ಬರದ ನಾಡಲ್ಲಿ ಚಿನ್ನದ ಬೆಳೆ ತಂದ ಶ್ರೇಷ್ಠ ಕೃಷಿಕರು

ಕೃಷಿ ಸಾಧಕರಿಗೆ ಶ್ರೇಷ್ಠ ಕೃಷಿಕ ಪ್ರಶಸ್ತಿ ಪ್ರದಾನ

Team Udayavani, Dec 16, 2019, 4:45 PM IST

16-December-23

ರಾಯಚೂರು: ಕೃಷಿ ಎಂದರೆ ದೂರ ಸರಿಯುವ ಸನ್ನಿವೇಶದಲ್ಲೂ ಚಿನ್ನದ ಬೆಳೆ ಬೆಳಯುತ್ತಿರುವ ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಈ ಬಾರಿ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಿ ರಾಯಚೂರು ಕೃಷಿ ವಿವಿ ಪುರಸ್ಕರಿಸಿದೆ.

ಕಡಿಮೆ ನೀರಿನ ಲಭ್ಯತೆಯಲ್ಲೂ ಉತ್ತಮ ಇಳುವರಿ, ಬಹು ಬೆಳೆ ಪದ್ಧತಿ ಮೂಲಕ ನಿರಂತರ ಆದಾಯ, ಕೃಷಿಯಲ್ಲಿ ಸಾವಯವ ಗೊಬ್ಬರ ಬಳಕೆ, ಹೊಸ ಹೊಸ ಪ್ರಯೋಗಗಳಿಂದ ಯಶಸ್ಸು ಕಂಡ ರೈತರನ್ನು ಆರು ಜಿಲ್ಲೆಗಳ ಸಾಧಕ ಕೃಷಿಕರನ್ನು ಆಯ್ಕೆ ಮಾಡಲಾಗಿದೆ. ಕೃಷಿ ಮೇಳದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಗಿರೀಶ ಎಂ.ಆರ್‌.: ಬಳ್ಳಾರಿ ತಾಲೂಕಿನ ಸಿದ್ದಾಪುರ ಚಿಕ್ಕಜೋಗಿನಹಳ್ಳಿ ತಾಂಡಾದ ಗಿರೀಶ ಎಂ.ಆರ್‌., ಎಂಟೆಕ್‌ ಪದವಿ ಹೊಂದಿ ವಿದೇಶದಲ್ಲಿ ಕೆಲಸ ಮಾಡಿ ಬಂದಿದ್ದಾರೆ. ಈಗ ಕೃಷಿಯಲ್ಲಿ ಯಶಸ್ಸು ಕಂಡಿದ್ದಾರೆ. 30 ಎಕರೆ ಜಮೀನಿನಲ್ಲಿ ತೇಗ, ಸಿಲ್ವರ್‌, ವೋಕ, ಮಾವು ಸೇರಿದಂತೆ ಕೃಷಿ, ಅರಣ್ಯ ಬೆಳೆಗಳನ್ನು ಸಮಗ್ರವಾಗಿ ಬೆಳಯುವ ಮೂಲಕ ಯಶಸ್ಸು ಕಂಡಿದ್ದಾರೆ.

ಆರ್‌. ಪಂಪನಗೌಡ: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಗಜಗಿನಾಳದ ಆರ್‌.ಪಂಪನಗೌಡ, ಪಿಯುಸಿ ಓದಿರುವ ಅವರು
ವಿವಿಧ ತೋಟಗಾರಿಕೆ, ಕೃಷಿ, ಅರಣ್ಯ ಬೆಳೆಗಳನ್ನು ಬೆಳೆಯುವ ಮೂಲಕ ಯಶಸ್ಸು ಪಡೆದಿದ್ದಾರೆ. ಬೇವು, ಹೆಬ್ಬೇವು ಕೂಡ ಬೆಳೆಯುತ್ತಿದ್ದಾರೆ. ಹಂಗಾಮಿನಲ್ಲಿ ಹಗರಿ ನದಿಯಿಂದ ಎರಡು ಕಿ.ಮೀ. ನೀರು ಹರಿಸಿಕೊಂಡಿದ್ದಾರೆ. ಎರಡು ಎಕರೆ ಕೃಷಿ ಹೊಂಡ ನಿರ್ಮಿಸಿಕೊಂಡಿದ್ದಾರೆ.

ಅಂತೇಶ್ವರ ಚನ್ನಪ್ಪ ವರದ: ಬೀದರ ಜಿಲ್ಲೆಯ ಬಾಲ್ಕಿ ತಾಲೂಕಿನ ನೇಳಗಿಯ ಅಂತೇಶ್ವರ ಚನ್ನಪ್ಪ ವರದ, ಕೃಷಿ ಆದಾಯದಿಂದ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ವೈವಿಧ್ಯಮಯ ಬೆಳೆ ಬೆಳೆದು ಮಾದರಿಯಾಗಿದ್ದಾರೆ. ಶುಂಠಿ, ಕಬ್ಬು, ಸೋಯಾ, ತೊಗರಿ, ಹೆಸರು, ಉದ್ದು ಸೇರಿದಂತೆ ವಿವಿಧ ಬೆಳೆ ಬೆಳೆಯುತ್ತಿದ್ದಾರೆ. ಸಾವಯವ ಗೊಬ್ಬರಕ್ಕಾಗಿ ಹೈನುಗಾರಿಕೆ ಅಳವಡಿಸಿಕೊಂಡಿದ್ದಾರೆ.

