ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೀಸಲಾತಿ ಹಂಚಿಕೆ ಮಾಡಿರುವುದು ಬಿಜೆಪಿ ಸಾಧನೆ

Team Udayavani, Mar 26, 2023, 9:36 PM IST

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಹುಣಸೂರು: ಕಳೆದ 25 ವರ್ಷಗಳಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್, ಜೆಡಿಎಸ್ ಸರಕಾರಗಳು ಮಾಡದ ಮೀಸಲಾತಿಯ ಕ್ರಾಂತಿಕಾರಿ ಕೆಲಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಮಾಡಿದೆ ಎಂದು ಸಂಸದ ಪ್ರತಾಪಸಿಂಹ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಸದರು, ಮುಸ್ಲಿಮರಿಗೆ ಓಲೈಕೆಗಾಗಿ ಹಿಂದೆ ಶೇ.೪ರಷ್ಟು ಮೀಸಲಾತಿಯನ್ನು ನೀಡಿದ್ದರು. ಇದು ಸಂವಿಧಾನ ಅಡಿಯಲ್ಲಿ ತಪ್ಪು ನಿರ್ಧಾರವಾಗಿತ್ತು. ಆದರಿಂದ ಇಂದಿನ ಬಿಜೆಪಿ ಸರಕಾರ ಯಾವ ರೀತಿಯಲ್ಲಿ ಮೀಸಲಾತಿ ಕಲ್ಪಿಸಬೇಕೆಂಬುದನ್ನು ಕಾನೂನಿನಡಿಯಲ್ಲಿ ಪರಾಮರ್ಶಿಸಿ, ನ್ಯಾಯಯುತವಾಗಿ ಮೀಸಲಾತಿಯನ್ನು ನೀಡಿದೆ.

ಸಂವಿಧಾನಾತ್ಮಕವಾಗಿ ಮುಸ್ಲಿಮರ ಮೀಸಲಾತಿಯನ್ನು ರದ್ದುಮಾಡಿ, ನ್ಯಾಯಯುತವಾಗಿ ಸಮುದಾಯಕ್ಕೆ ಸಿಗಬೇಕಾದ ಒಕ್ಕಲಿಗ, ವೀರಶೈವ, ಎಸ್.ಸಿ-ಎಸ್.ಟಿ. ಜನಾಂಗಕ್ಕೆ ಮೀಸಲಾತಿ ಹೆಚ್ಚಳ ಜೊತೆಗೆ ಒಳ ಮೀಸಲಾತಿ ಸೌಲಭ್ಯ ಕಲ್ಪಿಸಿದ್ದು, ಅಲ್ಪಸಂಖ್ಯಾತರಿಗೆ ಅನಾವಶ್ಯಕವಾಗಿ ನೀಡಿದ್ದ ಮೀಸಲಾತಿಯನ್ನು ಇತರರಿಗೆ ಹಂಚಿಕೆ ಮಾಡುವ ಮೂಲಕ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸಿದ್ದಾರೆ. ಅಲ್ಲದೆ ಬ್ರಾಹ್ಮಣ ಸಮುದಾಯದ ಬಡವರಿಗಾಗಿ ಶೇ.10ರಷ್ಟು ಮೀಸಲಾತಿ ಕಲ್ಪಿಸಲಾಗಿದೆ.

ಪರಿಶಿಷ್ಟ ವರ್ಗದ ಮೀಸಲಾತಿಯಡಿ ಆದಿವಾಸಿಗಳಿಗೆ ಒಳ ಮೀಸಲಾತಿ ಅವಶ್ಯದ ಬಗೆಗಿನ ಹಾಗೂ ಮುಜಾಫರ್ ಅಸ್ಸಾದಿ ವರದಿಯನ್ವಯ 3418 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಸಂಬಂಧ ಬಿಜೆಪಿ ಸರಕಾರ ಗಮನ ಹರಿಸಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

