ಜನರ ಕೈಗೆ ಅಧಿಕಾರ ನೀಡುವ ಉದ್ದೇ ಶದಿಂದ ಸ್ಪರ್ಧೆ

ರಾಜ್ಯದ 27 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಕಣಕ್ಕೆ „ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಹೇಳಿಕೆ

Team Udayavani, Apr 15, 2019, 12:08 PM IST

Udayavani Kannada Newspaper

ರಾಯಚೂರು: ಜನರಿಂದ ಆಯ್ಕೆಯಾಗುವ ನಾಯಕರು ಜನಸೇವೆ ಮಾಡಬೇಕೇ ವಿನಃ ರಾಜಾಡಳಿತ ಮಾಡಬಾರದು. ಇದೇ ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ಪ್ರಜಾಕೀಯ ಆರಂಭಿಸಿ ಲೋಕಸಭೆ ಚುನಾವಣೆ ಅಖಾಡಕ್ಕೆ ಇಳಿದಿದೆ ಎಂದು ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜಕೀಯ ವ್ಯವಸ್ಥೆ ಎನ್ನುವುದು ಜನರಿಗಾಗಿ ಇರುವಂಥದ್ದು. ಅವರಿಗೆ ಅಧಿಕಾರ ಸಿಗಬೇಕೆ ವಿನಃ ಬೇರೆ ಯಾರೋ ಅನುಭವಿಸುವುದಲ್ಲ. ಜನರ ಕೈಗೆ ಅಧಿ ಕಾರ ಕೊಡುವ ಉದ್ದೇಶದಿಂದಲೇ ನಾವು ಸ್ಪರ್ಧೆಗಿಳಿದಿದ್ದೇವೆ. ರಾಜ್ಯದ 27 ಕ್ಷೇತ್ರಗಳಲ್ಲಿ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಬಳ್ಳಾರಿಯಲ್ಲಿ ನಮಗೆ ಸೂಕ್ತ ಅಭ್ಯರ್ಥಿ ಸಿಗಲಿಲ್ಲ ಎನ್ನುವ ಕಾರಣಕ್ಕೆ ಸ್ಪರ್ಧೆ ಮಾಡಿಲ್ಲ. ರಾಯಚೂರು ಕ್ಷೇತ್ರದಿಂದ ವಕೀಲ ವೃತ್ತಿ ಅಭ್ಯಾಸ ಮಾಡುತ್ತಿರುವ ನಿರಂಜನ ನಾಯಕರನ್ನು ಕಣಕ್ಕಿಳಿಸಲಾಗಿದೆ. ಪ್ರತಿಯೊಬ್ಬ ಅಭ್ಯರ್ಥಿಯೂ ತನ್ನದೇ ವಿಶಿಷ್ಟ ಚಿಂತನೆಗಳನ್ನು ವಿವರಿಸಿದ್ದು, ನಮ್ಮ ಪಕ್ಷದ
ಸಿದ್ಧಾಂತಗಳಿಗೆ ಬದ್ಧರಾಗಿಯೇ ಪಕ್ಷ ಸೇರಿದ್ದಾರೆ ಎಂದು ವಿವರಿಸಿದರು.

ಪ್ರಣಾಳಿಕೆಗಳು ಕೇವಲ ಆಶ್ವಾಸನೆಗಳಾಗಬಾರದು. ಅವರು ನೀಡುವ ಭರವಸೆಗಳನ್ನು ನ್ಯಾಯಾಲಯದಿಂದ ಅಧಿಕೃತಗೊಳಿಸಬೇಕು. ಒಂದು ವೇಳೆ ಅವರು ಹೇಳಿದ ಬೇಡಿಕೆ ಈಡೇರಿಸದಿದ್ದಲ್ಲಿ ಅವರನ್ನು ಕೈಬಿಡುವ ವ್ಯವಸ್ಥೆ ಬರಬೇಕು. ಆ ದಿಸೆಯಲ್ಲಿ ಸಂವಿಧಾನದಲ್ಲಿ ಬದಲಾವಣೆ ಬರಬೇಕು ಎಂದರು.

