ಬಿಸಿಲ ಬೇಗೆ : ತಂಪು ಪಾನೀಯಗಳ ದರವೂ ಜಾಸ್ತಿ


Team Udayavani, Apr 15, 2019, 6:30 AM IST

tampu-paniya

ಮಲ್ಪೆ: ಈ ವರ್ಷದ ಬೇಸಗೆ ಕಳೆದ ವರ್ಷಗಳಿಗಿಂತಲೂ ಅತಿಯಾಗಿದೆ. ರಣ ಬಿಸಿಲಿಗೆ ಬಸವಳಿದ ಜನ ತಂಪು ಪಾನೀಯಗಳಿಗೆ ಮೊರೆ ಹೋಗುತ್ತಿದ್ದಾರೆ. ಬೇಡಿಕೆ ಹೆಚ್ಚಾದಂತೆ ದರವೂ ಏರುತ್ತಿದ್ದು ಜನರ ಜೇಬಿಗೆ ತಂಪು ಪಾನೀಯದ ಬಿಸಿ ತಟ್ಟಿದೆ.

ಇವುಗಳಿಗೆಲ್ಲ ಭಾರಿ ಬೇಡಿಕೆ
ತಂಪು ಪಾನೀಯ ಮಾರಾಟ ಮಳಿಗೆಗಳಲ್ಲಿ ವ್ಯಾಪಾರ ಜೋರಾಗಿ ನಡೆಯುತ್ತಿದೆ. ಕಲ್ಲಂಗಡಿ, ಎಳನೀರು, ಮಜ್ಜಿಗೆ, ಲಸ್ಸಿ, ಕಬ್ಬಿನಹಾಲು, ಫ್ರೆಶ್‌ ಲೆಮನ್‌, ಜೀರಾಸೋಡ ಮೊದಲಾದ ಪಾನೀಯಗಳು ಮತ್ತು ಬ್ರಾಂಡೆಡ್‌ ಕಂಪೆನಿಗಳ ಐಸ್‌ಕೀÅಮ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ.

ಬ್ರಾಂಡೆಡ್‌ ಐಸ್‌ಕ್ರೀಂ ಕಂಪೆನಿಗಳು ಈಗಾಗಲೇ ತಮ್ಮ ಉತ್ಸನ್ನಗಳಿಗೆ ಶೇ.20ರಷ್ಟು ದರ ಹೆಚ್ಚಿಸಿದೆ. ಕುಡಿಯುವ ಶುದ್ಧ ನೀರನ್ನು ಅರಸುತ್ತಿರುವ ಜನತೆ ಬಾಟಲಿ ನೀರಿಗೆ ಮೊರೆಹೋಗುತ್ತಿದ್ದಾರೆ. ಹಾಗಾಗಿ ಬಾಟಲಿ ನೀರು ಕೂಡ ಹೆಚಾRಗಿ ಮಾರಾಟವಾಗುತ್ತಿದೆ.

ಬೀದಿ ಬದಿ ವ್ಯಾಪಾರ ಜೋರು
ಹಣ್ಣು, ಜ್ಯೂಸ್‌ ವ್ಯಾಪಾರದ ಬಂಡಿಗಳು ನಗರದ ಪ್ರಮುಖ ಬೀದಿಗಳಲ್ಲಿ , ಮರಗಳ ಅಡಿಯಲ್ಲಿ ಕಾಣುತ್ತಿದೆ. ತಳ್ಳುಗಾಡಿಗಳಲ್ಲಿ ಎಳನೀರು, ಹಣ್ಣುಗಳನ್ನು ಇಟ್ಟುಕೊಂಡು ಬೀದಿ ಸುತ್ತಿ ಮಾರಾಟ ಮಾಡುವವರು ಅಲ್ಲಲ್ಲಿ ಹುಟ್ಟಿಕೊಂಡಿದ್ದಾರೆ. ತಳ್ಳುಗಾಡಿಯಲ್ಲಿ ಕಬ್ಬು ಅರೆಯುವ ಸಣ್ಣ ಯಂತ್ರವನ್ನು ಇಟ್ಟುಕೊಂಡು ಬೀದಿಬದಿಯಲ್ಲಿ ಕಬ್ಬಿನ ಹಾಲು ಮಾರಾಟವೂ ಹೆಚ್ಚಿದೆ. ಬಿಸಿಲಿನ ತಾಪ ಹೆಚ್ಚಾದಂತೆ ಹಣ್ಣು, ಜ್ಯೂಸ್‌, ಎಳನೀರು ಮಾರುವವರಿಗೆ ಇದೀಗ ವ್ಯಾಪಾರದ ಸುಗ್ಗಿಯೇ ಸುಗ್ಗಿ.

