ಅಲ್ಪ ಮಳೆಗೆ ಕಿತ್ತು ಬಂದ ಡಾಮರು!; ಹೊಂಡಗಳ ಸೃಷ್ಟಿ

ಹದಗೆಟ್ಟ ಕಟಪಾಡಿ-ಕೋಟೆ-ಮಟ್ಟು ಸಂಪರ್ಕ ರಸ್ತೆ

Team Udayavani, Jul 14, 2019, 5:27 AM IST

alpa-male

ಕಟಪಾಡಿ: ಕೋಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಟಪಾಡಿ-ಕೋಟೆ-ಮಟ್ಟು ಸಂಪರ್ಕದ ಪ್ರಮುಖ ಮೀನುಗಾರಿಕಾ ಇಲಾಖಾ ರಸ್ತೆಯ ಡಾಮರು ಕಿತ್ತು ಹೋಗಿದ್ದು, ಈ ಭಾಗದಲ್ಲಿ ವಾಹನ ಸಂಚಾರಕ್ಕೆ ಕಷ್ಟವಾಗಿದೆ. ಈ ಬಾರಿಯ ಅಲ್ಪ ಮಳೆಗೇ ರಸ್ತೆಗಳು ಹೊಂಡ ಬಿದ್ದಿವೆ. ಮೊದಲೇ ಅಗಲ ಕಿರಿದಾಗಿರುವ ರಸ್ತೆ ಇದಾಗಿರುವುದರಿಂದ ಹೊಂಡಗಳೂ ತುಂಬಿಕೊಂಡು, ಸಂಚಾರಕ್ಕೆ ಸಮಸ್ಯೆಯಾಗಿದೆ.

ಸಂಪರ್ಕ ರಸ್ತೆ
ಮೀನುಗಾರರು ಹೆಚ್ಚು ಅವಲಂಬಿತರಾಗಿರುವ ರಸ್ತೆ ಇದಾಗಿದ್ದು, ನಿತ್ಯ 7 ಬಸ್‌ಗಳು, ಮೀನುಗಾರಿಕೆ ವಾಹನಗಳು, ಖಾಸಗಿ ವಾಹನಗಳು, ರಿಕ್ಷಾ, ಟೆಂಪೋ ಇತ್ಯಾದಿಗಳು ಈ ಮಾರ್ಗವಾಗಿ ಸಂಚರಿಸುತ್ತವೆ. ರಸ್ತೆ ಹೊಂಡ ಬಿದ್ದಿರುವುದರಿಂದ ಪಾದಚಾರಿಗಳಿಗೆ ನಿತ್ಯ ಕೆಸರಿನ ಸಿಂಚನವಾಗುತ್ತದೆ. ದಟ್ಟನೆಯೂ ಇರುವುದರಿಂದ ಸಂಚಾರಕ್ಕೆ ತ್ರಾಸವಾಗಿದೆ.

ಈ ರಸ್ತೆಯು ಪಡುಭಾಗದಲ್ಲಿ ಕೈಪುಂಜಾಲು -ಮಟ್ಟು-ಕಟಪಾಡಿ, ಮಟ್ಟು-ಉದ್ಯಾವರ ಕೊಪ್ಲ -ಕ‌ಡೆತೋಟ-ಕನಕೋಡ-ಮಲ್ಪೆ ಸಂಪರ್ಕಕ್ಕೆ ರಿಂಗ್‌ ರಸ್ತೆಮಾದರಿಯಲ್ಲಿ ಪ್ರಮುಖ ಸಂಪರ್ಕ ರಸ್ತೆಯಾಗಿದೆ. ಈ ಭಾಗದ ಮಾತ್ರವಲ್ಲದೇ ಉದ್ಯಾವರ ಭಾಗದ ಜನರೂ ಇದನ್ನೇ ಪ್ರಮುಖ ಸಂಪರ್ಕ ರಸ್ತೆಯಾಗಿ ಬಳಸಿಕೊಳ್ಳುತ್ತಿದ್ದಾರೆ.

ಕಳಪೆ ಕಾಮಗಾರಿ?
ಕಳೆದ ಡಿಸೆಂಬರ್‌ನಲ್ಲಿ ಮೀನುಗಾರಿಕಾ ಕೊಂಡಿ ರಸ್ತೆ ದುರಸ್ತಿಯ ಯೋಜನೆಯಡಿ ಕಟಪಾಡಿ-ಕೋಟೆ-ಮಟ್ಟು ಸಂಪರ್ಕದ ಪ್ರಮುಖ ಮೀನುಗಾರಿಕೆ ಇಲಾಖೆ ರಸ್ತೆಯ ದುರಸ್ತಿ ಕೆಲಸ ಕಾರ್ಯವನ್ನು ಸುಮಾರು 10 ಲಕ್ಷ ರೂ. ಅನುದಾನವನ್ನು ಬಳಸಿಕೊಂಡು ನಡೆಸಲಾಗಿತ್ತು.
ಒಂದು ಮಳೆಗಾಲ ಎದುರಿಸುವ ಮೊದಲೇ ರಸ್ತೆ ಡಾಮರು ಕಿತ್ತು ಹೊಂಡ ಬಿದ್ದಿರುವುದು ಕಾಮಗಾರಿ ಕಳಪೆಯಾಗಿರುವ ಶಂಕೆ ಮೂಡಿಸಿದೆ.

ಕಾಂಕ್ರೀಟೀಕರಣಗೊಂಡು ದ್ವಿಪಥವಾಗಿ ವಿಸ್ತರೀಕರಣಗೊಂಡು ಇಕ್ಕೆಲಗಳಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ನಿರ್ಮಾಣಗೊಂಡಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ ಎಂಬ ಆಶಯ ಈ ಭಾಗದ ನಿತ್ಯ ಸಂಚಾರಿಗಳದ್ದು.

ಗಮನಕ್ಕೆ ತರಲಾಗಿದೆ
ಕಳೆದ ಸಾಲಿನಲ್ಲಿ ದುರಸ್ತಿಗೊಂಡಿರುವ ರಸ್ತೆಯು ಕೆಲವೆಡೆ ಕೆಟ್ಟಿರುವ ಬಗ್ಗೆ ಸಂಬಂಧಪಟ್ಟ ಎಂಜಿನಿಯರ್‌ ಮತ್ತು ಗುತ್ತಿಗೆದಾರರ ಗಮನಕ್ಕೆ ತರಲಾಗಿದೆ
-ಸುರೇಖಾ, ಪಿ.ಡಿ.ಒ. ಕೋಟೆ ಗ್ರಾ.ಪಂ.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.