ಎಲ್ಲ ತರಗತಿಗಳ ಶೇ.30ರಷ್ಟು ಪಠ್ಯಕ್ರಮ ಕಡಿತ!: ಈ ತಿಂಗಳ ಅಂತ್ಯಕ್ಕೆ ಆದೇಶ ಸಾಧ್ಯತೆ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕುಂದಾಗದಂತೆ ಇಳಿಕೆ

Team Udayavani, Jul 16, 2020, 7:05 AM IST

ಎಲ್ಲ ತರಗತಿಗಳ ಶೇ.30ರಷ್ಟು ಪಠ್ಯಕ್ರಮ ಕಡಿತ!: ಈ ತಿಂಗಳ ಅಂತ್ಯಕ್ಕೆ ಆದೇಶ ಸಾಧ್ಯತೆ

ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಈ ಶೈಕ್ಷಣಿಕ ವರ್ಷದ ಒಂದರಿಂದ ಹತ್ತನೇ ತರಗತಿಯವರೆಗೆ ಅನ್ವಯವಾಗುವಂತೆ ಪಠ್ಯವನ್ನು ಶೇ.30ರಷ್ಟು ಕಡಿತಗೊಳಿಸುವ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಈ ತಿಂಗಳ ಅಂತ್ಯದೊಳಗೆ ಆದೇಶ ಹೊರಬೀಳುವ ಸಾಧ್ಯತೆಯಿದೆ.

ಶೈಕ್ಷಣಿಕ ವರ್ಷದ ಆರಂಭದ ಬಗ್ಗೆ ಆ.15ರ ಅನಂತರ ಕೇಂದ್ರದ ಮಾರ್ಗಸೂಚಿಯನ್ವಯ ರಾಜ್ಯ ಸರಕಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಈ ವರ್ಷ ಪೂರ್ಣ ಪಠ್ಯ ಬೋಧನೆ ಅಸಾಧ್ಯವಿರುವುದರಿಂದ ಶೇ.30ರಷ್ಟು ಕಡಿತಗೊಳಿಸಲು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ)ಗೆ ಸೂಚನೆ ನೀಡಲಾಗಿತ್ತು.

ಡಿಎಸ್‌ಇಆರ್‌ಟಿ ತನ್ನ ವಿಷಯ ತಜ್ಞರ ಸಮಿತಿಯ ಮೂಲಕ ಪಠ್ಯ ಕಡಿತ ಬಹುತೇಕ ಪೂರ್ಣಗೊಳಿಸಿ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸಲ್ಲಿಸಲಿದೆ.

ಅಲ್ಲಿಂದ ಈ ತಿಂಗಳ ಅಂತ್ಯದೊಳಗೆ ಪೂರ್ಣ ವರದಿ ಸರಕಾರಕ್ಕೆ ಸಲ್ಲಿಕೆಯಾಗಲಿದೆ. ಸರಕಾರದ ಒಪ್ಪಿಗೆ ಪಡೆದು, ಶಾಲೆಗಳಿಗೆ ಕಡಿತವಾದ ಪಠ್ಯದ ಮಾಹಿತಿಯನ್ನು ರವಾನಿಸಲಾಗುತ್ತದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಪಠ್ಯ ಕಡಿತ ಹೇಗೆ?
ಒಂದರಿಂದ 10ನೇ ತರಗತಿವರೆಗೆ ಪಠ್ಯದಲ್ಲಿ ಕಡಿತ ಮಾಡಲಾಗುತ್ತದೆ. ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್‌ (ಎನ್‌ಸಿಇಆರ್‌ಟಿ) ಪಠ್ಯ ಕ್ರಮದ ಕೆಲವು ವಿಷಯಗಳಿಗೆ ಸಂಬಂಧಿಸಿ ಎನ್‌ಸಿಇಆರ್‌ಟಿ ಸೂಚನೆ ಅನುಸರಿಸಲಾಗುತ್ತದೆ. ರಾಜ್ಯ ಪಠ್ಯಕ್ರಮದ ವಿಷಯಗಳ ಪಠ್ಯ ಕಡಿತವನ್ನು ಡಿಎಸ್‌ಇಆರ್‌ಟಿ ಮಾಡಲಿದೆ.

