ನೌಕಾಪಡೆ ತಂಡಕ್ಕೆ ಮಂಗಳೂರಿನ ದಿಶಾ ಅಮೃತ್ ನೇತೃತ್ವ
ಗಣರಾಜ್ಯೋತ್ಸವ ಪರೇಡ್
Team Udayavani, Jan 21, 2023, 7:15 AM IST
ಮಂಗಳೂರು/ಹೊಸದಿಲ್ಲಿ, : ಭಾರತೀಯ ನೌಕಾಪಡೆಯ ಲೆಫ್ಟಿ ನೆಂಟ್ ಕಮಾಂಡರ್ ಮಂಗಳೂರಿನ ದಿಶಾ ಅಮೃತ್ ಅವರು ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಜ. 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸುವರು.
ಈ ತುಕಡಿಯಲ್ಲಿ ನೌಕಾ ಪಡೆಯ 144 ಯುವ ಯೋಧರು ಮತ್ತು “ನಾರಿಶಕ್ತಿ’ ಸ್ತಬ್ಧಚಿತ್ರ ಇರಲಿದೆ. ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ ಅಗ್ನಿವೀರರು ಭಾಗಿಯಾಗುವರು. ಅಮೃತಾ ಅವರ ಜತೆಗೆ ಸಬ್ ಲೆ| ವಲ್ಲಿ ಮೀನಾ ಎಸ್. ಸಹ ಇರುವರು.
ಮಂಗಳೂರು ಮೂಲದವರಾದ ದಿಶಾ ಅವರು, 2016ರಲ್ಲಿ ನೌಕಾ ಪಡೆ ಸೇರಿದ್ದರು. ತರಬೇತಿ ಮುಗಿದ ಬಳಿಕ 2017ರಲ್ಲಿ ಅಂಡಮಾನ್ ಮತ್ತು ನಿಕೋಬಾರ್ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ನಾನು ಡಾರ್ನಿಯರ್ ಏರ್ಕ್ರಾಫ್ಟ್ ಅನ್ನು ಚಲಾಯಿಸುತ್ತಿದ್ದೆ. ಕೆಲವು ಮಿಷನ್ಗಳಲ್ಲಿಯೂ ಭಾಗಿಯಾಗಿದ್ದೇನೆ ಎಂದು ದಿಶಾ ಅವರು ಹೇಳಿಕೊಂಡಿದ್ದಾರೆ.
ನಾನು ಚಿಕ್ಕವಳಿದ್ದಾಗಿನಿಂದಲೂ ಸೇನೆಗೆ ಸೇರಬೇಕು ಎಂದುಕೊಂಡಿದ್ದೆ. ಇದಕ್ಕೆ ನನ್ನ ಪೋಷಕರೇ ಸ್ಫೂರ್ತಿ. ನನ್ನ ತಂದೆ ಕೂಡ ಸೇನೆಯಲ್ಲಿ ಸೇವೆ ಸಲ್ಲಿಸಬೇಕು ಎಂದುಕೊಂಡಿದ್ದರು. ಆದರೆ ಕನಸು ಈಡೇರಿರಲಿಲ್ಲ. ಈಗ ನಾನು ನೌಕಾ ಪಡೆ ಸೇರಿರುವುದಕ್ಕೆ ಹೆಮ್ಮೆಯಾಗುತ್ತಿದೆ ಎಂದಿದ್ದಾರೆ ದಿಶಾ ಅಮೃತ್.
ನಾರಿ ಶಕ್ತಿ ಪ್ರದರ್ಶನ
ಪರೇಡ್ನಲ್ಲಿ ನೌಕಾಪಡೆಯ ಯುವ ನಾರಿಶಕ್ತಿ ಸ್ತಬ್ಧಚಿತ್ರ ಪ್ರದರ್ಶನ ಮಾಡಲಿದೆ. ಡಾರ್ನಿಯರ್ ಯುದ್ಧ ವಿಮಾನದ ಪ್ರತಿಕೃತಿಯೂ ಇರಲಿದ್ದು, ಮಹಿಳೆಯರ ಸಾಧನೆಯನ್ನು ಪ್ರದರ್ಶಿಸಲಾಗುವುದು. ಜತೆಗೆ 80 ಮಂದಿ ಸಂಗೀತಗಾರರು ಆ್ಯಂಥೋಣಿ ರಾಜ್ ನೇತೃತ್ವದಲ್ಲಿ, ನೌಕಾಪಡೆಯ ಗೀತೆ ಜೈ ಭಾರತಿಯನ್ನು ನುಡಿಸುವರು.
