ಕ್ವಾರಂಟೈನ್‌ ಕೇಂದ್ರ: ಉತ್ತಮ ವ್ಯವಸ್ಥೆಗೆ ಸೂಚನೆ


Team Udayavani, May 16, 2020, 5:55 AM IST

ಕ್ವಾರಂಟೈನ್‌ ಕೇಂದ್ರ: ಉತ್ತಮ ವ್ಯವಸ್ಥೆಗೆ ಸೂಚನೆ

ಕುಂದಾಪುರ: ಕ್ವಾರಂಟೈನ್‌ ಕೇಂದ್ರದಲ್ಲಿ ಇರುವವರು ನಮ್ಮ ಊರಿನ ನಮ್ಮ ವರೇ ಆಗಿದ್ದು ಅವರು ಅಪರಾಧಿಗಳಲ್ಲ, ಕೈದಿಗಳಲ್ಲ. ಅವರ ಹಾಗೂ ಇತರರ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಅವರನ್ನು ಪ್ರತ್ಯೇಕ ನಿಗಾದಲ್ಲಿ ಇರಿಸಲಾಗಿದೆ. ಆದ್ದ ರಿಂದ ಅವರಿಗೆ ಉತ್ತಮ ವಸತಿ, ಆಹಾರದ ವ್ಯವಸ್ಥೆ ಮಾಡಬೇಕಾದುದು ನಮ್ಮೆಲ್ಲರ ಕರ್ತವ್ಯ.

ಇದಕ್ಕಾಗಿ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ತಾಲೂಕು ಆಡಳಿತದ ಜತೆಗೆ ಕೈ ಜೋಡಿಸುತ್ತೇವೆ ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು.

ಅವರು ಶುಕ್ರವಾರ ಇಲ್ಲಿನ ತಾಲೂಕು ಪಂ. ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ಉತ್ತಮ ಗುಣಮಟ್ಟದ ಆಹಾರ, ಸಮಯಕ್ಕೆ ಸರಿಯಾಗಿ ನೀಡಬೇಕು. ಆಹಾರ ಕೊಂಡೊಯ್ಯಲು ಕೇಂದ್ರಕ್ಕೊಂದು ವಾಹನದಂತೆ ನಿಯೋಜಿಸಿ ಅಥವಾ ಅಲ್ಲೇ ಅಡುಗೆ ತಯಾರಿಸಿ ನೀಡುವ ವ್ಯವಸ್ಥೆ ಮಾಡಿ. ಪಂಚಾಯತ್‌ ಮಟ್ಟದಲ್ಲಿ ಸಭೆ ನಡೆಸಿ ದಾನಿಗಳನ್ನು ಸಂಪರ್ಕಿಸಿ ಎಂದರು.

ಕ್ವಾರಂಟೈನ್‌ ಸೆಂಟರ್‌ ಮಾಡಲು ವಿರೋಧ ಮಾಡುವವರ ಕುರಿತು ಪೊಲೀಸರಿಗೆ ಮಾಹಿತಿ ನೀಡಿ. ಇದು ದೇಶಕ್ಕೆ ಒದಗಿದ ವಿಪತ್ತು. ಇಂತಹ ಸಂದರ್ಭದಲ್ಲಿ ಯಾರೂ ಕಾರ್ಯಾಚರಣೆಗೆ ಅಡ್ಡಿ ಮಾಡುವಂತಿಲ್ಲ ಎಂದ ಶಾಸಕರು, ಕ್ವಾರಂಟೈನ್‌ ಕೇಂದ್ರಗಳ ಅಗತ್ಯ ನಿರ್ವಹಣೆಗೆ ಬೇಕಾದ ಎಲ್ಲ ನೆರವು ನೀಡುವುದಾಗಿ ಹೇಳಿದರು. ಆಹಾರ ಸರಬರಾಜಿಗೆ ತಾವೇ ಸ್ವತಃ ವಾಹನಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು. ಸಂಘ ಸಂಸ್ಥೆಗಳು, ರಾಜಕೀಯ ಪಕ್ಷದವರು ಜಾತಿ, ಮತ, ಪಕ್ಷ ಭೇದ ಮರೆತು ಸಹಕರಿಸಲಿದ್ದಾರೆ. ಸಂಬಂಧಪಟ್ಟ ಇಲಾಖೆಯವರು ಎಲ್ಲರನ್ನೂ ಒಳಗೊಂಡಂತೆ ಕ್ವಾರಂಟೈನ್‌ ಕೇಂದ್ರಗಳಲ್ಲಿ ಸುವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು ಎಂದರು.