ಶೀಲುಬಾಯಿ ಹೊಸಮನಿ: ಕಲಬುರಗಿ ಜಿಲ್ಲೆಯ ಮಾಲಗತ್ತಿ ಗ್ರಾಮದ ಶೀಲುಬಾಯಿ ವಿಠಲ್‌ ಹೊಸಮನಿ, ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಜೇನು ಸಾಕಣೆ ಹಾಗೂ ಕೋಳಿ ಸಾಕಣೆ ಮಾಡುತ್ತಿದ್ದಾರೆ. 8 ಎಕರೆ ಜಮೀನಿನಲ್ಲಿ ಅಣುಜೀವಿ ಗೊಬ್ಬರದ ಜತೆಗೆ, ಎರೆಹುಳು, ಹಸಿರೆಲೆ ಗೊಬ್ಬರ ಬಳಸಿ ಉತ್ತಮ ಇಳುವರಿ ಪಡೆಯುತ್ತಿದ್ದಾರೆ. ಅದರ ಜತೆಗೆ ಸೇವಂತಿ, ಸುಗಂಧರಾಜ, ಗುಲಾಬಿ, ಗಲಾಟೆ ಹೂ ಮತ್ತು ಚಂಡು ಹೂ ಬೆಳೆಯುವ ಮೂಲಕ ನಿರಂತರ ಆದಾಯ ಮಾಡಿಕೊಂಡಿದ್ದಾರೆ.

ವಾರ್ಷಿಕ ಸರಾಸರಿ 4.5 ಲಕ್ಷ ರೂ. ಆದಾಯ ಗಳಿಸುತ್ತಿದ್ದಾರೆ. ಸುರೇಶ ಚೌಡಕಿ: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಕುದರಿಮೋತಿಯ ಸುರೇಶ ಚೌಡಕಿ ಸಣ್ಣಪ್ಪ, 14 ಎಕರೆ ಜಮೀನಿನಲ್ಲಿ ಸಿರಿಧಾನ್ಯ, ತೋಟಗಾರಿಕೆ, ತರಕಾರಿ ಬೆಳೆ, ದ್ವಿದಳ ಧಾನ್ಯಗಳು, ಜೇನು ಸಾಕಣೆ, ಕುರಿ ಹಸು ಸಾಕಣೆ ಹಾಗೂ ಸಾವಯವ ಗೊಬ್ಬರ ಮತ್ತು ಕೀಟನಾಶಕ ಘಟಕ ಹೊಂದಿದ್ದಾರೆ. ಕಡಿಮೆ ಖರ್ಚಿನಲ್ಲಿ ಉತ್ತಮ ಬೆಳೆ ಇವರ ಸಾಧನೆಯಾಗಿದೆ.

ಅಮರೇಶ ಕೋಟೆ: ಮಾನ್ವಿ ತಾಲೂಕಿನ ಜಕ್ಕಲದಿನ್ನಿಯ ಅಮರೇಶ ಕೋಟೆ, 12 ಎಕರೆ ಜಮೀನಿನಲ್ಲಿ ಕೃಷಿ, ತೋಟಗಾರಿಕೆ, ಮೇವು, ಎರೆಹುಳು ಗೊಬ್ಬರ ಇತ್ಯಾದಿ ಕಸುಬುಗಳಲ್ಲಿ ವಿಶಿಷ್ಟ ಸಾಧನೆಗೈದು ಮಾದರಿ ಎನಿಸಿದ್ದಾರೆ.

ತೊಗರಿ ಹತ್ತಿ, ಜೋಳ, ಭತ್ತ, ಸಜ್ಜೆ, ಮೆಕ್ಕೆಜೋಳ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಕೃಷಿ ಸಲಕರಣೆಗಳನ್ನು ತಾವೇ ಆವಿಷ್ಕರಿಸಿ ಯಶಸ್ಸು ಕಂಡಿದ್ದಾರೆ. ರಸಗೊಬ್ಬರ ಬಿತ್ತುವ ಎಳಕುಂಟೆ ಕೈ ಚಾಲಿತ ಯಂತ್ರೋಪಕರಣ ಸೇರಿದಂತೆ ವಿವಿಧ ಯಂತ್ರಗಳು ಗಮನ ಸೆಳೆಯುತ್ತವೆ. ದೇವರಾಜ ರಾಠೊಡ: ಯಾದಗಿರಿ ಜಿಲ್ಲೆಯ ಧೋರನಹಳ್ಳಿ ತಾಂಡಾದ ದೇವರಾಜ ರಾಠೊಡ, ಸತತ ಬರದಲ್ಲೂ ಕೃಷಿ, ತೋಟಗಾರಿಕೆ ವಿವಿಧ ಬೆಳೆಗಳನ್ನು ಬೆಳೆದು ಮಾದರಿ ರೈತರೆನಿಸಿಕೊಂಡಿದ್ದಾರೆ. 35 ಎಕರೆ ಜಮೀನಿನಲ್ಲಿ 6 ಎಕರೆಯಲ್ಲಿ ರೆಡ್‌ ಲೇಡಿ ತಳಿಯ ಪಪ್ಪಾಯ, ದಾಳಿಂಬೆ, 20 ಗುಂಟೆ ಸುಗಂಧ ರಾಜ, ಮಲ್ಲಿಗೆ ಹೂ, ಗುಲಾಬಿ, ಚಂಡು ಹೂ, ಮೆಣಸಿನಕಾಯಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದು ಗಮನ ಸೆಳೆದಿದ್ದಾರೆ. ಇದರ ಜತೆಗೆ ಕೊರಲೆ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯುವ ಮೂಲಕ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.