ಸುಪ್ರೀಂ ಕೋರ್ಟ್‌ನಿಂದ ಭದ್ರತಾಲೋಪ ವಿಚಾರಣೆ ಸ್ವಾಗತಾರ್ಹ


Team Udayavani, Jan 12, 2022, 6:00 AM IST

ಸುಪ್ರೀಂ ಕೋರ್ಟ್‌ನಿಂದ ಭದ್ರತಾಲೋಪ ವಿಚಾರಣೆ ಸ್ವಾಗತಾರ್ಹ

ಇತ್ತೀಚೆಗಷ್ಟೇ ಪಂಜಾಬ್‌ ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಕಾರು 20 ನಿಮಿಷಗಳ ವರೆಗೆ ಹೆದ್ದಾರಿಯಲ್ಲಿ ನಿಂತು ಭಾರೀ ಭದ್ರತಾ ಲೋಪವಾಗಿತ್ತು. ಪಂಜಾಬ್‌ನ ಫಿರೋಜ್‌ಪುರಕ್ಕೆ ರಸ್ತೆ ಮಾರ್ಗದಲ್ಲಿ ಮೋದಿ ತೆರಳುತ್ತಿದ್ದು, ಈ ದಾರಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದರಿಂದ ಅವರು 20 ನಿಮಿಷ ಕಾದು, ಬಳಿಕ ವಾಪಸ್‌ ಹೋಗಿದ್ದರು. ಇದು ದೇಶ ಮಾತ್ರವಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲೂ ಭಾರೀ ಸುದ್ದಿಯಾಗಿತ್ತು.

ಪ್ರಧಾನಿ ಅವರ ಕಾರು ಪಾಕಿಸ್ಥಾನ ಗಡಿಯಿಂದ ಕೇವಲ 10 ಕಿ.ಮೀ. ದೂರದಲ್ಲಿ ನಿಂತಿತ್ತು ಎಂಬುದು ಗಮನಾರ್ಹ. ಅಂದರೆ ಇಂದಿನ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಕಾಲದಲ್ಲಿ 10 ಕಿ.ಮೀ. ದೂರದ ವರೆಗೆ ಶೂಟ್‌ ಮಾಡುವುದು ಅಸಾಧ್ಯವೇನಲ್ಲ. ಪರಿಸ್ಥಿತಿ ಹೀಗಿರುವಾಗ ಪ್ರಧಾನಿಯವರ ಭದ್ರತಾ ಲೋಪವಾಗಿದ್ದು, ಅತ್ಯಂತ ಗಂಭೀರವಾದ ವಿಷಯವೇ ಹೌದು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳೆರಡು ಪ್ರತ್ಯೇಕವಾದ ತನಿಖೆ ಶುರು ಮಾಡಿದ್ದವು. ಈ ಹಿಂದೆಯೇ ಸುಪ್ರೀಂ ಕೋರ್ಟ್‌ ಪ್ರತ್ಯೇಕವಾಗಿ ತನಿಖೆ ನಡೆಸಬೇಡಿ ಎಂದಿದ್ದರೂ, ತನಿಖಾ ಕಾರ್ಯ ಬಿಟ್ಟಿರಲಿಲ್ಲ. ಆದರೆ, ಸೋಮವಾರ ಮತ್ತೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ಎರಡೂ ಸರಕಾರಗಳಿಗೆ ತನಿಖೆ ನಿಲ್ಲಿಸಿ ಎಂದು ಖಡಕ್ಕಾಗಿಯೇ ಹೇಳಿದೆ. ಅಲ್ಲದೆ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ತನಿಖೆಗೂ ಆದೇಶಿಸಿದೆ.

ಸುಪ್ರೀಂ ಕೋರ್ಟ್‌ನ ಈ ನಿರ್ಧಾರ ಉತ್ತಮವಾದ ಕ್ರಮ. ಪ್ರಧಾನಿಯವರ ಭದ್ರತಾ ಲೋಪ ಯಾವುದೇ ಕಾರಣಕ್ಕೂ ಚುನಾವಣ ವಿಷಯವಾಗಬಾರದು, ರಾಜಕೀಯವಾಗಿಯೂ ಚರ್ಚೆಯಾಗಬಾರದು. ಪ್ರಧಾನಿ ಸ್ಥಾನದಲ್ಲಿ ಯಾರೇ ಕುಳಿತಿದ್ದರೂ ಅವರನ್ನು ಪಕ್ಷಕ್ಕಿಂತ ಹೆಚ್ಚಾಗಿಯೇ ನೋಡಬೇಕು. ಏಕೆಂದರೆ ಇದೊಂದು ದೇಶದ ಅತ್ಯಂತ ಸರ್ವೋಚ್ಚ ಹುದ್ದೆ. ಈ ಹುದ್ದೆಯಲ್ಲಿರುವವರಿಗೆ ಸೂಕ್ತ ಭದ್ರತೆ ನೀಡದಿರುವುದು ಅತ್ಯಂತ ಪ್ರಮಾದ ಎಂದು ಹೇಳುವುದಕ್ಕೆ ಯಾವುದೇ ಅಡ್ಡಿ ಇಲ್ಲ.

