ಟಿ20 ವಿಶ್ವಕಪ್‌: ಆಂಗ್ಲರೆದುರು ಲಾಗ ಹಾಕಿದ ಬಾಂಗ್ಲಾ

ಗುಂಪು 1ರ ಅಗ್ರಸ್ಥಾನದಲ್ಲಿ ಇಂಗ್ಲೆಂಡ್‌ ಇನ್ನಷ್ಟು ಗಟ್ಟಿ

Team Udayavani, Oct 27, 2021, 9:15 PM IST

ಟಿ20 ವಿಶ್ವಕಪ್‌: ಆಂಗ್ಲರೆದುರು ಲಾಗ ಹಾಕಿದ ಬಾಂಗ್ಲಾ

ಅಬುಧಾಬಿ: ಶಿಸ್ತುಬದ್ಧ ಆಟದ ಮೂಲಕ ಬಾಂಗ್ಲಾದೇಶಕ್ಕೆ 8 ವಿಕೆಟ್‌ಗಳಿಂದ ಹೊಡೆತವಿಕ್ಕಿದ ಇಂಗ್ಲೆಂಡ್‌, ಟಿ20 ವಿಶ್ವಕಪ್‌ ಸೂಪರ್‌-12 ಹಂತದಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಸತತ ಎರಡು ಸೋಲನುಭವಿಸಿದ ಬಾಂಗ್ಲಾದ ಮುಂದಿನ ಹಾದಿ ಕಠಿಣಗೊಂಡಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಬಾಂಗ್ಲಾದೇಶಕ್ಕೆ ಗಳಿಸಲು ಸಾಧ್ಯವಾದದ್ದು 20 ಓವರ್‌ಗಳಲ್ಲಿ 9ಕ್ಕೆ 124 ರನ್‌ ಮಾತ್ರ. ಇಂಗ್ಲೆಂಡ್‌ ಕೇವಲ 14.1 ಓವರ್‌ಗಳಲ್ಲಿ 2 ವಿಕೆಟಿಗೆ 126 ರನ್‌ ಹೊಡೆದು ಸಂಭ್ರಮಿಸಿತು. ಮೊದಲ ಪಂದ್ಯದಲ್ಲಿ ಮಾರ್ಗನ್‌ ಪಡೆ ವೆಸ್ಟ್‌ ಇಂಡೀಸನ್ನು 55 ರನ್ನಿಗೆ ಉರುಳಿಸಿ ಮೆರೆದಿತ್ತು. ಇನ್ನೊಂದೆಡೆ ಬಾಂಗ್ಲಾದೇಶ ಲಂಕೆಗೆ ಶರಣಾಗಿತ್ತು.

ಸಾಮಾನ್ಯ ಮೊತ್ತದ ಚೇಸಿಂಗ್‌ ವೇಳೆ ಜೇಸನ್‌ ರಾಯ್‌ ಸಿಡಿದು ನಿಂತರು. 38 ಎಸೆತಗಳಿಂದ 61 ರನ್‌ ಬಾರಿಸಿದರು. ಈ ಪಂದ್ಯಶ್ರೇಷ್ಠ ಆಟದಲ್ಲಿ 5 ಬೌಂಡರಿ, 3 ಸಿಕ್ಸರ್‌ ಒಳಗೊಂಡಿತ್ತು. ಜೋಸ್‌ ಬಟ್ಲರ್‌ 18 ರನ್‌ ಮಾಡಿದರೆ, ಡೇವಿಡ್‌ ಮಾಲನ್‌ 28 ರನ್‌ ಬಾರಿಸಿ ಅಜೇಯರಾಗಿ ಉಳಿದರು. ಈ ಜಯದೊಂದಿಗೆ ಇಂಗ್ಲೆಂಡ್‌ 4 ಅಂಕ ಹಾಗೂ +3.614 ರನ್‌ರೇಟ್‌ನೊಂದಿಗೆ ಗುಂಪಿನ ಅಗ್ರಸ್ಥಾನವನ್ನು ಇನ್ನಷ್ಟು ಗಟ್ಟಿಗೊಳಿಸಿತು.