ಬದಲಾವಣೆ ಎನ್ನುವುದು ಜನರ ಮನಸಿನಿಂದಲೇ ಬರಬೇಕು. ಪ್ರತಿ ವ್ಯಕ್ತಿಯ ಆಂತರ್ಯದಲ್ಲಿ ಕ್ರಾಂತಿ ಆದಾಗ ಮಾತ್ರ ವ್ಯವಸ್ಥೆಯನ್ನು ಬದಲಿಸಲು ಸಾಧ್ಯವಾಗಲಿದೆ. ಈಗ ನಡೆಯುತ್ತಿರುವ ಚುನಾವಣೆಗಳು ಪ್ರಜಾಪ್ರಭುತ್ವದ ಆಶಯದ ವಿರುದ್ಧ ದಿಕ್ಕಿನಲ್ಲಿವೆ. ಜನರಿಗಾಗಿ ದುಡಿಯಬೇಕಾದ ವ್ಯಕ್ತಿ ರಾಜನಂತೆ ಮೆರೆಯುತ್ತಿದ್ದಾರೆ. ಅದಕ್ಕೆ ಜನರೂ ಕಾರಣರಾಗಿದ್ದಾರೆ. ದೊಡ್ಡ ದೊಡ್ಡ ರೋಡ್‌
ಶೋಗಳು, ರ್ಯಾಲಿಗಳು, ಸಮಾವೇಶಗಳನ್ನು ನಡೆಸಿ ದುಂದು
ವೆಚ್ಚ ಮಾಡಿ ಚುನಾವಣೆ ನಡೆಸುವ ವ್ಯವಸ್ಥೆ ಬದಲಾಗಬೇಕು ಎಂದರು.

ನಾನು ಯಾವುದೇ ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಅವರನ್ನು ಬೆಂಬಲಿಸುವುದಿಲ್ಲ. ಜನಾಭಿಪ್ರಾಯ ಪಡೆದು ಅವರ ಬೇಡಿಕೆಗಳಿಗೆ ಸಮ್ಮತಿಸುವ ಪಕ್ಷಗಳ ಜತೆಯೇ ಕೈ ಜೋಡಿಸುತ್ತೇವೆ. ಇಲ್ಲಿ ಜನರೇ ಅಂತಿಮ. ಇದು ಅಪ್ಪಟ ಜನರ ಪಕ್ಷವಾಗಿದ್ದು, ಜನರ ಬೇಡಿಕೆಗಳ ಅನುಸಾರವಾಗಿಯೇ ಕೆಲಸ ಮಾಡಲಿದೆ ಎಂದರು. ಯಾವುದೇ ಕ್ಷೇತ್ರದಲ್ಲಿ ಗುರಿ ಮುಟ್ಟಬೇಕಾದರೆ ಯೋಗ್ಯತೆ ಬಹಳ ಮುಖ್ಯ. ಕುಟುಂಬ ರಾಜಕಾರಣ ಮಾಡಿದರೂ ಮಗನಿಗೆ ಯೋಗ್ಯತೆ ಇದ್ದರೆ ಜನ ಬೆಂಬಲಿಸುತ್ತಾರೆ.

ಇಲ್ಲವಾದರೆ ಸೋಲಿಸುತ್ತಾರೆ. ಎಲ್ಲರೂ ಭ್ರಷ್ಟರೇ ಎಂದು ಜರಿಯುವುದಕ್ಕಿಂತ ನಾನೊಬ್ಬನಾದರೂ ಪ್ರಾಮಾಣಿಕ ಎಂಬ ಭಾವನೆ ಬಂದಾಗಲೇ ಬದಲಾವಣೆ ಸಾಧ್ಯ. ಅದು ನನ್ನಿಂದಲೇ ಆರಂಭವಾಗಬೇಕು ಎಂದು ತಿಳಿಸಿದರು. ಪಕ್ಷದ ಅಭ್ಯರ್ಥಿ ನಿರಂಜನ ನಾಯಕ ಇದ್ದರು.

ಚುನಾವಣೆ ಎಂದರೆ ಯುದ್ಧ ಎನ್ನುವಂತೆ ಬಿಂಬಿಸಲಾಗಿದೆ. ಹಣವಂತರು, ಬಲಾಡ್ಯರು ಮಾತ್ರ ಇಲ್ಲಿ ಜಯಿಸಬಲ್ಲರು. ಸಾಮಾನ್ಯರಿಗೆ ಅದು ಅಸಾಧ್ಯ ಎನ್ನುವಂಥ ಸ್ಥಿತಿ ನಿರ್ಮಿಸಿದ್ದೇವೆ. ಆದರೆ, ಈ ವ್ಯವಸ್ಥೆಯಲ್ಲಿ ಸಾಮಾನ್ಯರು ಕೂಡ ಸ್ಪರ್ಧಿಸಬಹುದು ಎಂಬ ತತ್ವದಡಿ ನಾವು ಮುನ್ನಡೆದಿದ್ದೇವೆ.
ಉಪೇಂದ್ರ,
ನಟ ಹಾಗೂ ಉತ್ತಮ ಪ್ರಜಾಕೀಯ ಪಕ್ಷ ಸಂಸ್ಥಾಪಕ

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.