ಎಎಸ್‌ಪಿ ಹರಿರಾಮ್‌ ಶಂಕರ್‌, ಎರಡು ಮೂರು ಕೇಂದ್ರಗಳಿಗೆ ಒಬ್ಬರಂತೆ ಪೊಲೀಸರನ್ನು ನಿಯೋಜಿಸಲಾಗಿದೆ. ಕುಂದಾಪುರ ವೃತ್ತದಲ್ಲಿ 1,027, ಬೈಂದೂರು ವೃತ್ತದಲ್ಲಿ 1,600 ಮಂದಿ ಕ್ವಾರಂಟೈನ್‌ ಕೇಂದ್ರಗಳಲ್ಲಿ ಇದ್ದಾರೆ. ಕುಂದಾಪುರ ವೃತ್ತದಲ್ಲಿ 27 ಕೇಂದ್ರಗಳಿಗೆ 23
ಹೆಡ್‌ಕಾನ್‌ ಸ್ಟೇಬಲ್‌, ಸಿಬಂದಿ, 11 ಹೋಮ್‌ ಗಾರ್ಡ್‌ ಗಳನ್ನು ನೇಮಿಸಲಾಗಿದೆ ಎಂದರು.

ತಹಶೀಲ್ದಾರ್‌ ತಿಪ್ಪೇಸ್ವಾಮಿ, ಕುಂದಾಪುರ ತಾಲೂಕಿನಲ್ಲಿ 540 ಮಂದಿ ಹೋಟೆಲ್‌ಗ‌ಳಲ್ಲಿ, 440 ಮಂದಿ ಸರಕಾರಿ ಕ್ವಾರಂಟೈನ್‌ ಕೇಂದ್ರಗಳಲ್ಲಿ, 9 ಹಾಸ್ಟೆಲ್‌ಗ‌ಳಲ್ಲಿ ಜನರನ್ನು ಉಳಿಸಿಕೊಳ್ಳಲಾಗಿದೆ. ವಿವಿಧ ದೇವಾಲಯಗಳ ಮೂಲಕ ಊಟ ನೀಡಲಾಗುತ್ತಿದೆ ಎಂದರು.

ಬ್ರಹ್ಮಾವರ ತಹಶೀಲ್ದಾರ್‌ ಕಿರಣ್‌ ಗೌರಯ್ಯ, ಕುಂದಾಪುರ ಇಒ ಕೇಶವ ಶೆಟ್ಟಿಗಾರ್‌, ಬೈಂದೂರು ಇಒ ಭಾರತಿ, ಉಡುಪಿ ಇಒ ಮೋಹನ್‌ಚಂದ್ರ, ಎಲ್ಲ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಕಾಂಗ್ರೆಸ್‌ ಅಧ್ಯಕ್ಷ ಹರಿಪ್ರಸಾದ್‌ ಶೆಟ್ಟಿ ಕಾನ್ಮಕ್ಕಿ, ಮಾಜಿ ಅಧ್ಯಕ್ಷ ಶಿವರಾಮ ಶೆಟ್ಟಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕಿರಣ್‌ ಕೊಡ್ಗಿ, ಮಂಡಲ ಅಧ್ಯಕ್ಷ ಶಂಕರ್‌ ಅಂಕದಕಟ್ಟೆ, ಮಾಜಿ ಅಧ್ಯಕ್ಷ ಸುರೇಶ್‌ ಶೆಟ್ಟಿ ಕಾಡೂರು, ಜಿ.ಪಂ. ಸದಸ್ಯೆ ಶ್ರೀಲತಾ ಸುರೇಶ್‌ ಶೆಟ್ಟಿ ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.