ಸ್ವಿಸ್‌ ಬ್ಯಾಡ್ಮಿಂಟನ್‌: ಸಿಂಧು ಆಘಾತಕಾರಿ ನಿರ್ಗಮನ

ಪುರುಷರ ಡಬಲ್ಸ್‌: ಚಿರಾಗ್‌ ಶೆಟ್ಟಿ-ಸಾತ್ವಿಕ್‌ ರೆಡ್ಡಿ ಕ್ವಾರ್ಟರ್‌ ಫೈನಲ್‌ಗೆ

Team Udayavani, Mar 25, 2023, 6:57 AM IST

pv sindhu

ಬಾಸೆಲ್‌ (ಸ್ವಿಜರ್ಲೆಂಡ್‌): ಪಿ.ವಿ.ಸಿಂಧು ಅವರ ಸೋಲಿನ ಅಭಿಯಾನ ಸ್ವಿಸ್‌ ಓಪನ್‌ ಸೂಪರ್‌ 300 ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲೂ ಮುಂದುವರಿದಿದೆ. ಹಾಲಿ ಚಾಂಪಿಯನ್‌ ಆಗಿರುವ ಅವರಿಲ್ಲಿ ದ್ವಿತೀಯ ಸುತ್ತಿನಲ್ಲೇ ಎಡವಿದ್ದಾರೆ. ಆದರೆ ಪುರುಷರ ಡಬಲ್ಸ್‌ನಲ್ಲಿ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಶ್ವದ 9ನೇ ರ್‍ಯಾಂಕಿಂಗ್‌ ಆಟಗಾರ್ತಿಯಾಗಿರುವ ಪಿ.ವಿ.ಸಿಂಧು, ಇಂಡೋನೇಷ್ಯಾದ ಶ್ರೇಯಾಂಕರಹಿತ ಶಟ್ಲರ್‌ ಪುತ್ರಿ ಕುಸುಮಾ ವರ್ದನಿ ಎದುರು 15-21, 21-12, 18-21 ಅಂತರದ ಆಘಾತಕಾರಿ ಸೋಲುಂಡರು. 38ನೇ ರ್‍ಯಾಂಕಿಂಗ್‌ನ ಕುಸುಮಾ ವರ್ದನಿ ಮತ್ತು ಪಿ.ವಿ.ಸಿಂಧು ನಡುವೆ ನಡೆದ ಮೊದಲ ಅಂತಾರಾಷ್ಟ್ರೀಯ ಮುಖಾಮುಖೀ ಇದಾಗಿತ್ತು.

ಪುರುಷರ ಡಬಲ್ಸ್‌ನಲ್ಲಿ ದ್ವಿತೀಯ ಶ್ರೇಯಾಂಕದ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಭಾರೀ ಹೋರಾಟ ನಡೆಸಿ ತೈವಾನ್‌ನ ಫಾಂಗ್‌ ಚಿ ಲೀ-ಫಾಂಗ್‌ ಜೆನ್‌ ಲೀ ಅವರನ್ನು 12-21, 21-17, 28-26 ಅಂತರದಿಂದ ಮಣಿಸುವಲ್ಲಿ ಯಶಸ್ವಿಯಾದರು. ವಿಶ್ವದ 6ನೇ ರ್‍ಯಾಂಕಿಂಗ್‌ನ ಭಾರತೀಯ ಜೋಡಿಯಿನ್ನು ಡೆನ್ಮಾರ್ಕ್‌ನ ಜೆಪ್‌ ಬೇ-ಲಾಸ್ಸೆ ಮಲ್ಹೆದ್‌ ಅವರನ್ನು ಎದುರಿಸಲಿದೆ.

ಪ್ರಣಯ್‌, ಶ್ರೀಕಾಂತ್‌ಗೆ ಸೋಲು: ಸಿಂಧುಗಿಂತ ಮೊದಲು ವಿಶ್ವದ 9ನೇ ರ್‍ಯಾಂಕಿಂಗ್‌ ಹಾಗೂ 5ನೇ ಶ್ರೇಯಾಂಕದ ಭಾರತೀಯ ಆಟಗಾರ ಎಚ್‌.ಎಸ್‌.ಪ್ರಣಯ್‌ ಕೂಡ ದ್ವಿತೀಯಸುತ್ತಿನ ಆಘಾತಕ್ಕೆ ಸಿಲುಕಿದ್ದರು. ಅವರು ಫ್ರಾನ್ಸ್‌ನ ಶ್ರೇಯಾಂಕರಹಿತ ಆಟಗಾರ ಕ್ರಿಸ್ಟೊ ಪೊಪೋವ್‌ ವಿರುದ್ಧ 8-21, 8-21 ಅಂತರದಿಂದ ಮುಗ್ಗರಿಸಿದ್ದರು. ಹಾಗೆಯೇ ಕೆ.ಶ್ರೀಕಾಂತ್‌ ಕೂಡ ಹಾಂಕಾಂಗ್‌ನ ಚುಕ್‌ ವ್ಯೂ ಲೀ ವಿರುದ್ಧ 20-22, 21-17 ಅಂತರದಿಂದ, ರಾಷ್ಟ್ರೀಯ ಚಾಂಪಿಯನ್‌ ಮಿಥುನ್‌ ಮಂಜುನಾಥ್‌ ಚೀನಾ ತೈಪೆಯ ಚಿಯ ಹಾವೊ ಲೀ ವಿರುದ್ಧ 19-21, 10-21 ಅಂತರದಿಂದ ಎಡವಿದ್ದರು.

ಟಾಪ್ ನ್ಯೂಸ್

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwew

IPL; ಚೆನ್ನೈ ವಿರುದ್ಧ ಅಬ್ಬರ; ಗುಜರಾತ್ ಪ್ಲೇ ಆಫ್ ಆಸೆ ಜೇವಂತ

1–wwqaeeq

Mangaluru; ಮಂಗಳಾ ಕಪ್‌ ಓಪನ್‌ ಬ್ಯಾಡ್ಮಿಂಟನ್‌ ಕೂಟಕ್ಕೆ ಚಾಲನೆ

1-weewewq

Punjab ಅಭಿಮಾನಿಗಳ ಕ್ಷಮೆ ಕೋರಿದ ನಾಯಕ ಸ್ಯಾಮ್‌ ಕರನ್‌

1-wqeqewqewq

Tennis; ಇದೇ ಕೊನೆಯ ಸೀಸನ್‌:ಡೊಮಿನಿಕ್‌ ಥೀಮ್‌

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

1-wqeqwew

IPL; ಚೆನ್ನೈ ವಿರುದ್ಧ ಅಬ್ಬರ; ಗುಜರಾತ್ ಪ್ಲೇ ಆಫ್ ಆಸೆ ಜೇವಂತ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

1–wwqaeeq

Mangaluru; ಮಂಗಳಾ ಕಪ್‌ ಓಪನ್‌ ಬ್ಯಾಡ್ಮಿಂಟನ್‌ ಕೂಟಕ್ಕೆ ಚಾಲನೆ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.