ವ್ಯಾಕರಣ, ಅಕ್ಷರಮಾಲೆ ಮತ್ತು ಶಿಕ್ಷಣದ ಮೂಲ ತತ್ವಗಳು ಹಾಗೂ ಕಲಿಸಲೇಬೇಕಾದ ಅಗತ್ಯ ವಿಷಯಗಳನ್ನು ಹೊರತುಪಡಿಸಿ, ಉಳಿದ ಅಂಶಗಳನ್ನು ಕ್ರೋಡೀಕರಿಸಿ, ಉಳಿಸಿಕೊಳ್ಳಲೇಬೇಕಾದವು ಮತ್ತು ತೆಗೆಯಬಹುದಾದುವನ್ನು ವಿಂಗಡಿಸಿ, ಒಂದು ವರ್ಷ ಬೋಧನೆ ಮಾಡದಿದ್ದರೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕುಂದಾಗದ ಅಂಶಗಳನ್ನು ಮಾತ್ರ ತೆಗೆಯಲಾಗುತ್ತದೆ ಎಂದು ಡಿಎಸ್‌ಇಆರ್‌ಟಿ ಅಧಿಕಾರಿಯೊಬ್ಬರು ವಿವರ ನೀಡಿದರು. ಪಠ್ಯ ಕಡಿತ ಪೂರ್ಣವಾಗಿದೆ. ಕಡಿತ ಮತ್ತು ಉಳಿಸಿದ ಪಠ್ಯದ ಸಮಗ್ರ ಮಾಹಿತಿಯನ್ನು ಸರಕಾರ ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.

ಪುಸ್ತಕದಲ್ಲಿ ಬದಲಾವಣೆಯಿಲ್ಲ
2020-21ನೇ ಸಾಲಿಗೆ ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕ ಮುದ್ರಣ ಮತ್ತು ಸರಬರಾಜು ಬಹುತೇಕ ಪೂರ್ಣಗೊಂಡಿದೆ. ಹೀಗಾಗಿ ಪ್ರತ್ಯೇಕ ಪುಸ್ತಕ ಇರುವುದಿಲ್ಲ. ಯಾವುದೆಲ್ಲ ಕಡಿತವಾಗಿದೆ, ಯಾವುದನ್ನೆಲ್ಲ ಬೋಧಿಸಬೇಕಿಲ್ಲ ಎಂಬ ಆದೇಶ ನೀಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌ ಖಚಿತಪಡಿಸಿದ್ದಾರೆ.

ಶೈಕ್ಷಣಿಕ ವರ್ಷ ಆರಂಭ ಯಾವಾಗ ಎಂಬುದು ಸ್ಪಷ್ಟವಾಗಿಲ್ಲ. ಆದರೂ ಶೇ.30ರಷ್ಟು ಪಠ್ಯ ಕಡಿತಕ್ಕೆ ಡಿಎಸ್‌ಇಆರ್‌ಟಿಗೆ ಸೂಚನೆ ನೀಡಿದ್ದೇವೆ. ಅಲ್ಲಿನ ತಜ್ಞರ ಸಮಿತಿಯು ಪಠ್ಯ ಕಡಿತ ಮಾಡಿ ವರದಿ ಸಲ್ಲಿಸಲಿದೆ. ಸರಕಾರ ವರದಿ ಪರಿಶೀಲಿಸಿ ಮುಂದಿನ ಆದೇಶ ನೀಡಲಿದೆ.
– ಎಸ್‌. ಸುರೇಶ್‌ ಕುಮಾರ್‌, ಶಿಕ್ಷಣ ಸಚಿವ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.