ದಿಶಾ ಅಮೃತ್ ಕರಾವಳಿಯ ಕುವರಿ
ದಿಶಾ ಅವರು ಮಂಗಳೂರಿನ ಬೋಳೂರು ಸಮೀಪದ ತಿಲಕ್ ನಗರದ ಅಮೃತ್ ಕುಮಾರ್ ಮತ್ತು ಲೀಲಾ ಅಮೃತ್ ದಂಪತಿಯ ಪುತ್ರಿ. ಅವರಿಗೆ ನೌಕಾ ಪಡೆಯ ಅಧಿಕಾರಿಯಾಗಬೇಕು ಎಂಬ ಆಸೆ ಬಾಲ್ಯದಲ್ಲೇ ಇತ್ತು. ದಿಶಾ ಅವರು ಪ್ರಾಥಮಿಕ ಶಿಕ್ಷಣದಿಂದ ಪಿಯುಸಿವರೆಗೆ ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಕಲಿತರು. ನೌಕಾಪಡೆ ಸೇರಬೇಕೆಂಬ ಹಂಬಲ ಈಡೇರಿಸಿಕೊಳ್ಳಲು ಹೈಸ್ಕೂಲ್ ನಲ್ಲಿದ್ದಾಗಲೇ ಎನ್ಸಿಸಿ ಗೆ ಸೇರಿದ್ದರು. ಆಗ ಕೆನರಾ ಕಾಲೇಜಿನಲ್ಲಿ ಎನ್ಸಿಸಿ ಇರಲಿಲ್ಲವಾದ ಕಾರಣ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿದ್ದರು. ಬಳಿಕ ಬೆಂಗಳೂರಿನ ಬಿಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಬಿಇ ಕಂಪ್ಯೂಟರ್ ಸೈನ್ಸ್ ಕಲಿಯುವಾಗಲೇ ನೌಕಾಪಡೆಯ ವಿವಿಧ ಅರ್ಹತಾ ಪರೀಕ್ಷೆಗಳನ್ನು ಎದುರಿಸಿದ್ದರು. ಕೆಲವು ಬಾರಿ ಇದರಲ್ಲಿ ವಿಫಲರಾದರೂ ಛಲ ಬಿಡದೇ ಭಾರತೀಯ ನೌಕಾಪಡೆಯ ವಿಶೇಷ ಅಧಿಕಾರಿಯಾಗಿ ನೇಮಕಗೊಂಡರು. ಸದ್ಯ ನೌಕಾಪಡೆಯಲ್ಲಿ ಅಂಡಮಾನ್ ನಿಕೋಬಾರ್ನಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ನಮ್ಮ ಆಸೆ ಮಗಳು ಈಡೇರಿಸಿದಳು
ದಿಶಾ ಅವರ ತಂದೆ ಅಮೃತ್ ಕುಮಾರ್ “ಉದಯವಾಣಿ’ಗೆ ಪ್ರತಿಕ್ರಿಯಿಸಿ, “ಮಗಳು ದಿಶಾ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ನೌಕಾ ಪಡೆಯ ತುಕಡಿ ಮುನ್ನಡೆಸಲು ಆಯ್ಕೆಯಾದದ್ದು ಸಂತಸ ತಂದಿದೆ. ನೌಕಾಪಡೆಯ ಬಗ್ಗೆ ನನಗೆ ಮತ್ತು ಪತ್ನಿಗೆ ವಿಶೇಷ ಆಸಕ್ತಿ ಇದೆ. ಆದರೆ ಆ ಕಾಲದಲ್ಲಿ ನಮಗೆ ಸಾಧ್ಯವಾಗಲಿಲ್ಲ. ಈಗ ನಮ್ಮ ಆಸೆಯನ್ನು ಮಗಳು ಈಡೇರಿಸಿದ್ದಾಳೆ ಎಂಬುದೇ ಸಂತಸದ ಸಂಗತಿ’ ಎಂದಿದ್ದಾರೆ.
2008ರಿಂದಲೂ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗಿಯಾಗಬೇಕು ಎಂಬ ಕನಸು ಹೊತ್ತಿದ್ದೆ. ಈಗ ಭಾರತೀಯ ನೌಕಾ ಪಡೆಯು ನನಗೆ ಆ ಅವಕಾಶ ಕಲ್ಪಿಸಿದೆ.
-ಲೆ|ಕ| ದಿಶಾ ಅಮೃತ್, ನೌಕಾಪಡೆ ಅಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