ಪಾರದರ್ಶಕತೆಗೆ ಆದ್ಯತೆ: ಮುಲಾಲಿ


Team Udayavani, Mar 6, 2021, 7:09 PM IST

Preference for transparency

ಯಾದಗಿರಿ: ಕನ್ನಡ ಸಾಹಿತ್ಯ ಪರಿಷತ್ತನ್ನು ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕವಾಗಿ ನಿರ್ಮಾಣ ಮಾಡಲು ಆದ್ಯತೆ ನೀಡಲಾಗುವುದು ಎಂದು ಕೇಂದ್ರ ಪರಿಷತ್‌ ಅಧ್ಯಕ್ಷ ಸ್ಥಾನದ ಸೇವಾಕಾಂಕ್ಷಿ ರಾಜಶೇಖರ ಮುಲಾಲಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ನಾಡಿನ ಆಸ್ಮಿತೆಯಾಗಿರುವ ಸಾಹಿತ್ಯ ಪರಿಷತ್ತು 4 ಲಕ್ಷ ಸದಸ್ಯತ್ವ ಹೊಂದಿದ್ದು ಸಾಹಿತ್ಯಾಸಕ್ತರಿಗೆ ಸದಸ್ಯತ್ವ ನೀಡುವ ವಿಚಾರದಲ್ಲಿಯೂ ಸಾಕಷ್ಟು ಆರೋಪಗಳಿದ್ದು, ತಾವು ಅಧ್ಯಕ್ಷರಾದರೆ, ಕನ್ನಡ ಸಾಹಿತ್ಯ ಪರಿಷತ್‌ಗೆ ಡಿಜಿಟಲ್‌ ಸ್ಪರ್ಶ ನೀಡಿ, ಸರ್ವ ಸದಸ್ಯರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಣೆ ಗುರಿಯಿದೆ ಎಂದರು.

ಪರಿಷತ್‌ ಸ್ಥಾಪನೆಯಾಗಿ 105 ವರ್ಷ ಕಳೆದರೂ ಅಭಿವೃದ್ಧಿ ಕಂಡಿಲ್ಲ. ನಿವೃತ್ತರ ತಾಣ ಮತ್ತು ಗಂಜಿ ಕೇಂದ್ರವೆಂಬ ಕಪ್ಪು ಚುಕ್ಕೆಯಿದ್ದುಅದನ್ನು ಅಳಿಸುವ ನಿಟ್ಟಿನಲ್ಲಿ ಅಗತ್ಯ  ಕ್ರಮವಹಿಸಿ, ಕನಿಷ್ಟ 30 ಲಕ್ಷ ಸದಸ್ಯತ್ವ ನೀಡಿ ಪ್ರತಿ ಹಳ್ಳಿಗಳಲ್ಲಿಯೂ ಕಸಾಪ ಸದಸ್ಯತ್ವ ಹೊಂದುವಂತೆ ಯೋಜನೆ ರೂಪಿಸಲಾಗುವುದು ಎಂದರು.

ಹಿಂದೆ ಕಸಾಪ ಸಮ್ಮೇಳದ ವೇಳೆ ನಕಲಿ ಬಿಲ್‌ ಸೃಷ್ಟಿಸಿ ಭ್ರಷ್ಟಾಚಾರ ನಡೆಸಿರುವ ಕುರಿತು ತಾವು ದೂರು ನೀಡಿದ್ದು ಪ್ರಕರಣ ತನಿಖೆ ಹಂತದಲ್ಲಿದೆ. ಈ ಮೂಲಕ ಭ್ರಷ್ಟಾಚಾರ ರಹಿತವಾಗಿ ನಿರ್ಮಿಸಲು ಶ್ರಮಿಸುತ್ತಿರುವುದಾಗಿ ಹೇಳಿದ ಅವರು, ಬೆಳಗಾವಿಯಲ್ಲಿ ಪುಂಡಾಟ ನಡೆದರೂ ಕನ್ನಡಪರ ಸಂಘಟನೆಗಳು ಧರಣಿ ನಡೆಸುತ್ತದೆ. ಆದರೆ ಕಸಾಪ ಈ ಬಗ್ಗೆ ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ ಎಂದರು.

ಗಡಿ ಕನ್ನಡ ಶಾಲೆಗಳು ಮುಚ್ಚುವ ಹಂತ ತಲುಪಿದ್ದು ಪುನಃಶ್ಚೇತನ ನೀಡುವುದು, ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ ಪ್ರತಿಭಾವಂತ ಮಕ್ಕಳ ಕನ್ನಡ ಮಾಧ್ಯಮದ ಉನ್ನತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸುವುದು, ಕನ್ನಡ ಸಾಹಿತ್ಯ ಪರಿಷತ್‌ ಸರ್ವಾಂಗೀಣ ಅಭಿವೃದ್ಧಿಗೆ ವಲಯವಾರು ಗೌರವ ಕಾರ್ಯದರ್ಶಿ ನೇಮಕಗೊಳಿಸಿ, ಕನ್ನಡ ಸಾಹಿತ್ಯ ಪುಸ್ತಕಗಳ ಮುದ್ರಣಕ್ಕೆ ಉತ್ತೇಜನ ನೀಡುವ ಚಿಂತನೆಯಿದೆ.

ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯಮಟ್ಟದ ಮಹಿಳಾ ಘಟಕ ಸ್ಥಾಪಿಸಿ ಮಹಿಳೆಯರಿಗೆ ಆದ್ಯತೆ ನೀಡುವುದು, ಯುವ ಸಾಹಿತಿಗಳನ್ನು ಗುರುತಿಸಿ ಪ್ರೋತ್ಸಾಹಿಸಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಹಣಮೇಶ ಉಪ್ಪಾರ್‌, ಮಂಜುನಾಥ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.