ಬಾಂಗ್ಲಾದೇಶಕ್ಕೆ ಬ್ರೇಕ್‌: ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಬಾಂಗ್ಲಾದೇಶ ಸವಾಲಿನ ಮೊತ್ತ ಪೇರಿಸುವ ಯೋಜನೆಯಲ್ಲಿ ಸಂಪೂರ್ಣ ವಿಫ‌ಲವಾಯಿತು. ಆಂಗ್ಲರ ಘಾತಕ ಬೌಲಿಂಗ್‌ ದಾಳಿಗೆ ಸಿಲುಕಿ ರನ್ನಿಗಾಗಿ ಪರದಾಡಿತು. ಅಗ್ರ ಕ್ರಮಾಂಕದ ಮೂವರಿಂದ ಒಟ್ಟುಗೂಡಿದ್ದು ಬರೀ 18 ರನ್‌. ಆರಂಭಿಕರಾದ ಲಿಟನ್‌ ದಾಸ್‌ (9) ಮತ್ತು ಮೊಹಮ್ಮದ್‌ ನೈಮ್‌ (5) ಅವರನ್ನು ಸತತ ಎಸೆತಗಳಲ್ಲಿ ಕೆಡವಿದ ಮೊಯಿನ್‌ ಅಲಿ ಇಂಗ್ಲೆಂಡಿಗೆ ಮೇಲುಗೈ ಒದಗಿಸಿದರು. ಈ ಅವಳಿ ಆಘಾತದಿಂದ ಬಾಂಗ್ಲಾ ಚೇತರಿಸಿಕೊಳ್ಳಲೇ ಇಲ್ಲ.

ಇದನ್ನೂ ಓದಿ:ಟಿ20 ಶ್ರೇಯಾಂಕ: ಕೊಹ್ಲಿ, ರಾಹುಲ್‌ ಕುಸಿತ

ಮಧ್ಯಮ ಕ್ರಮಾಂಕದಲ್ಲಿ ಮುಶ್ಫಿಕರ್‌ ರಹೀಂ (29) ಮತ್ತು ನಾಯಕ ಮಹಮದುಲ್ಲ (19) 37 ರನ್‌ ಜತೆಯಾಟ ನಿಭಾಯಿಸಿದ್ದೇ ಬಾಂಗ್ಲಾದ ಉತ್ತಮ ಸಾಧನೆ ಎನಿಸಿತು. ಮೊಯಿನ್‌ ಅಲಿ 18 ರನ್ನಿತ್ತು 2 ವಿಕೆಟ್‌ ಕಿತ್ತರು. ಪೇಸರ್‌ ಕ್ರಿಸ್‌ ವೋಕ್ಸ್‌ 4 ಓವರ್‌ಗಳಲ್ಲಿ ಕೇವಲ 12 ರನ್‌ ನೀಡಿ ಅಮೋಘ ನಿಯಂತ್ರಣ ಸಾಧಿಸಿದರು. ಡೆತ್‌ ಓವರ್‌ಗಳಲ್ಲಿ 3 ವಿಕೆಟ್‌ ಉರುಳಿಸಿದ ಮಿಲ್ಸ್‌ ಇಂಗ್ಲೆಂಡಿನ ಯಶಸ್ವಿ ಬೌಲರ್‌ ಎನಿಸಿದರು. ಅರೆಕಾಲಿಕ ಸ್ಪಿನ್ನರ್‌ ಲಿವಿಂಗ್‌ಸ್ಟೋನ್‌ ಕೂಡ 2 ವಿಕೆಟ್‌ ಕಿತ್ತು ಬಾಂಗ್ಲಾ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದರು. ಆದರೆ ವೆಸ್ಟ್‌ ಇಂಡೀಸ್‌ ವಿರುದ್ಧ 2 ರನ್ನಿಗೆ 4 ವಿಕೆಟ್‌ ಕೆಡವಿದ ಆದಿಲ್‌ ರಶೀದ್‌ ಇಲ್ಲಿ ವಿಕೆಟ್‌ ಲೆಸ್‌ ಆಗಬೇಕಾಯಿತು. ಅವರು 35 ರನ್‌ ನೀಡಿ ದುಬಾರಿಯಾದರು.

ಸಂಕ್ಷಿಪ್ತ ಸ್ಕೋರ್‌: ಬಾಂಗ್ಲಾ 20 ಓವರ್‌, 124/9 (ಮುಶ್ಫಿಕರ್‌ ರಹೀಂ 29, ಟೈಮಲ್‌ ಮಿಲ್ಸ್‌ 27ಕ್ಕೆ 3, ಲಿಯಮ್‌ ಲಿವಿಂಗ್‌ಸ್ಟೋನ್‌ 15ಕ್ಕೆ 2). ಇಂಗ್ಲೆಂಡ್‌ 14.1 ಓವರ್‌, 126/2 (ಜೇಸನ್‌ ರಾಯ್‌ 61, ಡೇವಿಡ್‌ ಮಾಲನ್‌ 28, ನಾಸಮ್‌ ಅಹ್ಮದ್‌ 26ಕ್ಕೆ 1).

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.