ಈ ಘಟನೆ ನಡೆದ ತರುವಾಯ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ದೊಡ್ಡ ವಾಕ್ಸಮರಗಳೇ ನಡೆದಿವೆ. ಪ್ರಧಾನಿ ಭದ್ರತೆ ವಿಚಾರದಲ್ಲಿ ಈ ಪ್ರಮಾಣದ ರಾಜಕೀಯ ಬೇಡವಾಗಿತ್ತು. ಅದು ಕಾಂಗ್ರೆಸ್‌ ಇರಲಿ, ಬಿಜೆಪಿಯೇ ಇರಲಿ, ಯಾರೂ ಈ ವಿಚಾರದ ಬಗ್ಗೆ ಅಷ್ಟು ಲಘುವಾಗಿ ತೆಗೆದುಕೊಳ್ಳಬಾರದು. ಜತೆಗೆ ಪ್ರಧಾನಿಗಳು ಕ್ಷೇಮವಾಗಿ ವಾಪಸ್‌ ಹೋಗಿದ್ದಾರೆ, ಹೀಗಾಗಿ ಅವರ ಜೀವಕ್ಕೆ ಇಲ್ಲಿ ಯಾವುದೇ ಬೆದರಿಕೆ ಇರಲಿಲ್ಲ ಎಂಬ ಪಂಜಾಬ್‌ ಸರಕಾರದ ಮಾತೂ ಒಪ್ಪುವಂಥದ್ದಲ್ಲ. ಈ ಎಲ್ಲ ಸಂಗತಿಗಳಲ್ಲಿ ಪ್ರಮುಖವಾಗಿ ನೋಡಬೇಕಾದದ್ದು, ಯಾವುದೇ ಅಪಾಯವಾಗದೇ ಇರಲಿ ಎಂಬುದನ್ನು ಮಾತ್ರ. ಅಪಾಯವಾಗಲಿಲ್ಲ ಎಂದಾಕ್ಷಣ ಅಲ್ಲಿ ಎಲ್ಲ ರೀತಿಯ ಭದ್ರತೆ ಇತ್ತು, ಅವರು ಸುರಕ್ಷಿತ ಸ್ಥಳದಲ್ಲಿದ್ದರು ಎಂದರ್ಥವಲ್ಲ. ಹೀಗಾಗಿ ರಾಜಕೀಯ ಮೀರಿ ಈ ಪ್ರಕರಣವನ್ನು ನೋಡಬೇಕಾದ ಅನಿವಾರ್ಯತೆ ಇದೆ.

ಈಗ ಸುಪ್ರೀಂ ಕೋರ್ಟ್‌ ಸಮಿತಿ ರಚನೆ ಮಾಡಿರುವುದರಿಂದ, ನಿಷ್ಪಕ್ಷಪಾತವಾಗಿ ತನಿಖೆ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ. ಅಲ್ಲದೆ ಅಂದಿನ ಘಟನೆಯಲ್ಲಿ ಪಂಜಾಬ್‌ ಪೊಲೀಸರ ಲೋಪ ಹೆಚ್ಚಾಗಿದೆಯೋ ಅಥವಾ ಪ್ರಧಾನಿಯವರ ಭದ್ರತೆ ನೋಡಿಕೊಳ್ಳುತ್ತಿರುವ ಎಸ್‌ಪಿಜಿ ತಪ್ಪು ಮಾಡಿದೆಯೋ ಎಂಬುದು ನಿಖರವಾಗಿ ತಿಳಿಯಲಿದೆ. ಅಲ್ಲದೆ ಇಲ್ಲಿ ಯಾರೇ ತಪ್ಪು ಮಾಡಿದ್ದರೂ, ಅವರಿಗೆ ಕಾನೂನಿನ ಪ್ರಕಾರ ತಕ್ಕ ಶಾಸ್ತಿಯಾಗಬೇಕು ಎಂಬುದು ಪ್ರಮುಖ ವಿಷಯ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.