ಹಿರಿಯ ಕಾಂಗ್ರೆಸ್ ನಾಯಕ ರಾಜೀವ್ ತ್ಯಾಗಿ ನಿಧನ
ಟಿವಿ ಚರ್ಚೆಯಲ್ಲಿ ಭಾಗವಹಿಸಿದ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ತ್ಯಾಗಿ
Team Udayavani, Aug 12, 2020, 11:53 PM IST
ಹೊಸದಿಲ್ಲಿ: ಹಿರಿಯ ಕಾಂಗ್ರೆಸ್ ನಾಯಕ ರಾಜೀವ್ ತ್ಯಾಗಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ರಾಜೀವ್ ತ್ಯಾಗಿ ಅವರು ಉತ್ತರಪ್ರದೇಶ ಕಾಂಗ್ರಸ್ ಘಟಕದ ಕಾರ್ಯದರ್ಶಿ ಹುದ್ದೆಯಲ್ಲಿದ್ದರು ಹಾಗೂ ವಕ್ತಾರರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.
ತ್ಯಾಗಿ ಅವರು ನಿಧನರಾಗುವುದಕ್ಕೆ ಕೆಲವೇ ತಾಸುಗಳ ಮೊದಲು ಟಿವಿ ಚರ್ಚೆಯೊಂದರಲ್ಲಿ ಭಾಗವಹಿಸಿದ್ದರು.
ಆ ಚರ್ಚೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಪಕ್ಷದ ವಕ್ತಾರ ಸಂಬಿತ್ ಪಾತ್ರ ಅವರು ರಾಜಿವ್ ತ್ಯಾಗಿ ಅವರ ಅಚಾನಕ್ ಅಗಲುವಿಕೆಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
‘ನನ್ನ ಗೆಳೆಯರಾಗಿದ್ದ ಕಾಂಗ್ರೆಸ್ ವಕ್ತಾರ ರಾಜೀವ್ ತ್ಯಾಗಿ ಅವರು ಇದೀಗ ನಮ್ಮೊಂದಿಗಿಲ್ಲ ಎಂಬುದನ್ನು ನನ್ನಿಂದ ನಂಬಲಾಗುತ್ತಿಲ್ಲ. ಆಜ್ ತಕ್ ಚಾನೆಲ್ ನಲ್ಲಿ ಇಂದು ಸಾಯಂಕಾಲ 5 ಗಂಟೆಗೆ ನಾವು ಚರ್ಚೆಯಲ್ಲಿ ಭಾಗವಹಿಸಿದ್ದೆವು. ಜೀವನ ನಿಜವಾಗಿಯೂ ಕ್ಷಣಿಕವಾದದ್ದು’ ಎಂದು ಸಂಬಿತ್ ಪಾತ್ರ ಅವರು ತಮ್ಮ ಟ್ವೀಟ್ ನಲ್ಲಿ ಖೇದ ವ್ಯಕ್ತಪಡಿಸಿದ್ದಾರೆ.
ರಾಜೀವ್ ತ್ಯಾಗಿ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ, ಎನ್.ಸಿ.ಪಿ. ನಾಯಕ ನವಾಬ್ ಮಲಿಕ್ ಸೇರಿದಂತೆ ಹಲವರು ಆಘಾತ ವ್ಯಕ್ತಪಡಿಸಿದ್ದಾರೆ.
भारतीय राष्ट्रीय कांग्रेस के प्रवक्ता श्री राजीव त्यागी जी की असामयिक मृत्यु मेरे लिए एक व्यक्तिगत दुःख है। हम सबके लिए अपूर्णीय क्षति है।
राजीव जी विचारधारा समर्पित योद्धा थे। समस्त यूपी कांग्रेस की ओर से परिजनों को हृदय से संवेदना।
ईश्वर उनके परिवार को दुख सहने की शक्ति दें। pic.twitter.com/GpdsAeKwxo
— Priyanka Gandhi Vadra (@priyankagandhi) August 12, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
MUST WATCH
ಹೊಸ ಸೇರ್ಪಡೆ
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು