ಚೀನಾ ಸೇನೆ ದುಸ್ಸಾಹಸ ಹೆಚ್ಚಳವಾಗಿದ್ರೂ ಪ್ರಧಾನಿ ಮೋದಿ ಮೌನವೇಕೆ? ರಾಹುಲ್ ಗಾಂಧಿ
ಯುವಕನ ಕುಟುಂಬ ಸದಸ್ಯರ ಜತೆ ನಾವಿದ್ದೇವೆ, ಯಾವುದೇ ಕಾರಣಕ್ಕೂ ವಿಶ್ವಾಸ ಕಳೆದುಕೊಳ್ಳಬೇಡಿ
Team Udayavani, Jan 20, 2022, 12:55 PM IST
ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆ (ಪಿಎಲ್ ಎ) ಹದಿಹರೆಯದ ಯುವಕನನ್ನು ಅಪಹರಿಸಿರುವ ಘಟನೆ ಕುರಿತು ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅವರಿಗೆ ಕಾಳಜಿ ಇಲ್ಲ ಎಂಬುದಕ್ಕೆ ಅವರ ಮೌನವೇ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ:ಯುಪಿ: ಜನರ ಆಕ್ರೋಶಕ್ಕೆ ಬೆದರಿ ಪ್ರಚಾರದಿಂದ ಪಾಪಾಸ್ ತೆರಳಿದ ಬಿಜೆಪಿ ಶಾಸಕ
ಮಂಗಳವಾರ ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆ ಮಿರಾಮ್ ಟ್ಯಾರೋನ್ ಎಂಬ 17 ವರ್ಷದ ಹದಿಹರೆಯದ ಯುವಕನನ್ನು ಅಪಹರಿಸಿತ್ತು. ಅಪಹರಣಕ್ಕೊಳಪಟ್ಟ ಯುವಕನ ಕುಟುಂಬ ಸದಸ್ಯರ ಜತೆ ನಾವಿದ್ದೇವೆ, ಯಾವುದೇ ಕಾರಣಕ್ಕೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಮೋದಿ ಅವರ ಮೌನ ಹೇಡಿತನದ್ದಾಗಿದೆ. ಅವರು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ರಾಹುಲ್ ಟ್ವೀಟ್ ನಲ್ಲಿ ಆರೋಪಿಸಿದ್ದಾರೆ. ಇತ್ತೀಚೆಗೆ ಚೀನಾ ಭಾರತದ ಗಡಿಪ್ರದೇಶದಲ್ಲಿ ದುಸ್ಸಾಹಸಕ್ಕೆ ಕೈಹಾಕಿದೆ. ಆದರೆ ಬಿಜೆಪಿ ಸರ್ಕಾರ ಮೌನಕ್ಕೆ ಶರಣಾಗಿದೆ ಎಂದು ರಾಹುಲ್ ಟೀಕಿಸಿದ್ದಾರೆ.
ಪ್ರಧಾನಿಯವರೇ, ನಮ್ಮ ಪ್ರದೇಶದೊಳಕ್ಕೆ ನುಗ್ಗಲು ಚೀನಾ ಸೇನೆಗೆ ಅದೆಷ್ಟು ಧೈರ್ಯವಿದೆ? ನಮ್ಮ ಪ್ರಜೆಗಳನ್ನೇ ಅಪಹರಿಸಲು ಅವರಿಗೆ ಹೇಗೆ ಸಾಧ್ಯವಾಯಿತು? ನಿಮ್ಮದೇ ಪಕ್ಷದ ಸಂಸದರ ಮನವಿಯನ್ನೂ ಕೇಂದ್ರ ಸರ್ಕಾರ ಕೇಳಿಸಿಕೊಳ್ಳುತ್ತಿಲ್ಲ ಯಾಕೆ ಎಂದು ರಾಹುಲ್ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