ಥಿತಿ ದುರ್ಲಾಭ ಪಡೆಯುತ್ತಿರುವ ಬಂಕ್‌ ಮಾಲೀಕರು: ಆರೋಪ

Team Udayavani, Apr 28, 2020, 5:05 PM IST

ಹೆಚ್ಚಿನ ಬೆಲೆಗೆ ಪೆಟ್ರೋಲ್‌ ಮಾರಾಟ

ಸಾಂದರ್ಭಿಕ ಚಿತ್ರ

ಪಾಂಡವಪುರ: ಪೆಟ್ರೋಲ್‌ ಬಂಕ್‌ಗಳಲ್ಲಿ ಪೆಟ್ರೋಲ್‌ ಪಡೆಯಲು ಪೊಲೀಸ್‌ ಠಾಣೆ ಅಥವಾ ತಾಲೂಕು  ಕಚೇರಿಯಿಂದ ಅಧಿಕೃತ ಪಾಸ್‌ ಹೊಂದಿರಬೇಕು. ಆದರೆ ಕೆಲ ಬಂಕ್‌ ನಿರ್ವಾಹಕರು ಇದನ್ನೇ ಬಂಡವಾಳ ಮಾಡಿಕೊಂಡು ಕಾಳಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಿ ಜೇಬು ತುಂಬಿಸಿಕೊಳ್ಳುತ್ತಿದ್ದಾರೆ.

ಕೋವಿಡ್ ತಡೆಗಟ್ಟಿರುವ ಸರ್ಕಾರಗಳು ಲಾಕ್‌ಡೌನ್‌ ಆಗಿದ್ದು, ರಸ್ತೆಯಲ್ಲಿ ಸಾರ್ವಜನಿಕರು ಅಡ್ಡಾಡದಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದು, ಅಗತ್ಯ ಕೆಲಸಗಳಿಗೆ ಹೋಗಬೇಕಾದ ವ್ಯಕ್ತಿಗಳಿಗಷ್ಟೆ ಪಾಸ್‌ ನೀಡಲಾಗಿದೆ. ಅವರಿಗೆ ಅಧಿಕೃತವಾಗಿ ಓಡಾಡಲು ಅವಕಾಶ ಕಲ್ಪಿಸಲಾಗಿದೆ. ಜತೆಗೆ ಪೆಟ್ರೋಲ್‌ ಬಂಕ್‌ಗಳಲ್ಲಿ ಪೆಟ್ರೋಲ್‌ ನೀಡುವಂತೆ ಆದೇಶ ನೀಡಲಾಗಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸಲು ಮುಂದಾದ ಪೊಲೀಸ್‌ ಇಲಾಖೆ ಪ್ರತಿ ಬಂಕ್‌ಗೂ ಒಬ್ಬರಂತೆ ನೇಮಿಸಿ ಪಾಸ್‌ ಹೊಂದಿದ್ದವರಿಗೆ ಮಾತ್ರ ಪೆಟ್ರೋಲ್‌ ಪಡೆಯಲು ಅವಕಾಶ ಕಲ್ಪಿಸಿದ್ದಾರೆ.

ಪೆಟ್ರೋಲ್‌ ಪಡೆಯಲು ಬಂಕ್‌ಗಳ ಮುಂದೆ ಕಾರ್ಮಿಕರು ಅಂಗಲಾಚುವ ಪರಿಸ್ಥಿತಿ ನಿರ್ಮಾಣ ವಾಗಿದೆ. ಪೆಟ್ರೋಲ್‌ಗೆ ಬೇಡಿಕೆ ಹೆಚ್ಚಾಗಿದ್ದು, ಕಾಳಸಂತೆಯಲ್ಲಿ ದುಪ್ಪಟ್ಟು ಹಣ ಕೊಟ್ಟು ಪೆಟ್ರೋಲ್‌ ಪಡೆದುಕೊಳ್ಳಬೇಕಾದ ಸ್ಥಿತಿ ಬಂದೊದಗಿದೆ. ಕಾಳಸಂತೆಯಲ್ಲಿ ಪೆಟ್ರೋಲ್‌ ಮಾರಿ ಲಾಭ ಮಾಡಿಕೊಳ್ಳುತ್ತಿದ್ದಾರೆ.

ಲೀಟರ್‌ಗೆ 130 ರೂ.: ಪಟ್ಟಣದ ಕೆಲ ಬಂಕ್‌ ಮಾಲೀಕರು ಗ್ರಾಮೀಣ ಪ್ರದೇಶದ ಕೆಲ ಯುವಕರಿಗೆ ಕಮಿಷನ್‌ ನೀಡುವ ಭರವಸೆ ನೀಡಿ ರಾತ್ರೋರಾತ್ರಿ ಬಂಕ್‌ನಿಂದ ಪೆಟ್ರೋಲ್‌ನ್ನು ಕ್ಯಾನ್‌ಗಳಿಗೆ ತುಂಬಿಸಿ ಕಾಳಸಂತೆಯಲ್ಲಿ ಪ್ರತಿ ಲೀಟರ್‌ಗೆ 120ರಿಂದ 130 ರವರೆಗೂ ಮಾರಾಟ ಮಾಡಿಸುವ ದಂಧೆಯಲ್ಲಿ ತೊಡಗಿಕೊಂಡಿದ್ದಾರೆ. ರೈತರು ದಿನನಿತ್ಯದ ಕೆಲಸಗಳಿಗೆ,
ಗೊಬ್ಬರ ಸಾಗಣೆಗೆ, ಜಾನುವಾರುಗಳಿಗೆ ಮೇವು ತರುವುದು ಇತ್ಯಾದಿ ಕೆಲಸಕ್ಕೆ ಬೈಕ್‌ ಓಡಿಸಲೇಕಾದ ಅನಿವಾರ್ಯತೆ ಇದೆ. ಹಾಗಾಗಿ ಪೆಟ್ರೋಲ್‌ಗೆ ದುಪ್ಪಟ್ಟು ಹಣ ನೀಡಿ ಕೊಂಡುಕೊಳ್ಳುವಂತಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.