18 ತಿಂಗಳಲ್ಲಿ ಎಲ್ಲರಿಗೂ ಶುದ್ದ ನೀರು:
ಹಳೆ ಉಂಡುವಾಡಿಯಿಂದ ಸುಮಾರು ೫೮೦ಕೋಟಿ ರೂ ವೆಚ್ಚದಲ್ಲಿ ಹುಣಸೂರು-ಚಾಮುಂಡೇಶ್ವರಿ ಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ಕೇಂದ್ರ ಸರಕಾರದ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಮುಂದಿನ 18 ತಿಂಗಳಿನಲ್ಲಿ ಕಾವೇರಿ ನದಿಯಿಂದ ನದಿಯಿಂದ ಶುದ್ಧ ಕುಡಿಯುವ ನೀರಿನ ಪೂರೈಸಲಾಗುವುದು. ಹಾಗೂ ಹುಣಸೂರು ತಾಲೂಕಿನ ಮರದೂರು ಏತ ನೀರಾವರಿಯೋಜನೆಯಡಿ ತಾಲೂಕಿನ 47, ಕೋಟೆ ತಾಲೂಕಿನ 2 ಕೆರೆಗಳಿಗೆ ನೀರು ತುಂಬಿಸುವ 85 ಕೋಟಿ ವೆಚ್ಚದ ಯೋಜನೆಗೆ ಸಂಪುಟಸಭೆ ಒಪ್ಪಿಗೆ ನೀಡಿದೆ. ಅಲ್ಲದೆ ಒಕ್ಕಲಿಗ ಸಮುದಾಯಕ್ಕೆ ನಗರದಲ್ಲಿ ಎರಡು ಎಕರೆ ಭೂಮಿ, 2 ಕೋಟಿ ರೂ ಅನುದಾನ ಬಿಡುಗಡೆಮಾಡಿದ್ದು. ಸಂಸದರ ನಿಧಿಯಿಂದ 50 ಲಕ್ಷರೂ ನೀಡುವುದಾಗಿ ತಿಳಿಸಿದರು.
ಲಕ್ಷ್ಮಣತೀರ್ಥ ನದಿ ಶುದ್ದೀಕರಣಕ್ಕೆ 90 ಕೋಟಿ ವೆಚ್ಚದಡಿ ಡಿಪಿಆರ್ ತಯಾರಿಸಿದ್ದು, ಮೊದಲ ಹಂತದಲ್ಲಿ 29 ಕೋಟಿರೂ ಬಿಡುಗಡೆಯಾಗಿ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಸುದ್ದಿಗೋಷ್ಟಿಯಲ್ಲಿ ಬಿಜೆಪಿ ವಿಭಾಗೀಯ ಪ್ರಮುಖ್ ಮೈ.ವಿ.ರವಿಶಂಕರ್, ತಾಲೂಕು ಅಧ್ಯಕ್ಷ ನಾಗಣ್ಣಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಯೋಗಾನಂದಕುಮಾರ್, ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ರಮೇಶ್‌ಕುಮಾರ್, ತಂಬಾಕು ಮಂಡಳಿ ಸದಸ್ಯ ದಿನೇಶ್, ಮುಖಂಡರಾದ ಹನಗೋಡುಮಂಜುನಾಥ್, ದೇವರಹಳ್ಳಿ ಸೋಮಶೇಖರ್, ಮಹದೇವ್ ಮತ್ತಿತರರಿದ್ದರು.

ಹುಣಸೂರಿಗೆ ಸ್ಪರ್ಧಿಯಲ್ಲಾ: ಹುಣಸೂರು ಕ್ಷೇತ್ರಕ್ಕೆ ನಿಮ್ಮ ಹೆಸರು ಕೇಳಿಬರುತ್ತಿದೆಯಲ್ಲಾ ಎಂಬ ಪ್ರಶ್ನೆಗೆ ನನ್ನ ಕ್ಷೇತ್ರವ್ಯಾಪ್ತಿಯಲ್ಲಿ ಸರ್ವರಿಗೂ ಸೌಲಭ್ಯ ಕಲ್ಪಿಸುವುದಕ್ಕೆ ಮೊದಲ ಆಧ್ಯತೆ, ಮೋದಿಯವರ ಕೈಕೆಳಗೆ ಕೆಲಸ ಮಾಡುವೆನೇ ಹೊರತು. ರಾಜ್ಯ ರಾಜಕಾರಣಕ್ಕೆ ಬರಲ್ಲವೆಂದು ಸಂಸದ ಪ್ರತಾಪಸಿಂಹ ಸ್ಪಷ್ಟಪಡಿಸಿದರು. ಪ್ರತಿಬಾರಿ ಹೊರಗಿನ ಅಥವಾ ಡೆಮ್ಮಿ ಕ್ಯಾಂಡಿಡೇಟ್ ಹಾಕುತ್ತೀರಾ ಎಂಬ ಅಭ್ಯರ್ಥಿ ಬಗೆಗಿನ ಪ್ರಶ್ನೆಗೆ ಕಮಲವೇ ಇಲ್ಲಿ ಅಭ್ಯರ್ಥಿ ಎಂದು ಹೇಳಿ ಜಾರಿಕೊಂಡರು.

ಇದನ್ನೂ ಓದಿ: ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.