ಎಳನೀರಿಗೆ ಭಾರೀ ಡಿಮ್ಯಾಂಡ್‌
ಮಾರುಕಟ್ಟೆಯಲ್ಲಿ ಕೂಡ ಎಳನೀರು ಕಾಣಸಿಗುವುದು ಆಪರೂಪ. ಕರಾವಳಿಯಲ್ಲಿ ಎಳನೀರಿಗೆ ಭಾರಿ ಬೇಡಿಕೆಯಿದ್ದು, 35ರಿಂದ 40 ರೂಪಾಯಿಗೆ ಎಳನೀರು ಮಾರಾಟವಾಗುತ್ತಿದೆ. ದರ ಏರಿಕೆಯಿಂದ ಎಳನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಬಿಸಿಲಿನ ಧಗೆಯಿಂದಾಗಿ ಬೇಡಿಕೆಯೂ ಹೆಚ್ಚಿದೆ. ಆದರೂ ಗ್ರಾಹಕರು ಬಿಸಿಲಿನ ದಾಹವನ್ನು ತಣಿಸಲು ಎಳನೀರು ಕುಡಿಯಲು ಮುಂದಾಗಿದ್ದಾರೆ.

ತೆಂಗಿನಕಾಯಿ ದರ ಏರಿಕೆಯಾಗಿರುವ ಕಾರಣ ಎಳನೀರಿಗೆ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಿದೆ.

ತಾಳೆಬೊಂಡಕ್ಕೂ ಡಿಮ್ಯಾಂಡ್‌
ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ಶುದ್ದ ಆಹಾರ ಮತ್ತು ಕಲಬೆರಕೆ ಇಲ್ಲದ ಕೆಲವೇ ಕೆಲವು ಆಹಾರದ‌ಲ್ಲಿ ನಿಸರ್ಗದತ್ತವಾಗಿ ಕೆಲವೊಂದು ಭಾಗಗಳಲ್ಲಿ ಮಾತ್ರ ಸಿಗುವ ತಾಳೆಬೊಂಡಕ್ಕೆ ಮಾತ್ರ ಬೇಡಿಕೆ ಇನ್ನೂ ಕಡಿಮೆಯಾಗಿಲ್ಲ. ರಸ್ತೆಯಲ್ಲಿ ಹಾದು ಹೋಗುವ ಸ್ಥಳೀಯರು ಹಾಗೂ ಪ್ರವಾಸಿಗರೂ ತಾಳೆಬೊಂಡದ ರಾಶಿ ಕಂಡು ವಾಹನವನ್ನು ನಿಲ್ಲಿಸಿ ಖರೀದಿಸುವ ದೃಶ್ಯ ಎಲ್ಲೆಡೆ ಕಂಡು ಬರುತ್ತಿದೆ. ಮೂರು ಕಣ್ಣುಗಳಿರುವ ಒಂದು ತಾಳೆಬೊಂಡ 20ರಿಂದ 25 ರೂ. ಗೆ ಮಾರಾಟವಾಗುತ್ತಿವೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.